<p><strong>ಚಿಕ್ಕಬಳ್ಳಾಪುರ</strong>: ನಗರದ ಹೊರವಲಯದ ನಂದಿ ಕ್ರಾಸ್ ಬಳಿಯ ತೋಟಗಾರಿಕಾ ಇಲಾಖೆಗೆ ಸೇರಿದ 20 ಎಕರೆ ಜಮೀನನ್ನು ಹೂ ಮಾರುಕಟ್ಟೆ ನಿರ್ಮಾಣಕ್ಕೆ ಸರ್ಕಾರ ಮಂಜೂರು ಮಾಡಿದೆ. </p>.<p>ಈ ಮೂಲಕ ಸುಸಜ್ಜಿತ ಹೂ ಮಾರುಕಟ್ಟೆ ನಿರ್ಮಾಣಕ್ಕೆ ಹೆಜ್ಜೆ ಇಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಪ್ರಯತ್ನದ ಫಲವಾಗಿ ಈ ಜಾಗ ದೊರೆತಿದೆ.</p>.<p>ಚಿಕ್ಕಬಳ್ಳಾಪುರ ತಾಲ್ಲೂಕಿನ ರೈತರಷ್ಟೇ ಅಲ್ಲ ದೇವನಹಳ್ಳಿ ತಾಲ್ಲೂಕಿನ ರೈತರೂ ಈ ಮಾರುಕಟ್ಟೆಗೆ ಬರುವ ಅವಕಾಶಗಳು ಹೆಚ್ಚಿವೆ. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡು ಈ ಜಮೀನು ಇರುವ ಕಾರಣ ಹೂ ಮಾರುಕಟ್ಟೆಗೆ ಪ್ರಶಸ್ತವಾದ ಸ್ಥಳವಾಗಿದೆ.</p>.<p>ಹೂವು ಮಾರುಕಟ್ಟೆ ನಿರ್ಮಾಣಕ್ಕೆ ಈ ಹಿಂದೆ ಅಗಲಗುರ್ಕಿ ಗ್ರಾಮದ ಸರ್ವೆ ನಂ 122ರಲ್ಲಿ 9.05 ಎಕರೆ ಜಮೀನನ್ನು ಜಿಲ್ಲಾಡಳಿತ ಮಂಜೂರು ಮಾಡಿತ್ತು. ಅಂದಿನ ಸಚಿವ ಡಾ.ಕೆ.ಸುಧಾಕರ್ ಅವರು ಈ ಮಾರುಕಟ್ಟೆಗೆ ಜಮೀನು ದೊರಕಿಸಿಕೊಟ್ಟಿದ್ದರು. ಆದರೆ ಡಾ.ಎಂ.ಸಿ.ಸುಧಾಕರ್ ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಅಗಲಗುರ್ಕಿ ಗ್ರಾಮದ ಸರ್ವೆ ನಂ 122ರ ಜಮೀನಿಗೆ ಸೂಕ್ತ ರಸ್ತೆ ಇಲ್ಲ. ಜಾಗವೂ ಸಮತಟ್ಟಾಗಿಲ್ಲ. ಆದ ಕಾರಣ ಆ ಜಾಗದ ಬದಲು ಬೇರೊಂದು ಜಾಗದಲ್ಲಿ ಮಾರುಕಟ್ಟೆ ನಿರ್ಮಿಸಬೇಕು ಎಂದು ತೀರ್ಮಾನಿಸಿದ್ದರು. </p>.<p>ಆ ಪ್ರಕಾರ ಜಾಗಕ್ಕೂ ಹುಡುಕಾಟ ನಡೆದಿತ್ತು. ನಂದಿಕ್ರಾಸ್ ಬಳಿಯ ತೋಟಗಾರಿಕಾ ಇಲಾಖೆ ಜಮೀನನ್ನು ಮಾರುಕಟ್ಟೆಗೆ ದೊರಕಿಸಿಕೊಡುವಂತೆ ಪ್ರಸ್ತಾವ ಸಹ ಸಲ್ಲಿಸಲಾಗಿತ್ತು. ಈಗ ತೋಟಗಾರಿಕೆ ಇಲಾಖೆಯ 20 ಎಕರೆಯನ್ನು ಹೂ ಮಾರುಕಟ್ಟೆಗೆ ನೀಡಲಾಗಿದೆ. </p>.