<p><strong>ಶಿಡ್ಲಘಟ್ಟ: </strong>‘ಸಮಾಜದಲ್ಲಿ ಅತಿಹೆಚ್ಚು ಗೌರವ ಹಾಗೂ ಘನತೆಗೆ ಪಾತ್ರವಾಗಿರುವ ಶಿಕ್ಷಣ ವ್ಯವಸ್ಥೆ ಹಾಗೂ ಶಿಕ್ಷಕರನ್ನು ಪ್ರತಿಯೊಬ್ಬರು ಗೌರವಿಸಬೇಕು’ ಎಂದು ಶಾಸಕ ವಿ. ಮುನಿಯಪ್ಪ ಹೇಳಿದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಗರ ಹೊರವಲಯದ ಹನುಮಂತಪುರ ಗೇಟ್ ಬಳಿಯಿರುವ ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ಭಾನುವಾರ ಆರೋಜಿಸಲಾಗಿದ್ದ ಭಾರತ ರತ್ನ ಎಸ್. ರಾಧಾಕೃಷ್ಣನ್ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಣ ಕ್ಷೇತ್ರ ಹೊರತುಪಡಿಸಿ ಬೇರಾವುದೇ ಕ್ಷೇತ್ರದಿಂದ ಸಮಾಜದಲ್ಲಿ ಪರಿವರ್ತನೆ ಹಾಗೂ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಶಿಕ್ಷಕರು ಕೇವಲ ಪಾಠ ಕಲಿಸುವುದಷ್ಟೇ ಅಲ್ಲದೆ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಡೆಗೆ ಹೆಚ್ಚಿನ ಚಿಂತನೆ ನಡೆಸಬೇಕು ಎಂದರು.</p>.<p>ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿದ್ದ ಗುರುಭವನ ನಿರ್ಮಾಣ ಮಾಡಲು ಶಾಸಕರ ನಿಧಿಯಿಂದ ₹ 25 ಲಕ್ಷ ನೀಡುವ ಭರವಸೆ ನೀಡಿದ ಅವರು, ಮೊದಲನೇ ಕಂತಿನ ₹ 15 ಲಕ್ಷವನ್ನು ಮುಂದಿನ ತಿಂಗಳು ನೀಡಲಿದ್ದು, ಉಳಿದ ಹಣವನ್ನು ಮುಂದಿನ ಮಾರ್ಚ್ ತಿಂಗಳ ನಂತರ ನೀಡಲಾಗುವುದು. ಗುರುಭವನ ನಿರ್ಮಾಣಕ್ಕೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.</p>.<p>ತಹಶೀಲ್ದಾರ್ ಬಿ.ಎಸ್. ರಾಜೀವ್ ಮಾತನಾಡಿ, ರಾಧಾಕೃಷ್ಣನ್ ಅವರು ಪ್ರತಿಯೊಬ್ಬ ಶಿಕ್ಷಕರಿಗೆ ಆದರ್ಶ ವ್ಯಕ್ತಿಯಾಗಿರಬೇಕು. ಬಡತನದ ನಡುವೆಯೂ ಅವರು ಮಾಡಿದ ಅಪಾರವಾದ ಸಾಧನೆಗಳೇ ಪ್ರೇರಣೆಯಾಗಬೇಕು. ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 8 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿರುವುದು ತಾಲ್ಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.</p>.<p>ನಿವೃತ್ತರಾದ 16 ಪ್ರಾಥಮಿಕ ಶಾಲೆ ಶಿಕ್ಷಕರು ಹಾಗೂ 7 ಪ್ರೌಢಶಾಲಾ ಶಿಕ್ಷಕರನ್ನು ಗೌರವಿಸಲಾಯಿತು. ನಗರಸಭೆ ಪೌರಾಯುಕ್ತ ಆರ್. ಶ್ರೀಕಾಂತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನೇಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬಾರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುನಿರಾಜು, ಸರ್ಕಲ್ ಇನ್ಸ್ಪೆಕ್ಟರ್ ಧರ್ಮೇಗೌಡಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ: </strong>‘ಸಮಾಜದಲ್ಲಿ ಅತಿಹೆಚ್ಚು ಗೌರವ ಹಾಗೂ ಘನತೆಗೆ ಪಾತ್ರವಾಗಿರುವ ಶಿಕ್ಷಣ ವ್ಯವಸ್ಥೆ ಹಾಗೂ ಶಿಕ್ಷಕರನ್ನು ಪ್ರತಿಯೊಬ್ಬರು ಗೌರವಿಸಬೇಕು’ ಎಂದು ಶಾಸಕ ವಿ. ಮುನಿಯಪ್ಪ ಹೇಳಿದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಗರ ಹೊರವಲಯದ ಹನುಮಂತಪುರ ಗೇಟ್ ಬಳಿಯಿರುವ ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ಭಾನುವಾರ ಆರೋಜಿಸಲಾಗಿದ್ದ ಭಾರತ ರತ್ನ ಎಸ್. ರಾಧಾಕೃಷ್ಣನ್ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಣ ಕ್ಷೇತ್ರ ಹೊರತುಪಡಿಸಿ ಬೇರಾವುದೇ ಕ್ಷೇತ್ರದಿಂದ ಸಮಾಜದಲ್ಲಿ ಪರಿವರ್ತನೆ ಹಾಗೂ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಶಿಕ್ಷಕರು ಕೇವಲ ಪಾಠ ಕಲಿಸುವುದಷ್ಟೇ ಅಲ್ಲದೆ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಡೆಗೆ ಹೆಚ್ಚಿನ ಚಿಂತನೆ ನಡೆಸಬೇಕು ಎಂದರು.</p>.<p>ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿದ್ದ ಗುರುಭವನ ನಿರ್ಮಾಣ ಮಾಡಲು ಶಾಸಕರ ನಿಧಿಯಿಂದ ₹ 25 ಲಕ್ಷ ನೀಡುವ ಭರವಸೆ ನೀಡಿದ ಅವರು, ಮೊದಲನೇ ಕಂತಿನ ₹ 15 ಲಕ್ಷವನ್ನು ಮುಂದಿನ ತಿಂಗಳು ನೀಡಲಿದ್ದು, ಉಳಿದ ಹಣವನ್ನು ಮುಂದಿನ ಮಾರ್ಚ್ ತಿಂಗಳ ನಂತರ ನೀಡಲಾಗುವುದು. ಗುರುಭವನ ನಿರ್ಮಾಣಕ್ಕೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.</p>.<p>ತಹಶೀಲ್ದಾರ್ ಬಿ.ಎಸ್. ರಾಜೀವ್ ಮಾತನಾಡಿ, ರಾಧಾಕೃಷ್ಣನ್ ಅವರು ಪ್ರತಿಯೊಬ್ಬ ಶಿಕ್ಷಕರಿಗೆ ಆದರ್ಶ ವ್ಯಕ್ತಿಯಾಗಿರಬೇಕು. ಬಡತನದ ನಡುವೆಯೂ ಅವರು ಮಾಡಿದ ಅಪಾರವಾದ ಸಾಧನೆಗಳೇ ಪ್ರೇರಣೆಯಾಗಬೇಕು. ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 8 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿರುವುದು ತಾಲ್ಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.</p>.<p>ನಿವೃತ್ತರಾದ 16 ಪ್ರಾಥಮಿಕ ಶಾಲೆ ಶಿಕ್ಷಕರು ಹಾಗೂ 7 ಪ್ರೌಢಶಾಲಾ ಶಿಕ್ಷಕರನ್ನು ಗೌರವಿಸಲಾಯಿತು. ನಗರಸಭೆ ಪೌರಾಯುಕ್ತ ಆರ್. ಶ್ರೀಕಾಂತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನೇಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬಾರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುನಿರಾಜು, ಸರ್ಕಲ್ ಇನ್ಸ್ಪೆಕ್ಟರ್ ಧರ್ಮೇಗೌಡಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>