ಮಹಾರಾಷ್ಟ್ರ ಏಕೀಕರಣ ಸಮಿತಿಯ ಬೆಳಗಾವಿ ಘಟಕವು ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ‘ಭಾಷಾವಾರು ಪ್ರಾಂತಗಳ ರಚನೆ ಸಂದರ್ಭದಲ್ಲಿ ಗಡಿಭಾಗದ ಮರಾಠಿಗರಿಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸುವಂತೆ 1956ರಿಂದಲೇ ಹೋರಾಟ ಮಾಡಿಕೊಂಡು ಬರಲಾಗಿದೆ. ಇಷ್ಟು ದಿನ ಬೀದಿಗಳ ಮೇಲೆ ನಡೆಯುತ್ತಿದ್ದ ಹೋರಾಟವು ಈಗ ಸುಪ್ರೀಂ ಕೋರ್ಟ್ ತಲುಪಿದೆ. ನ್ಯಾಯಾಲಯದಲ್ಲಿ ನಮ್ಮ ವಾದ ಬಲಗೊಳ್ಳಬೇಕಾದರೆ ಹೆಚ್ಚೆಚ್ಚು ಜನಪ್ರತಿನಿಧಿಗಳು ನಮ್ಮವರಾಗಿರಬೇಕು’ ಎಂದರು.