<p><strong>ಚಿಂತಾಮಣಿ</strong>: ತಾಲ್ಲೂಕಿನ ಕಡದಲಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಲ್ಲಾಂಡ್ಲಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಆದಿಭೈರವೇಶ್ವರಸ್ವಾಮಿಯ ರಥೋತ್ಸವವು ಭಾನುವಾರ ಶ್ರದ್ಧಾ, ಭಕ್ತಿಯಿಂದ ನೂರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.</p>.<p>ರಥೋತ್ಸವದ ಪ್ರಯುಕ್ತ ದೇವಾಲಯದ ಒಳಗೆ ಮತ್ತು ಹೊರಗೆ ವಿವಿಧ ಹೂಗಳಿಂದ ಹಾಗೂ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಅರ್ಚಕರಾದ ಶಂಕರಶಾಸ್ತ್ರಿ ಮತ್ತು ಶಿವಾನಂದಸ್ವಾಮಿ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ರಥೋತ್ಸವದ ಸಲುವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಭಕ್ತರು ಬೆಳಗಿನಿಂದಲೇ ಸರತಿಯ ಸಾಲಿನಲ್ಲಿ ನಿಂತು ಹಣ್ಣು ಕಾಯಿ ನೀಡಿ ದೇವರ ದರ್ಶನ ಪಡೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.</p>.<p>ಉತ್ಸವಮೂರ್ತಿಯನ್ನು ಶಾಸ್ತ್ರೋಕ್ತವಾಗಿ ಮಂಗಳವಾದ್ಯಗಳೊಂದಿಗೆ ಕರೆತಂದು ಮೊದಲೇ ಅಲಂಕೃತವಾದ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥದಲ್ಲಿ ಮತ್ತೊಮ್ಮೆ ಅಲಂಕಾರ, ಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ 1 ಗಂಟೆಗೆ ಟ್ರಸ್ಟ್ ಪದಾಧಿಕಾರಿಗಳು ರಥೋತ್ಸವಕ್ಕೆ ಚಾಲನೆ ನೀಡಿದರು. ನೂರಾರು ಭಕ್ತರು ಸಹ ಕೈಜೋಡಿಸಿ ರಥವನ್ನು ಎಳೆದು ಕೃತಾರ್ಥರಾದರು. ಭಕ್ತರು ಬಾಳೆಹಣ್ಣು, ಧವನ ಸಮರ್ಪಿಸಿದರು.</p>.<p>ರಥವನ್ನು ದೇವಾಲಯದ ಸುತ್ತಲೂ ಹಾಗೂ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಎಳೆದರು. ಭಕ್ತರ ಬಿಸಿಲ ದಗೆಯನ್ನು ತಣಿಸಲು ಪಾನಕ, ಮಜ್ಜಿಗೆ, ಕೋಸುಂಬರಿ ವಿತರಣೆ ನಡೆಯಿತು. ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.</p>.<p>ಇಡೀ ಗ್ರಾಮವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಗ್ರಾಮದ ರಸ್ತೆಗಳಿಗೆ ಹಾಗೂ ಮನೆಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ರಥೋತ್ಸವದ ಅಂಗವಾಗಿ ಸಾಮೂಹಿಕ ವಿವಾಹ ಏರ್ಪಡಿಸಲಾಗಿತ್ತು. ಆದಿಬೈರವೇಶ್ವರಸ್ವಾಮಿಯ ಕುಲಭಾಂದವರು, ಭಕ್ತರು, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ತಾಲ್ಲೂಕಿನ ಕಡದಲಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಲ್ಲಾಂಡ್ಲಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಆದಿಭೈರವೇಶ್ವರಸ್ವಾಮಿಯ ರಥೋತ್ಸವವು ಭಾನುವಾರ ಶ್ರದ್ಧಾ, ಭಕ್ತಿಯಿಂದ ನೂರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.</p>.<p>ರಥೋತ್ಸವದ ಪ್ರಯುಕ್ತ ದೇವಾಲಯದ ಒಳಗೆ ಮತ್ತು ಹೊರಗೆ ವಿವಿಧ ಹೂಗಳಿಂದ ಹಾಗೂ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಅರ್ಚಕರಾದ ಶಂಕರಶಾಸ್ತ್ರಿ ಮತ್ತು ಶಿವಾನಂದಸ್ವಾಮಿ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ರಥೋತ್ಸವದ ಸಲುವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಭಕ್ತರು ಬೆಳಗಿನಿಂದಲೇ ಸರತಿಯ ಸಾಲಿನಲ್ಲಿ ನಿಂತು ಹಣ್ಣು ಕಾಯಿ ನೀಡಿ ದೇವರ ದರ್ಶನ ಪಡೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.</p>.<p>ಉತ್ಸವಮೂರ್ತಿಯನ್ನು ಶಾಸ್ತ್ರೋಕ್ತವಾಗಿ ಮಂಗಳವಾದ್ಯಗಳೊಂದಿಗೆ ಕರೆತಂದು ಮೊದಲೇ ಅಲಂಕೃತವಾದ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥದಲ್ಲಿ ಮತ್ತೊಮ್ಮೆ ಅಲಂಕಾರ, ಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ 1 ಗಂಟೆಗೆ ಟ್ರಸ್ಟ್ ಪದಾಧಿಕಾರಿಗಳು ರಥೋತ್ಸವಕ್ಕೆ ಚಾಲನೆ ನೀಡಿದರು. ನೂರಾರು ಭಕ್ತರು ಸಹ ಕೈಜೋಡಿಸಿ ರಥವನ್ನು ಎಳೆದು ಕೃತಾರ್ಥರಾದರು. ಭಕ್ತರು ಬಾಳೆಹಣ್ಣು, ಧವನ ಸಮರ್ಪಿಸಿದರು.</p>.<p>ರಥವನ್ನು ದೇವಾಲಯದ ಸುತ್ತಲೂ ಹಾಗೂ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಎಳೆದರು. ಭಕ್ತರ ಬಿಸಿಲ ದಗೆಯನ್ನು ತಣಿಸಲು ಪಾನಕ, ಮಜ್ಜಿಗೆ, ಕೋಸುಂಬರಿ ವಿತರಣೆ ನಡೆಯಿತು. ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.</p>.<p>ಇಡೀ ಗ್ರಾಮವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಗ್ರಾಮದ ರಸ್ತೆಗಳಿಗೆ ಹಾಗೂ ಮನೆಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ರಥೋತ್ಸವದ ಅಂಗವಾಗಿ ಸಾಮೂಹಿಕ ವಿವಾಹ ಏರ್ಪಡಿಸಲಾಗಿತ್ತು. ಆದಿಬೈರವೇಶ್ವರಸ್ವಾಮಿಯ ಕುಲಭಾಂದವರು, ಭಕ್ತರು, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>