<p>ಚಿಂತಾಮಣಿ: ನಗರ ಹಾಗೂ ತಾಲ್ಲೂಕಿನಾದ್ಯಂತ ಬುಧವಾರ ಗಣೇಶ ಹಬ್ಬವನ್ನು ಶ್ರದ್ಧಾ ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಹಗಲು-ರಾತ್ರಿಯೆನ್ನದೆ ಬಿಡದೆ ಸುರಿಯುತ್ತಿರುವ ಮಳೆಯಲ್ಲೇ ಗಣೇಶೋತ್ಸವ ಆಚರಣೆ ನಡೆಯಿತು.</p>.<p>ತಾಲ್ಲೂಕಿನಲ್ಲಿ ಕಳೆದೆರಡು ವರ್ಷಗಳಿಂದ ಉತ್ತಮ ಮಳೆ-ಬೆಳೆಯಾಗುತ್ತಿದೆ. ಕೆರೆ ಕುಂಟೆಗಳು ತುಂಬಿ ಕೃಷಿಕರಲ್ಲಿ ಸಂತಸ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಜನರು ಈ ವರ್ಷಶ್ರದ್ಧೆ ಮತ್ತು ಭಕ್ತಿಯಿಂದ ಹಬ್ಬ ಆಚರಿಸಲಾಯಿತು.</p>.<p>ಬುಧವಾರ ಜನರು ಹೊಸ ಉಡುಗೆಗಳನ್ನು ತೊಟ್ಟು ಸಂಭ್ರಮಿಸಿದರು. ಮನೆಗಳನ್ನು ಬೆಳಿಗ್ಗೆಯಿಂದಲೇ ಮಹಿಳೆಯರು ಸ್ವಚ್ಛಗೊಳಿಸಿ, ಮನೆಯ ಅಂಗಳ ಹಾಗೂ ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನು ಬಿಡಿಸಿದ್ದರು.</p>.<p>ಮನೆಗಳಲ್ಲಿ ಸಣ್ಣ ಗಾತ್ರದ ಗಣೇಶಗಳನ್ನು ಪ್ರತಿಷ್ಠಾಪಿಸಿ ಹೂವು ಹಾಗೂ ವಿದ್ಯುತ್ ದೀಪಗಳಿಂದವಿಶೇಷ ಅಲಂಕಾರ ಮಾಡಲಾಗಿತ್ತು. ಕಡುಬು ಮತ್ತು ವಿವಿಧ ಹಣ್ಣುಗಳನ್ನು ನೈವೇದ್ಯಕ್ಕೆ ಇಟ್ಟು ಪೂಜೆ ಸಲ್ಲಿಸಿದರು.</p>.<p>ಚುನಾವಣೆಯ ವರ್ಷವಾಗಿರುವುದರಿಂದ ರಾಜಕಾರಣಿಗಳು ಸಮಾಜ ಸೇವೆಯ ಹೆಸರಿನಲ್ಲಿ ಗಾಮ್ರ ಗ್ರಾಮಗಳಿಗೂ ಉಚಿತವಾಗಿ ಗಣಪತಿಗಳನ್ನು ಉಚಿತವಾಗಿ ನೀಡಿದ್ದರು.</p>.<p>ವಿವಿಧ ಸಂಘಸಂಸ್ಥೆಗಳು, ಯುವಕರ ಸಂಘಗಳು ಸಾರ್ವಜನಿಕ ಸ್ಥಳಗಳಲ್ಲಿ ಪೆಂಡಾಲ್ ಹಾಕಿ ದೊಡ್ಡ ದೊಡ್ಡ ಗಣಪತಿಗಳನ್ನು ಪ್ರತಿಷ್ಠಾಪಿಸಿದ್ದರು. ಪೆಂಡಾಲ್ ಒಳಗಡೆ ಗಣಪತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಅಲಂಕಾರ, ಪೂಜೆ ನೆರವೇರಿಸಿ ಪ್ರಸಾದವನ್ನು ವಿತರಣೆ ಮಾಡಿದರು.</p>.<p>ಸಂಜೆ ಜನರು ಗುಂಪು ಗುಂಪುಗಳಲ್ಲಿ ಗಣಪತಿ ದೇವಾಲಯಗಳು ಹಾಗೂ ಸಾರ್ವಜನಿಕವಾಗಿ ಗಣೇಶ ಇರುವಸ್ಥಳಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುವ ದೃಶ್ಯಗಳು ಕಂಡುಬಂದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ನಗರ ಹಾಗೂ ತಾಲ್ಲೂಕಿನಾದ್ಯಂತ ಬುಧವಾರ ಗಣೇಶ ಹಬ್ಬವನ್ನು ಶ್ರದ್ಧಾ ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಹಗಲು-ರಾತ್ರಿಯೆನ್ನದೆ ಬಿಡದೆ ಸುರಿಯುತ್ತಿರುವ ಮಳೆಯಲ್ಲೇ ಗಣೇಶೋತ್ಸವ ಆಚರಣೆ ನಡೆಯಿತು.