<p>ಸದ್ಯ ಜಿಲ್ಲಾ ತೋಟಗಾರಿಕಾ ಇಲಾಖೆ ಉಪನಿರ್ದೇಶಕರ ಕಚೇರಿಯನ್ನು ಒಳಗೊಂಡ ಸಸ್ಯ ಕ್ಷೇತ್ರವು 48 ಎಕರೆ ವಿಸ್ತೀರ್ಣವನ್ನು ಹೊಂದಿದೆ. </p>.<p>‘ಈ ಹಿಂದೆ, ಹೂವಿನ ಮಾರುಕಟ್ಟೆಗೆ ಅವೈಜ್ಞಾನಿಕವಾಗಿ ಗುರುತಿಸಲಾಗಿದ್ದ ಸಂಪರ್ಕವಿಲ್ಲದ ಕಲ್ಲು ಬಂಡೆಯಿಂದ ಕೂಡಿದ್ದ ಸ್ಥಳಕ್ಕೆ ಪರ್ಯಾಯವಾಗಿ ಉತ್ತಮ ಸಂಪರ್ಕ, ಭವಿಷ್ಯದ ಅಭಿವೃದ್ದಿ ದೃಷ್ಟಿಯಿಂದ 20 ಎಕರೆ ಜಮೀನನ್ನು ಹೂವಿನ ಮಾರುಕಟ್ಟೆಗಾಗಿ ಮಂಜೂರು ಮಾಡಿಸಲಾಗಿದೆ’ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. </p>.<p>‘ಜಿಲ್ಲೆಯ ಹೂ ಬೆಳೆಗಾರರು, ವರ್ತಕರ ಪರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ, ಡಿ.ಕೆ ಶಿವಕುಮಾರ್, ತೋಟಗಾರಿಕೆ ಮತ್ತು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಧನ್ಯವಾದಗಳು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ನಗರದ ಹೊರವಲಯದ ನಂದಿ ಕ್ರಾಸ್ ಬಳಿಯ ತೋಟಗಾರಿಕಾ ಇಲಾಖೆಗೆ ಸೇರಿದ 20 ಎಕರೆ ಜಮೀನನ್ನು ಹೂ ಮಾರುಕಟ್ಟೆ ನಿರ್ಮಾಣಕ್ಕೆ ಸರ್ಕಾರ ಮಂಜೂರು ಮಾಡಿದೆ. </p>.<p>ಈ ಮೂಲಕ ಸುಸಜ್ಜಿತ ಹೂ ಮಾರುಕಟ್ಟೆ ನಿರ್ಮಾಣಕ್ಕೆ ಹೆಜ್ಜೆ ಇಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಪ್ರಯತ್ನದ ಫಲವಾಗಿ ಈ ಜಾಗ ದೊರೆತಿದೆ.</p>.<p>ಚಿಕ್ಕಬಳ್ಳಾಪುರ ತಾಲ್ಲೂಕಿನ ರೈತರಷ್ಟೇ ಅಲ್ಲ ದೇವನಹಳ್ಳಿ ತಾಲ್ಲೂಕಿನ ರೈತರೂ ಈ ಮಾರುಕಟ್ಟೆಗೆ ಬರುವ ಅವಕಾಶಗಳು ಹೆಚ್ಚಿವೆ. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡು ಈ ಜಮೀನು ಇರುವ ಕಾರಣ ಹೂ ಮಾರುಕಟ್ಟೆಗೆ ಪ್ರಶಸ್ತವಾದ ಸ್ಥಳವಾಗಿದೆ.</p>.<p>ಹೂವು ಮಾರುಕಟ್ಟೆ ನಿರ್ಮಾಣಕ್ಕೆ ಈ ಹಿಂದೆ ಅಗಲಗುರ್ಕಿ ಗ್ರಾಮದ ಸರ್ವೆ ನಂ 122ರಲ್ಲಿ 9.05 ಎಕರೆ ಜಮೀನನ್ನು ಜಿಲ್ಲಾಡಳಿತ ಮಂಜೂರು ಮಾಡಿತ್ತು. ಅಂದಿನ ಸಚಿವ ಡಾ.