<p><strong>ಚಿಕ್ಕಬಳ್ಳಾಪುರ: </strong>ಅಂತಿಮ ಮತದಾರರ ಪಟ್ಟಿಯ ಅನ್ವಯ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 10,25,648 ಮತದಾರರು ಇದ್ದಾರೆ. ಈ ಪೈಕಿ 5,08,550 ಪುರುಷರು ಹಾಗೂ 5,17,098 ಮಹಿಳೆಯರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮತದಾರರ ಪಟ್ಟಿ ಪ್ರಕಟ ಸಂಬಂಧ ನಡೆದ ಸಭೆಯ ಅಧ್ಯಕ್ಷತೆವಹಿಸಿ ಅಂತಿಮ ಮತದಾರರ ಪಟ್ಟಿಯ ಬಗ್ಗೆ ಮಾಹಿತಿ ನೀಡಿದರು.</p>.<p>ಅಂತಿಮ ಮತದಾರರ ಪಟ್ಟಿಯನ್ನು ಮತದಾರ ನೋಂದಣಾಧಿಕಾರಿ ಕಚೇರಿ, ಸಹಾಯಕ ಮತದಾರ ನೋಂದಣಾಧಿಕಾರಿ ಕಚೇರಿಗಳಲ್ಲಿ ಹಾಗೂ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ ಎಂದರು. </p>.<p>ಮತದಾರರ ಪಟ್ಟಿಗೆ ನಮೂನೆ 6 ರಲ್ಲಿ 26,187 ಮತದಾರರನ್ನು ಸೇರ್ಪಡೆ ಮಾಡಿ, ನಮೂನೆ 7ರಲ್ಲಿ 11,124 ಮತದಾರರನ್ನು ಕೈಬಿಡಲಾಗಿದೆ. ನಮೂನೆಯಲ್ಲಿ 8 ರಲ್ಲಿ 19,601 ತಿದ್ದುಪಡಿಗಳನ್ನು ಮಾಡಲಾಗಿದೆ. ನಮೂನೆ 6ಬಿ ಅನ್ವಯ ಜಿಲ್ಲೆಯ ಶೇ.83.02 ರಷ್ಟು ಮತದಾರರನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಲಾಗಿದೆ ಎಂದು ವಿವರಿಸಿದರು.</p>.<p>ಆಧಾರ್ ಜೋಡಣೆ ಪ್ರಕ್ರಿಯೆಯು ಮುಂದುವರಿಯಲಿದೆ. ನೂತನವಾಗಿ ನೋಂಣಿಯಾಗಿರುವ ಹಾಗೂ ತಿದ್ದುಪಡಿಗೆ ಒಳಪಟ್ಟಿರುವ ಮತದಾರರ ಗುರುತಿನ ಚೀಟಿಯನ್ನು ಸಂಬಂಧಪಟ್ಟ ಮತದಾರರಿಗೆ ಅಂಚೆ ಮೂಲಕ ಕಳುಹಿಸಲಾಗುತ್ತಿದೆ. ಒಟ್ಟು 10,660 ಮತದಾರರ ಗುರುತಿನ ಚೀಟಿಗಳನ್ನು ಶೀಘ್ರವೇ ಅಂಚೆ ಮೂಲಕ ಕಳುಹಿಸಲು ಕ್ರಮವಹಿಸಲಾಗಿದೆ ಎಂದು ಹೇಳಿದರು. </p>.<p><strong>1281 ಮತಗಟ್ಟೆಗಳು:</strong> ಅಂತಿಮ ಮತದಾರ ಪಟ್ಟಿಯಲ್ಲಿ ಜಿಲ್ಲೆಯ ಮತಗಟ್ಟೆಗಳ ಸಂಖ್ಯೆ ಸಹ ಪ್ರಕಟಿಸಲಾಗಿದೆ. ಆ ಪ್ರಕಾರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲು 955 ಗ್ರಾಮಾಂತರ ಪ್ರದೇಶದ ಮತಗಟ್ಟೆಗಳು, 328 ನಗರ ಮತಗಟ್ಟೆಗಳು ಸೇರಿದಂತೆ 1,281 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.</p>.<p>ರಾಜಕೀಯ ಪ್ರತಿನಿಧಿಗಳೊಂದಿಗೆ ಸಭೆ: ಅಂತಿಮ ಮತದಾರರ ಪಟ್ಟಿ ಬಿಡುಗಡೆ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು. ಮತದಾರರ ಪಟ್ಟಿಯ ಅಂಕಿ ಅಂಶಗಳನ್ನು ನೀಡಿದರು.</p>.<p>ಜೊತೆಗೆ ಕರಡು ಮತದಾರರ ಪಟ್ಟಿಗೆ ಸೇರ್ಪಡೆ ಹಾಗೂ ಅಂತಿಮ ಮತದಾರರ ಪಟ್ಟಿಯ ಅಂಕಿ ಅಂಶ ಮತ್ತು ಮಾಹಿತಿಗಳನ್ನು ಮಿಂಚಂಚೆ ಮೂಲಕ ಹಾಗೂ ಭೌತಿಕವಾಗಿ ದಾಖಲೆಗಳನ್ನು ರಾಜಕೀಯ ಪಕ್ಷಗಳ ಕಚೇರಿಗೆ ತಲುಪಿಸಿರುವುದಾಗಿ ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಕೆ.ಎಂ.ಮುನೇಗೌಡ, ಬಿಜೆಪಿ ನಗರ ಘಟಕದ ಅಧ್ಯಕ್ಷ ಬಿ.ವಿ.ಆನಂದ್, ಸಿಪಿಎಂ ಪಕ್ಷದ ಸದಸ್ಯ ಮುನಿಕೃಷ್ಣಪ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ಅಂತಿಮ ಮತದಾರರ ಪಟ್ಟಿಯ ಅನ್ವಯ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 10,25,648 ಮತದಾರರು ಇದ್ದಾರೆ. ಈ ಪೈಕಿ 5,08,550 ಪುರುಷರು ಹಾಗೂ 5,17,098 ಮಹಿಳೆಯರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮತದಾರರ ಪಟ್ಟಿ ಪ್ರಕಟ ಸಂಬಂಧ ನಡೆದ ಸಭೆಯ ಅಧ್ಯಕ್ಷತೆವಹಿಸಿ ಅಂತಿಮ ಮತದಾರರ ಪಟ್ಟಿಯ ಬಗ್ಗೆ ಮಾಹಿತಿ ನೀಡಿದರು.</p>.<p>ಅಂತಿಮ ಮತದಾರರ ಪಟ್ಟಿಯನ್ನು ಮತದಾರ ನೋಂದಣಾಧಿಕಾರಿ ಕಚೇರಿ, ಸಹಾಯಕ ಮತದಾರ ನೋಂದಣಾಧಿಕಾರಿ ಕಚೇರಿಗಳಲ್ಲಿ ಹಾಗೂ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ ಎಂದರು. </p>.<p>ಮತದಾರರ ಪಟ್ಟಿಗೆ ನಮೂನೆ 6 ರಲ್ಲಿ 26,187 ಮತದಾರರನ್ನು ಸೇರ್ಪಡೆ ಮಾಡಿ, ನಮೂನೆ 7ರಲ್ಲಿ 11,124 ಮತದಾರರನ್ನು ಕೈಬಿಡಲಾಗಿದೆ. ನಮೂನೆಯಲ್ಲಿ 8 ರಲ್ಲಿ 19,601 ತಿದ್ದುಪಡಿಗಳನ್ನು ಮಾಡಲಾಗಿದೆ. ನಮೂನೆ 6ಬಿ ಅನ್ವಯ ಜಿಲ್ಲೆಯ ಶೇ.83.02 ರಷ್ಟು ಮತದಾರರನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಲಾಗಿದೆ ಎಂದು ವಿವರಿಸಿದರು.</p>.<p>ಆಧಾರ್ ಜೋಡಣೆ ಪ್ರಕ್ರಿಯೆಯು ಮುಂದುವರಿಯಲಿದೆ. ನೂತನವಾಗಿ ನೋಂಣಿಯಾಗಿರುವ ಹಾಗೂ ತಿದ್ದುಪಡಿಗೆ ಒಳಪಟ್ಟಿರುವ ಮತದಾರರ ಗುರುತಿನ ಚೀಟಿಯನ್ನು ಸಂಬಂಧಪಟ್ಟ ಮತದಾರರಿಗೆ ಅಂಚೆ ಮೂಲಕ ಕಳುಹಿಸಲಾಗುತ್ತಿದೆ. ಒಟ್ಟು 10,660 ಮತದಾರರ ಗುರುತಿನ ಚೀಟಿಗಳನ್ನು ಶೀಘ್ರವೇ ಅಂಚೆ ಮೂಲಕ ಕಳುಹಿಸಲು ಕ್ರಮವಹಿಸಲಾಗಿದೆ ಎಂದು ಹೇಳಿದರು. </p>.<p><strong>1281 ಮತಗಟ್ಟೆಗಳು:</strong> ಅಂತಿಮ ಮತದಾರ ಪಟ್ಟಿಯಲ್ಲಿ ಜಿಲ್ಲೆಯ ಮತಗಟ್ಟೆಗಳ ಸಂಖ್ಯೆ ಸಹ ಪ್ರಕಟಿಸಲಾಗಿದೆ. ಆ ಪ್ರಕಾರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲು 955 ಗ್ರಾಮಾಂತರ ಪ್ರದೇಶದ ಮತಗಟ್ಟೆಗಳು, 328 ನಗರ ಮತಗಟ್ಟೆಗಳು ಸೇರಿದಂತೆ 1,281 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.</p>.<p>ರಾಜಕೀಯ ಪ್ರತಿನಿಧಿಗಳೊಂದಿಗೆ ಸಭೆ: ಅಂತಿಮ ಮತದಾರರ ಪಟ್ಟಿ ಬಿಡುಗಡೆ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು. ಮತದಾರರ ಪಟ್ಟಿಯ ಅಂಕಿ ಅಂಶಗಳನ್ನು ನೀಡಿದರು.</p>.<p>ಜೊತೆಗೆ ಕರಡು ಮತದಾರರ ಪಟ್ಟಿಗೆ ಸೇರ್ಪಡೆ ಹಾಗೂ ಅಂತಿಮ ಮತದಾರರ ಪಟ್ಟಿಯ ಅಂಕಿ ಅಂಶ ಮತ್ತು ಮಾಹಿತಿಗಳನ್ನು ಮಿಂಚಂಚೆ ಮೂಲಕ ಹಾಗೂ ಭೌತಿಕವಾಗಿ ದಾಖಲೆಗಳನ್ನು ರಾಜಕೀಯ ಪಕ್ಷಗಳ ಕಚೇರಿಗೆ ತಲುಪಿಸಿರುವುದಾಗಿ ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಕೆ.ಎಂ.ಮುನೇಗೌಡ, ಬಿಜೆಪಿ ನಗರ ಘಟಕದ ಅಧ್ಯಕ್ಷ ಬಿ.ವಿ.ಆನಂದ್, ಸಿಪಿಎಂ ಪಕ್ಷದ ಸದಸ್ಯ ಮುನಿಕೃಷ್ಣಪ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>