</p>.<p>ತಾಲ್ಲೂಕಿನಲ್ಲಿ ಕಳೆದೆರಡು ವರ್ಷಗಳಿಂದ ಉತ್ತಮ ಮಳೆ-ಬೆಳೆಯಾಗುತ್ತಿದೆ. ಕೆರೆ ಕುಂಟೆಗಳು ತುಂಬಿ ಕೃಷಿಕರಲ್ಲಿ ಸಂತಸ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಜನರು ಈ ವರ್ಷಶ್ರದ್ಧೆ ಮತ್ತು ಭಕ್ತಿಯಿಂದ ಹಬ್ಬ ಆಚರಿಸಲಾಯಿತು.</p>.<p>ಬುಧವಾರ ಜನರು ಹೊಸ ಉಡುಗೆಗಳನ್ನು ತೊಟ್ಟು ಸಂಭ್ರಮಿಸಿದರು. ಮನೆಗಳನ್ನು ಬೆಳಿಗ್ಗೆಯಿಂದಲೇ ಮಹಿಳೆಯರು ಸ್ವಚ್ಛಗೊಳಿಸಿ, ಮನೆಯ ಅಂಗಳ ಹಾಗೂ ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನು ಬಿಡಿಸಿದ್ದರು.</p>.<p>ಮನೆಗಳಲ್ಲಿ ಸಣ್ಣ ಗಾತ್ರದ ಗಣೇಶಗಳನ್ನು ಪ್ರತಿಷ್ಠಾಪಿಸಿ ಹೂವು ಹಾಗೂ ವಿದ್ಯುತ್ ದೀಪಗಳಿಂದವಿಶೇಷ ಅಲಂಕಾರ ಮಾಡಲಾಗಿತ್ತು. ಕಡುಬು ಮತ್ತು ವಿವಿಧ ಹಣ್ಣುಗಳನ್ನು ನೈವೇದ್ಯಕ್ಕೆ ಇಟ್ಟು ಪೂಜೆ ಸಲ್ಲಿಸಿದರು.</p>.<p>ಚುನಾವಣೆಯ ವರ್ಷವಾಗಿರುವುದರಿಂದ ರಾಜಕಾರಣಿಗಳು ಸಮಾಜ ಸೇವೆಯ ಹೆಸರಿನಲ್ಲಿ ಗಾಮ್ರ ಗ್ರಾಮಗಳಿಗೂ ಉಚಿತವಾಗಿ ಗಣಪತಿಗಳನ್ನು ಉಚಿತವಾಗಿ ನೀಡಿದ್ದರು.</p>.<p>ವಿವಿಧ ಸಂಘಸಂಸ್ಥೆಗಳು, ಯುವಕರ ಸಂಘಗಳು ಸಾರ್ವಜನಿಕ ಸ್ಥಳಗಳಲ್ಲಿ ಪೆಂಡಾಲ್ ಹಾಕಿ ದೊಡ್ಡ ದೊಡ್ಡ ಗಣಪತಿಗಳನ್ನು ಪ್ರತಿಷ್ಠಾಪಿಸಿದ್ದರು. ಪೆಂಡಾಲ್ ಒಳಗಡೆ ಗಣಪತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಅಲಂಕಾರ, ಪೂಜೆ ನೆರವೇರಿಸಿ ಪ್ರಸಾದವನ್ನು ವಿತರಣೆ ಮಾಡಿದರು.</p>.<p>ಸಂಜೆ ಜನರು ಗುಂಪು ಗುಂಪುಗಳಲ್ಲಿ ಗಣಪತಿ ದೇವಾಲಯಗಳು ಹಾಗೂ ಸಾರ್ವಜನಿಕವಾಗಿ ಗಣೇಶ ಇರುವಸ್ಥಳಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುವ ದೃಶ್ಯಗಳು ಕಂಡುಬಂದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>