ಬ್ರಿಟಿಷರೇ ಭಾರತದಿಂದ ತೊಲಗಿ ಎಂದು ಚಳವಳಿ ಮಾಡಲಾಯಿತು. ಇದೀಗ ಬಿಜೆಪಿಯವರೇ ಅಧಿಕಾರದಿಂದ ತೊಲಗಿ ಎಂದು ಚಳವಳಿ ಮಾಡಬೇಕಾಗಿದೆ. ಈಗಾಗಲೇ ಪೆಟ್ರೋಲ್, ಗ್ಯಾಸ್, ಕಟ್ಟಡ ಸಾಮಗ್ರಿಗಳ ದರ ಏರಿಕೆ ಮುಂತಾದವುಗಳಿಂದ ತತ್ತರಿಸುತ್ತಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ಅವರು ತಿನ್ನುವ ಅನ್ನ, ಹಾಲು, ಮೊಸರಿಗೆ ತೆರಿಗೆ ಹಾಕಿ ಅವರ ಜೀವನವನ್ನೇ ದುರ್ಬರ ಮಾಡುತ್ತಿರುವುದು ನ್ಯಾಯವೇ ಎಂದು ಪ್ರಶ್ನಿಸಿದರು.