ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ‘ಚಿಲುಮೆ’ ಅಳವಡಿಸಿಕೊಂಡರೆ ₹5,000 ಪ್ರೋತ್ಸಾಹಧನ

ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ನೂತನ ಯೋಜನೆಗೆ ಚಾಲನೆ
Last Updated 10 ಸೆಪ್ಟೆಂಬರ್ 2020, 1:09 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಸುಸಜ್ಜಿತ ಪಶು ಚಿಕಿತ್ಸಾ ವಾಹನ ಹಾಗೂ ಮಳೆನೀರು ಸಂಗ್ರಹ ಕುರಿತಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಚಿಲುಮೆ ವಾಹನಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಬುಧವಾರ ಚಾಲನೆ ನೀಡಿದರು.

ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಮುಂದಿನ ದಿನಗಳಲ್ಲಿ ನೀರಿಗೆ ತೊಂದರೆ ಆಗದಂತೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಜಾಗೃತಿ ಅಭಿಯಾನ ಅತ್ಯಂತ ಮಹತ್ವದ್ದಾಗಿದೆ. ಪಶು ಚಿಕಿತ್ಸಾ ವಾಹನದ ಮೂಲಕ ಅಗತ್ಯವಿರುವ ಸ್ಥಳಗಳಿಗೆ ತೆರಳಿ ಪಶು ವೈದ್ಯರು ಚಿಕಿತ್ಸೆ ನೀಡಬಹುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.

ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರತಿ ಮನೆಗೆ ಮಳೆನೀರು ಸಂಗ್ರಹ ಅಳವಡಿಸುವ ಯೋಜನೆಗೆ ‘ಚಿಲುಮೆ’ ಎಂದು ಮರುನಾಮಕರಣ ಮಾಡಿಡಲಾಗಿದೆ. ‘ನೀರಿಗಾಗಿ ಒಂದಾಗಿ’ ಎಂಬ ಧ್ಯೇಯವಾಕ್ಯದೊಂದಿಗೆ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಲ್ಲಿ ಈಗಾಗಲೇ ಲಭ್ಯವಿರುವ ಸಂಪ್‍ಗಳಿಗೆ ನೀರು ಸಂಗ್ರಹಿಸಬಹುದು ಅಥವಾ ಇಂಗು ಗುಂಡಿಗಳನ್ನು ನಿರ್ಮಿಸಬಹುದು. ಈ ಯೋಜನೆ ಅಳವಡಿಸಿಕೊಳ್ಳುವ ಮನೆ ಮಾಲೀಕರಿಗೆ ₹5000 ಪ್ರೋತ್ಸಾಹ ಧನ ನೀಡಲಾಗುವುದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್, ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಮಧುರ ನಾಥ ರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಣುಕಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT