<p>ಗುಡಿಬಂಡೆ: ‘ಮುಖ್ಯರಸ್ತೆಯ ವಿಸ್ತರಣೆ ವೇಳೆ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ನಿವೇಶನ ಹಂಚಿಕೆಯಲ್ಲಿ ಮೊದಲ ಆದ್ಯತೆ ನೀಡಲಾಗುವುದು’ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿಯಲ್ಲಿ ನಡೆದ ಆಶ್ರಯ ಸಮಿತಿ ಸಭೆಯಲ್ಲಿ ಮಾತನಾಡಿದರು.</p>.<p>ಈ ಹಿಂದೆ ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆ ನಡೆಯುತ್ತಿತ್ತು. ಆದರೆ, ಪಟ್ಟಿಯಲ್ಲಿ ರಸ್ತೆ ವಿಸ್ತರಣೆ ವೇಳೆ ಮನೆ ಕಳೆದುಕೊಂಡ ಸಂತ್ರಸ್ತರ ಹೆಸರು ಇಲ್ಲ. ಹಾಲಿ ಪಟ್ಟಿಯನ್ನು ರದ್ದುಪಡಿಸಿ ಹೊಸದಾಗಿ ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಬೇಕು ಎಂದರು.</p>.<p>ಗುಡಿಬಂಡೆ ಸರ್ವೆ ನಂ. 88ರಲ್ಲಿ 1.35 ಗುಂಟೆ ಜಮೀನಿನಲ್ಲಿ ಸುಮಾರು 55 ನಿವೇಶನ ಮತ್ತು ಪಲ್ಲೈಗಾರಹಳ್ಳಿಯ ಸರ್ವೆ ನಂ. 7ರಲ್ಲಿ 5 ಎಕರೆ ಜಮೀನು ಗುರುತಿಸಿ ಸುಮಾರು 70 ನಿವೇಶನಗಳನ್ನು ಅಭಿವೃದ್ಧಿಪಡಿಸಬೇಕು. ತಾಲ್ಲೂಕಿಗೆ ಹೆಚ್ಚುವರಿಯಾಗಿ 150 ಮನೆಗಳನ್ನು ಮಂಜೂರು ಮಾಡಿಸಲಾಗಿದೆ. ಅಧಿಕಾರಿಗಳು ಫಲಾನುಭವಿಗಳ ಪಟ್ಟಿ ನೀಡಿದ ಕೂಡಲೇ ಮನೆ ಹಂಚಿಕೆ ನಡೆಯಲಿದೆ. ಮುಂದಿನ ದಿನಗಳಲ್ಲಿ ಪ್ರತಿ 15 ದಿನಗಳಿಗೊಮ್ಮೆ ಸಭೆ ಕರೆಯಲಾಗುವುದು ಎಂದು ತಿಳಿಸಿದರು.</p>.<p>ಆಶ್ರಯ ಸಮಿತಿ ಸದಸ್ಯರಾದ ನವೀನ್ ಕುಮಾರ್ ಮತ್ತು ರವಿ ಮಾತನಾಡಿ, ತಾಲ್ಲೂಕಿನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕಡುಬಡವರಿದ್ದು ಅವರಿಗೆ ವಾಜಪೇಯಿ ಆಶ್ರಯ ಯೋಜನೆಯಡಿ ನಿವೇಶನ ನೀಡಲು ಮೀನಾಮೇಷ ಎಣಿಸುತ್ತಿದ್ದಾರೆ ಎಂದರು.</p>.<p>ಪ.ಪಂ. ಮುಖ್ಯಾಧಿಕಾರಿ ಸಬಾ ಶಿರೀನ್ ಮಾತನಾಡಿ, ‘ನಾನು ಹೊಸದಾಗಿ ಬಂದಿದ್ದೇನೆ. ಎಂಟು ದಿನಗಳ ಕಾಲಾವಕಾಶ ನೀಡಿದರೆ ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಬಷೀರಾ ರಿಜ್ವಾನ್, ಜಿನ್ನಾರಾಜಯ್ಯ, ಜೆ.ಇ. ಚಕ್ರಪಾಣಿ, ಜಯರಾಮ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಡಿಬಂಡೆ: ‘ಮುಖ್ಯರಸ್ತೆಯ ವಿಸ್ತರಣೆ ವೇಳೆ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ನಿವೇಶನ ಹಂಚಿಕೆಯಲ್ಲಿ ಮೊದಲ ಆದ್ಯತೆ ನೀಡಲಾಗುವುದು’ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿಯಲ್ಲಿ ನಡೆದ ಆಶ್ರಯ ಸಮಿತಿ ಸಭೆಯಲ್ಲಿ ಮಾತನಾಡಿದರು.</p>.<p>ಈ ಹಿಂದೆ ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆ ನಡೆಯುತ್ತಿತ್ತು. ಆದರೆ, ಪಟ್ಟಿಯಲ್ಲಿ ರಸ್ತೆ ವಿಸ್ತರಣೆ ವೇಳೆ ಮನೆ ಕಳೆದುಕೊಂಡ ಸಂತ್ರಸ್ತರ ಹೆಸರು ಇಲ್ಲ. ಹಾಲಿ ಪಟ್ಟಿಯನ್ನು ರದ್ದುಪಡಿಸಿ ಹೊಸದಾಗಿ ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಬೇಕು ಎಂದರು.</p>.<p>ಗುಡಿಬಂಡೆ ಸರ್ವೆ ನಂ. 88ರಲ್ಲಿ 1.35 ಗುಂಟೆ ಜಮೀನಿನಲ್ಲಿ ಸುಮಾರು 55 ನಿವೇಶನ ಮತ್ತು ಪಲ್ಲೈಗಾರಹಳ್ಳಿಯ ಸರ್ವೆ ನಂ. 7ರಲ್ಲಿ 5 ಎಕರೆ ಜಮೀನು ಗುರುತಿಸಿ ಸುಮಾರು 70 ನಿವೇಶನಗಳನ್ನು ಅಭಿವೃದ್ಧಿಪಡಿಸಬೇಕು. ತಾಲ್ಲೂಕಿಗೆ ಹೆಚ್ಚುವರಿಯಾಗಿ 150 ಮನೆಗಳನ್ನು ಮಂಜೂರು ಮಾಡಿಸಲಾಗಿದೆ. ಅಧಿಕಾರಿಗಳು ಫಲಾನುಭವಿಗಳ ಪಟ್ಟಿ ನೀಡಿದ ಕೂಡಲೇ ಮನೆ ಹಂಚಿಕೆ ನಡೆಯಲಿದೆ. ಮುಂದಿನ ದಿನಗಳಲ್ಲಿ ಪ್ರತಿ 15 ದಿನಗಳಿಗೊಮ್ಮೆ ಸಭೆ ಕರೆಯಲಾಗುವುದು ಎಂದು ತಿಳಿಸಿದರು.</p>.<p>ಆಶ್ರಯ ಸಮಿತಿ ಸದಸ್ಯರಾದ ನವೀನ್ ಕುಮಾರ್ ಮತ್ತು ರವಿ ಮಾತನಾಡಿ, ತಾಲ್ಲೂಕಿನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕಡುಬಡವರಿದ್ದು ಅವರಿಗೆ ವಾಜಪೇಯಿ ಆಶ್ರಯ ಯೋಜನೆಯಡಿ ನಿವೇಶನ ನೀಡಲು ಮೀನಾಮೇಷ ಎಣಿಸುತ್ತಿದ್ದಾರೆ ಎಂದರು.</p>.<p>ಪ.ಪಂ. ಮುಖ್ಯಾಧಿಕಾರಿ ಸಬಾ ಶಿರೀನ್ ಮಾತನಾಡಿ, ‘ನಾನು ಹೊಸದಾಗಿ ಬಂದಿದ್ದೇನೆ. ಎಂಟು ದಿನಗಳ ಕಾಲಾವಕಾಶ ನೀಡಿದರೆ ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಬಷೀರಾ ರಿಜ್ವಾನ್, ಜಿನ್ನಾರಾಜಯ್ಯ, ಜೆ.ಇ. ಚಕ್ರಪಾಣಿ, ಜಯರಾಮ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>