ಕೆ.ಸುಧಾಕರ್ ಅವರು ಈ ಮಾರುಕಟ್ಟೆಗೆ ಜಮೀನು ದೊರಕಿಸಿಕೊಟ್ಟಿದ್ದರು. ಆದರೆ ಡಾ.ಎಂ.ಸಿ.ಸುಧಾಕರ್ ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಅಗಲಗುರ್ಕಿ ಗ್ರಾಮದ ಸರ್ವೆ ನಂ 122ರ ಜಮೀನಿಗೆ ಸೂಕ್ತ ರಸ್ತೆ ಇಲ್ಲ. ಜಾಗವೂ ಸಮತಟ್ಟಾಗಿಲ್ಲ. ಆದ ಕಾರಣ ಆ ಜಾಗದ ಬದಲು ಬೇರೊಂದು ಜಾಗದಲ್ಲಿ ಮಾರುಕಟ್ಟೆ ನಿರ್ಮಿಸಬೇಕು ಎಂದು ತೀರ್ಮಾನಿಸಿದ್ದರು. </p>.<p>ಆ ಪ್ರಕಾರ ಜಾಗಕ್ಕೂ ಹುಡುಕಾಟ ನಡೆದಿತ್ತು. ನಂದಿಕ್ರಾಸ್ ಬಳಿಯ ತೋಟಗಾರಿಕಾ ಇಲಾಖೆ ಜಮೀನನ್ನು ಮಾರುಕಟ್ಟೆಗೆ ದೊರಕಿಸಿಕೊಡುವಂತೆ ಪ್ರಸ್ತಾವ ಸಹ ಸಲ್ಲಿಸಲಾಗಿತ್ತು. ಈಗ ತೋಟಗಾರಿಕೆ ಇಲಾಖೆಯ 20 ಎಕರೆಯನ್ನು ಹೂ ಮಾರುಕಟ್ಟೆಗೆ ನೀಡಲಾಗಿದೆ. </p>.<p>ಸದ್ಯ ಜಿಲ್ಲಾ ತೋಟಗಾರಿಕಾ ಇಲಾಖೆ ಉಪನಿರ್ದೇಶಕರ ಕಚೇರಿಯನ್ನು ಒಳಗೊಂಡ ಸಸ್ಯ ಕ್ಷೇತ್ರವು 48 ಎಕರೆ ವಿಸ್ತೀರ್ಣವನ್ನು ಹೊಂದಿದೆ. </p>.<p>‘ಈ ಹಿಂದೆ, ಹೂವಿನ ಮಾರುಕಟ್ಟೆಗೆ ಅವೈಜ್ಞಾನಿಕವಾಗಿ ಗುರುತಿಸಲಾಗಿದ್ದ ಸಂಪರ್ಕವಿಲ್ಲದ ಕಲ್ಲು ಬಂಡೆಯಿಂದ ಕೂಡಿದ್ದ ಸ್ಥಳಕ್ಕೆ ಪರ್ಯಾಯವಾಗಿ ಉತ್ತಮ ಸಂಪರ್ಕ, ಭವಿಷ್ಯದ ಅಭಿವೃದ್ದಿ ದೃಷ್ಟಿಯಿಂದ 20 ಎಕರೆ ಜಮೀನನ್ನು ಹೂವಿನ ಮಾರುಕಟ್ಟೆಗಾಗಿ ಮಂಜೂರು ಮಾಡಿಸಲಾಗಿದೆ’ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. </p>.<p>‘ಜಿಲ್ಲೆಯ ಹೂ ಬೆಳೆಗಾರರು, ವರ್ತಕರ ಪರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ, ಡಿ.ಕೆ ಶಿವಕುಮಾರ್, ತೋಟಗಾರಿಕೆ ಮತ್ತು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಧನ್ಯವಾದಗಳು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>