<p><strong>ಚಿಂತಾಮಣಿ</strong>: ನಗರದ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ರೈತರಿಗೆ ಗೂಡಿನ ಮೊತ್ತವನ್ನು ಆನ್ಲೈನ್, ವೈ.ಫೈ ಪೇಮಂಟ್ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಮಾರುಕಟ್ಟೆಯ ರೀಲರ್ಸ್ ಸಂಘವು ಬುಧವಾರ ರೇಷ್ಮೆ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ.</p>.<p>ನಗರದ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ 2 ತಿಂಗಳ ಹಿಂದೆ ಸರ್ವರ್ ಮೂಲಕ ರೈತರ ಗೂಡಿನ ಮಾರಾಟದ ಮೊತ್ತವನ್ನು ನೇರವಾಗಿ ಅವರ ಉಳಿತಾಯ ಖಾತೆಗಳಿಗೆ ಜಮಾ ಮಾಡಲಾಗುತ್ತಿತ್ತು. ಇತ್ತೀಚೆಗೆ ಸರ್ವರ್ ಪದೇ ಪದೇ ಕೈಕೊಡುತ್ತಿರುವ ಕಾರಣ ರೀಲರ್ಸ್ ಮತ್ತು ರೈತರಿಗೂ ತೊಂದರೆ ಆಗುತ್ತಿದೆ ಎಂದು ಮನವಿಯಲ್ಲಿ ತಿಳಿಸಿದೆ.</p>.<p>ನಗರದ ರೇಷ್ಮೆಗೂಡಿನ ಮಾರುಕಟ್ಟೆಗೆ ಇತ್ತೀಚೆಗೆ ಹೆಚ್ಚಿನ ಲಾಟ್ಗಳು ಮಾರಾಟಕ್ಕೆ ಬರುತ್ತವೆ. ಶಿಡ್ಲಘಟ್ಟ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಇರುವ ಎಲ್ಲ ಸೌಲಭ್ಯಗಳನ್ನು ಇಲ್ಲಿಯೂ ಒದಗಿಸಬೇಕು. ರೈತರ ಖಾತೆಗಳಿಗೆ ನೇರ ಪಾವತಿ ಮಾಡಿದರೆ ರೀಲರ್ಸ್ ಮತ್ತು ರೈತರಿಗೂ ಅನುಕೂಲವಾಗುತ್ತದೆ. ಒಂದು ತಿಂಗಳ ಹಿಂದೆಯೇ ಈ ಬಗ್ಗೆ ಮನವಿ ಸಲ್ಲಿಸಿದ್ದರೂ ಕ್ರಮಕೈಗೊಂಡಿಲ್ಲ. ಆದಷ್ಟು ಬೇಗ ನ್ಯೂನತೆ ಸರಿಪಡಿಸಬೇಕು ಮತ್ತು ನ್ಯಾಯವಾದ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟದ ಮಾರ್ಗ ಅನಿವಾರ್ಯವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ನಗರದ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ರೈತರಿಗೆ ಗೂಡಿನ ಮೊತ್ತವನ್ನು ಆನ್ಲೈನ್, ವೈ.ಫೈ ಪೇಮಂಟ್ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಮಾರುಕಟ್ಟೆಯ ರೀಲರ್ಸ್ ಸಂಘವು ಬುಧವಾರ ರೇಷ್ಮೆ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ.</p>.<p>ನಗರದ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ 2 ತಿಂಗಳ ಹಿಂದೆ ಸರ್ವರ್ ಮೂಲಕ ರೈತರ ಗೂಡಿನ ಮಾರಾಟದ ಮೊತ್ತವನ್ನು ನೇರವಾಗಿ ಅವರ ಉಳಿತಾಯ ಖಾತೆಗಳಿಗೆ ಜಮಾ ಮಾಡಲಾಗುತ್ತಿತ್ತು. ಇತ್ತೀಚೆಗೆ ಸರ್ವರ್ ಪದೇ ಪದೇ ಕೈಕೊಡುತ್ತಿರುವ ಕಾರಣ ರೀಲರ್ಸ್ ಮತ್ತು ರೈತರಿಗೂ ತೊಂದರೆ ಆಗುತ್ತಿದೆ ಎಂದು ಮನವಿಯಲ್ಲಿ ತಿಳಿಸಿದೆ.</p>.<p>ನಗರದ ರೇಷ್ಮೆಗೂಡಿನ ಮಾರುಕಟ್ಟೆಗೆ ಇತ್ತೀಚೆಗೆ ಹೆಚ್ಚಿನ ಲಾಟ್ಗಳು ಮಾರಾಟಕ್ಕೆ ಬರುತ್ತವೆ. ಶಿಡ್ಲಘಟ್ಟ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಇರುವ ಎಲ್ಲ ಸೌಲಭ್ಯಗಳನ್ನು ಇಲ್ಲಿಯೂ ಒದಗಿಸಬೇಕು. ರೈತರ ಖಾತೆಗಳಿಗೆ ನೇರ ಪಾವತಿ ಮಾಡಿದರೆ ರೀಲರ್ಸ್ ಮತ್ತು ರೈತರಿಗೂ ಅನುಕೂಲವಾಗುತ್ತದೆ. ಒಂದು ತಿಂಗಳ ಹಿಂದೆಯೇ ಈ ಬಗ್ಗೆ ಮನವಿ ಸಲ್ಲಿಸಿದ್ದರೂ ಕ್ರಮಕೈಗೊಂಡಿಲ್ಲ. ಆದಷ್ಟು ಬೇಗ ನ್ಯೂನತೆ ಸರಿಪಡಿಸಬೇಕು ಮತ್ತು ನ್ಯಾಯವಾದ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟದ ಮಾರ್ಗ ಅನಿವಾರ್ಯವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>