<p><strong>ಚಿಂತಾಮಣಿ: </strong>ಗ್ರಾಮ ಪಂಚಾಯಿತಿ ಚುನಾವಣೆಯ ನೀತಿಸಂಹಿತೆ ಜಾರಿಯಾಗಿದ್ದರೂ ಕೃಷಿ ಇಲಾಖೆಯ ಅಧಿಕಾರಿಗಳು ಟರ್ಪಾಲಿನ್ ವಿತರಣೆ ಕಾರ್ಯಕ್ರಮ ನಡೆಸಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ನಡಂಪಲ್ಲಿ ಶ್ರೀನಿವಾಸ್ ಆರೋಪಿಸಿದರು.</p>.<p>ತಾಲ್ಲೂಕು ಕೃಷಿ ಇಲಾಖೆಯಿಂದ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಲಾಟರಿ ಮೂಲಕ ಟರ್ಪಾಲಿನ್ ಫಲಾನುಭವಿಗಳ ವಿತರಣಾ ಕಾರ್ಯಕ್ರಮದಲ್ಲಿನ ಅಧಿಕಾರಿಗಳ ಕಾರ್ಯವೈಖರಿಯನ್ನು ಖಂಡಿಸಿದರು.</p>.<p>ಚುನಾವಣಾ ಆಯೋಗ ನೀತಿಸಂಹಿತೆ ಜಾರಿಗೊಳಿಸಿದ್ದರೂ ಹೇಗೆ ಲಾಟರಿ ಪ್ರಕ್ರಿಯೆ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಜಿಲ್ಲಾ ಪಂಚಾಯಿತಿ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸದೆ ಲಾಟರಿ ಪ್ರಕ್ರಿಯೆಯನ್ನು ನಡೆಸುತ್ತಿರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>ರೈತರಿಗೆ ಟರ್ಪಾಲಿನ್ ವಿತರಣೆ ಈಗಾಗಲೇ ವಿಳಂಬವಾಗಿದೆ. ನೀತಿಸಂಹಿತೆ ಕಾರಣದಿಂದ ಆಹ್ವಾನ ನೀಡಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ಸಮಜಾಯಿಷಿ ನೀಡಿದ ನಂತರ ಲಾಟರಿ ಪ್ರಕ್ರಿಯೆಯನ್ನು ಆರಂಭಿಸಲಾಯಿತು.</p>.<p>‘ಮಳೆಗಾಲದಲ್ಲಿ ರೈತರು ತಾಉಪ ತಹಶೀಲ್ದಾರ್ ಶೋಭಾ, ಸಹಾಯಕ ಕೃಷಿ ನಿರ್ದೇಶಕ ಡಾ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಕವಿತಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧನಾರಾಯಣಸ್ವಾಮಿ, ರೇಷ್ಮೆ ಇಲಾಖೆಯ ಆಂಜನೇಯರೆಡ್ಡಿ, ತೋಟಗಾರಿಕೆ ಇಲಾಖೆಯ ರಾಜೇಶ್, ಬೈರಾರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ: </strong>ಗ್ರಾಮ ಪಂಚಾಯಿತಿ ಚುನಾವಣೆಯ ನೀತಿಸಂಹಿತೆ ಜಾರಿಯಾಗಿದ್ದರೂ ಕೃಷಿ ಇಲಾಖೆಯ ಅಧಿಕಾರಿಗಳು ಟರ್ಪಾಲಿನ್ ವಿತರಣೆ ಕಾರ್ಯಕ್ರಮ ನಡೆಸಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ನಡಂಪಲ್ಲಿ ಶ್ರೀನಿವಾಸ್ ಆರೋಪಿಸಿದರು.</p>.<p>ತಾಲ್ಲೂಕು ಕೃಷಿ ಇಲಾಖೆಯಿಂದ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಲಾಟರಿ ಮೂಲಕ ಟರ್ಪಾಲಿನ್ ಫಲಾನುಭವಿಗಳ ವಿತರಣಾ ಕಾರ್ಯಕ್ರಮದಲ್ಲಿನ ಅಧಿಕಾರಿಗಳ ಕಾರ್ಯವೈಖರಿಯನ್ನು ಖಂಡಿಸಿದರು.</p>.<p>ಚುನಾವಣಾ ಆಯೋಗ ನೀತಿಸಂಹಿತೆ ಜಾರಿಗೊಳಿಸಿದ್ದರೂ ಹೇಗೆ ಲಾಟರಿ ಪ್ರಕ್ರಿಯೆ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಜಿಲ್ಲಾ ಪಂಚಾಯಿತಿ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸದೆ ಲಾಟರಿ ಪ್ರಕ್ರಿಯೆಯನ್ನು ನಡೆಸುತ್ತಿರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>ರೈತರಿಗೆ ಟರ್ಪಾಲಿನ್ ವಿತರಣೆ ಈಗಾಗಲೇ ವಿಳಂಬವಾಗಿದೆ. ನೀತಿಸಂಹಿತೆ ಕಾರಣದಿಂದ ಆಹ್ವಾನ ನೀಡಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ಸಮಜಾಯಿಷಿ ನೀಡಿದ ನಂತರ ಲಾಟರಿ ಪ್ರಕ್ರಿಯೆಯನ್ನು ಆರಂಭಿಸಲಾಯಿತು.</p>.<p>‘ಮಳೆಗಾಲದಲ್ಲಿ ರೈತರು ತಾಉಪ ತಹಶೀಲ್ದಾರ್ ಶೋಭಾ, ಸಹಾಯಕ ಕೃಷಿ ನಿರ್ದೇಶಕ ಡಾ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಕವಿತಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧನಾರಾಯಣಸ್ವಾಮಿ, ರೇಷ್ಮೆ ಇಲಾಖೆಯ ಆಂಜನೇಯರೆಡ್ಡಿ, ತೋಟಗಾರಿಕೆ ಇಲಾಖೆಯ ರಾಜೇಶ್, ಬೈರಾರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>