ಕಾರ್ಯಕ್ರಮದಲ್ಲಿ ಸಮೂಹ ಗಾಯನ, ಹಾಡುಗಾರಿಕೆ, ಏಕಪಾತ್ರಾಭಿನಯ ಮುಂತಾದ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ಇತ್ತೀಚೆಗೆ ನಿಧನರಾದ ದತ್ತಿ ಸದಸ್ಯ ಎ. ಕೊಂಡಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ದತ್ತಿ ಸದಸ್ಯರಾದ ನಿರ್ಮಲಾ ಪ್ರಭು, ವಿಜಯಲಕ್ಷ್ಮಿ, ಲಕ್ಷ್ಮಣಸ್ವಾಮಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಎಂ.ನಾರಾಯಣಸ್ವಾಮಿ ಉಪಸ್ಥಿತರಿದ್ದರು.