ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ, ಸಿಬ್ಬಂದಿ ಸಾರ್ವಜನಿಕರ ಕೆಲಸ ಕಾರ್ಯದಲ್ಲಿ ವಿಳಂಬ ಮಾಡಿದರೆ, ಲಂಚ ಕೇಳಿದರೆ, ಭ್ರಷ್ಟಾಚಾರ ನಡೆಸಿದರೆ ಈ ಬಗ್ಗೆ ಸಾರ್ವಜನಿಕರು ನಿರ್ದಿಷ್ಟ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಿ ದೂರು ಅರ್ಜಿ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಬಹುದು ಎಂದು ಚಿಕ್ಕಬಳ್ಳಾಪುರ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಎಂ. ಪ್ರವೀಣ್ ತಿಳಿಸಿದ್ದಾರೆ.