ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಿನಾರಾಯಣ ರಥೋತ್ಸವ

Last Updated 7 ಫೆಬ್ರುವರಿ 2023, 5:10 IST
ಅಕ್ಷರ ಗಾತ್ರ

ಗುಡಿಬಂಡೆ: ತಾಲ್ಲೂಕಿನ ಎಲ್ಲೋಡು ಆದಿನಾರಾಯಣಸ್ವಾಮಿ ಜಾತ್ರಾ ಮಹೋತ್ಸವವು ಭಾನುವಾರ ನಡೆಯಿತು.

ರಥೋತ್ಸವಕ್ಕೆ ತಹಶೀಲ್ದಾರ್ ಮನಿಷಾ, ಶಾಸಕ ಎಸ್.ಎನ್ ಸುಬ್ಬಾರೆಡ್ಡಿ, ಸಿ.ಮುನಿರಾಜು ಸೇರಿದಂತೆ ಸಾವಿರಾರು ಭಕ್ತರು ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

10 ದಿನ ನಡೆಯುವ ಜಾತ್ರಾ ಮಹೋತ್ಸವಕ್ಕೆ ಜಿಲ್ಲೆ, ರಾಜ್ಯ ಹಾಗೂ ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರ ಪೂಜೆ, ಹರಕೆ ಸಲ್ಲಿಸಿದರು. ಜಾತ್ರೆಯ ಪ್ರಯುಕ್ತ ಪ್ರತಿನಿತ್ಯ ಅನ್ನ ಸಂತರ್ಪಣೆ ನಡೆಯಿತು.

ಗೋಪುರ, ಬೆಟ್ಟಕ್ಕೆ ಹೋಗುವ ಮೆಟ್ಟಲು, ಚಾವಣಿ ವ್ಯವಸ್ಥೆ, ಬೆಟ್ಟದಲ್ಲಿರುವ ವಿಶ್ರಾಂತಿ ಮಂಟಪ ಹಾಗೂ ದೇವಾಲಯಕ್ಕೆ ಹೊಸ ರೂಪ ನೀಡಿರುವುದು ಕ್ಷೇತ್ರಕ್ಕೆ ಮೆರುಗು ತಂದಿದ್ದು, ರಥೋತ್ಸವಕ್ಕೆ ಹೊಸ ಆಕರ್ಷಣೆಯಾಗಿದೆ.

ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭಾಗವಹಿಸಿದ್ದರು. ಗುಡಿಬಂಡೆ ಪೊಲೀಸ್ ಠಾಣೆಯ ಲಿಂಗರಾಜು ನೇತೃತ್ವದಲ್ಲಿ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT