<p><strong>ಚಿಕ್ಕಬಳ್ಳಾಪುರ:</strong> ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮರಸನಹಳ್ಳಿ ಬಳಿ ಭಾನುವಾರ ಟ್ರ್ಯಾಕ್ಟರ್ ಮತ್ತು ಟೆಂಪೊ ನಡುವೆ ಅಪಘಾತ ಸಂಭವಿಸಿದೆ.</p>.<p>ತೆಲಂಗಾಣದ ನೂರ್ ಅಹಮ್ಮದ್ (60) ಎಂಬುವವರು ಮೃತಪಟ್ಟಿದ್ದಾರೆ.</p>.<p>ಟೆಂಪೊ ಬಾಗೇಪಲ್ಲಿ ಕಡೆಯಿಂದ ಬೆಂಗಳೂರಿಗೆ ಸಾಗುತ್ತಿತ್ತು. ಮರಸನಹಳ್ಳಿ ಬಳಿ ಟ್ರ್ಯಾಕ್ಟರ್ವೊಂದು ಟೊಮೆಟೊ ತುಂಬಿಕೊಂಡು ಸಾಗುತ್ತಿತ್ತು. ಈ ವೇಳೆ ಟೆಂಪೊ ಚಾಲಕ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಟೆಂಪೊ ಚಾಲಕ ನರೇಶ್ಗೆ ಗಾಯಗಳಾಗಿವೆ.</p>.<p>ಟೆಂಪೊ ಮಾಲೀಕರೂ ಆದ ನೂರ್ ಅಹಮ್ಮದ್, ಚಾಲಕನ ಪಕ್ಕ ಕುಳಿತಿದ್ದರು. ಅವರಿಗೆ ಹೊಟ್ಟೆ ಭಾಗಕ್ಕೆ ತೀವ್ರ ಪೆಟ್ಟು ಬಿದ್ದಿತ್ತು. ಅವರನ್ನು ಯಲಹಂಕದ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ.</p>.<p>ಟ್ರ್ಯಾಕ್ಟರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಬಿ.ಪಿ. ಮಂಜು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಟ್ಯಾಕ್ಟರ್ನಲ್ಲಿದ್ದ ಟೊಮೆಟೊ ಕ್ರೇಟ್ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮರಸನಹಳ್ಳಿ ಬಳಿ ಭಾನುವಾರ ಟ್ರ್ಯಾಕ್ಟರ್ ಮತ್ತು ಟೆಂಪೊ ನಡುವೆ ಅಪಘಾತ ಸಂಭವಿಸಿದೆ.</p>.<p>ತೆಲಂಗಾಣದ ನೂರ್ ಅಹಮ್ಮದ್ (60) ಎಂಬುವವರು ಮೃತಪಟ್ಟಿದ್ದಾರೆ.</p>.<p>ಟೆಂಪೊ ಬಾಗೇಪಲ್ಲಿ ಕಡೆಯಿಂದ ಬೆಂಗಳೂರಿಗೆ ಸಾಗುತ್ತಿತ್ತು. ಮರಸನಹಳ್ಳಿ ಬಳಿ ಟ್ರ್ಯಾಕ್ಟರ್ವೊಂದು ಟೊಮೆಟೊ ತುಂಬಿಕೊಂಡು ಸಾಗುತ್ತಿತ್ತು. ಈ ವೇಳೆ ಟೆಂಪೊ ಚಾಲಕ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಟೆಂಪೊ ಚಾಲಕ ನರೇಶ್ಗೆ ಗಾಯಗಳಾಗಿವೆ.</p>.<p>ಟೆಂಪೊ ಮಾಲೀಕರೂ ಆದ ನೂರ್ ಅಹಮ್ಮದ್, ಚಾಲಕನ ಪಕ್ಕ ಕುಳಿತಿದ್ದರು. ಅವರಿಗೆ ಹೊಟ್ಟೆ ಭಾಗಕ್ಕೆ ತೀವ್ರ ಪೆಟ್ಟು ಬಿದ್ದಿತ್ತು. ಅವರನ್ನು ಯಲಹಂಕದ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ.</p>.<p>ಟ್ರ್ಯಾಕ್ಟರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಬಿ.ಪಿ. ಮಂಜು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಟ್ಯಾಕ್ಟರ್ನಲ್ಲಿದ್ದ ಟೊಮೆಟೊ ಕ್ರೇಟ್ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>