ಹೆದ್ದಾರಿ 7ರಲ್ಲಿ ಬಾಗೇಪಲ್ಲಿಯಿಂದ ಬೆಂಗಳೂರಿನ ಕಡೆಗೆ ಅಕ್ರಮವಾಗಿ ರಕ್ತಚಂದನದ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ವಲಯ ಅರಣ್ಯಾಧಿಕಾರಿ ವಿಕ್ರಮ್ ನೇತೃತ್ವದ ತಂಡ ನಗರದ ಹೊರವಲಯದ ಚದುಲಪುರ ಕ್ರಾಸ್ ಬಳಿ ಬೆಳಿಗ್ಗೆ 8.30ರ ಸುಮಾರಿಗೆ ಕಾರ್ಯಚರಣೆಗೆ ಸಿದ್ಧತೆ ಮಾಡಿಕೊಂಡಿತ್ತು. ದೂರದಿಂದಲೇ ಅರಣ್ಯ ಇಲಾಖೆ ಸಿಬ್ಬಂದಿ ಕಂಡ ಇಬ್ಬರು ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ.