<p><strong>ಚಿಂತಾಮಣಿ:</strong> ‘ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೊಸ ತಂತ್ರಜ್ಞಾನಗಳ ಸಂಶೋಧನೆಯಾಗುತ್ತಿದೆ. ಹಾಗಾಗಿ, ವಿದ್ಯಾರ್ಥಿಗಳು ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು’ ಎಂದು ಶಾಸಕ ಎಂ. ಕೃಷ್ಣಾರೆಡ್ಡಿ ಸಲಹೆ ನೀಡಿದರು.</p>.<p>ನಗರದ ಸರ್ಕಾರಿ ಮಹಿಳಾ ಕಾಲೇಜು, ಸರ್ಕಾರಿ ಬಾಲಕರ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ಅವರು ಮಾತನಾಡಿದರು.</p>.<p>ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲು ಟ್ಯಾಬ್, ಲ್ಯಾಪ್ಟಾಪ್ನಂತಹ ಪರಿಕರಗಳು ಅಗತ್ಯ. ಬಹುತೇಕ ವಿದ್ಯಾರ್ಥಿಗಳು ಇವುಗಳನ್ನು ಕೊಳ್ಳುವ ಸ್ಥಿತಿಯಲ್ಲಿ ಇರುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಟ್ಯಾಬ್ ನೀಡುತ್ತಿರುವುದು ಅತ್ಯುತ್ತಮ ಯೋಜನೆಯಾಗಿದೆ. ಕಳೆದ ವರ್ಷ ಕೆಲವರಿಗೆ ಮಾತ್ರ ವಿತರಿಸಲಾಗಿತ್ತು. ಈ ವರ್ಷ ಯಾವುದೇ ತಾರತಮ್ಯವಿಲ್ಲದೆ ಎಲ್ಲರಿಗೂ ವಿತರಿಸುತ್ತಿರುವುದು ಶ್ಲಾಘನೀಯ ಎಂದು<br />ತಿಳಿಸಿದರು.</p>.<p>ವಿದ್ಯಾರ್ಥಿಗಳು ಟ್ಯಾಬ್ಗಳನ್ನು ಜೋಪಾನವಾಗಿಟ್ಟುಕೊಂಡು ಪಾಠ ಸೇರಿದಂತೆ ಜ್ಞಾನವೃದ್ಧಿಗಾಗಿ ಮಾತ್ರ ಬಳಸಿಕೊಳ್ಳಬೇಕು. ಆಧುನಿಕ ತಂತ್ರಜ್ಞಾನ ಎರಡು ಅಲುಗಿನ ಕತ್ತಿಯಂತೆ. ಒಳ್ಳೆಯದು ಮತ್ತು ಕೆಟ್ಟದ್ದು ಎರಡೂ ಇರುತ್ತದೆ. ವಿದ್ಯಾರ್ಥಿಗಳು ಒಳ್ಳೆಯದಕ್ಕೆ ಮಾತ್ರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಪ್ರಾಂಶುಪಾಲ ಪ್ರೊ.ಕೆ.ಆರ್. ಶಿವಶಂಕರಪ್ರಸಾದ್, ನಗರಸಭೆ ಸದಸ್ಯರಾದ ಮಂಜುನಾಥ್, ದೇವಳಂ ಶಂಕರ್, ನಟರಾಜ್, ಮುಖಂಡರಾದ ವಿ. ಅಮರ್, ಆಯಿಷಾ ಸುಲ್ತಾನಾ, ಕಾಲೇಜಿನ ಪ್ರಾಧ್ಯಾಪಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ‘ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೊಸ ತಂತ್ರಜ್ಞಾನಗಳ ಸಂಶೋಧನೆಯಾಗುತ್ತಿದೆ. ಹಾಗಾಗಿ, ವಿದ್ಯಾರ್ಥಿಗಳು ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು’ ಎಂದು ಶಾಸಕ ಎಂ. ಕೃಷ್ಣಾರೆಡ್ಡಿ ಸಲಹೆ ನೀಡಿದರು.</p>.<p>ನಗರದ ಸರ್ಕಾರಿ ಮಹಿಳಾ ಕಾಲೇಜು, ಸರ್ಕಾರಿ ಬಾಲಕರ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ಅವರು ಮಾತನಾಡಿದರು.</p>.<p>ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲು ಟ್ಯಾಬ್, ಲ್ಯಾಪ್ಟಾಪ್ನಂತಹ ಪರಿಕರಗಳು ಅಗತ್ಯ. ಬಹುತೇಕ ವಿದ್ಯಾರ್ಥಿಗಳು ಇವುಗಳನ್ನು ಕೊಳ್ಳುವ ಸ್ಥಿತಿಯಲ್ಲಿ ಇರುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಟ್ಯಾಬ್ ನೀಡುತ್ತಿರುವುದು ಅತ್ಯುತ್ತಮ ಯೋಜನೆಯಾಗಿದೆ. ಕಳೆದ ವರ್ಷ ಕೆಲವರಿಗೆ ಮಾತ್ರ ವಿತರಿಸಲಾಗಿತ್ತು. ಈ ವರ್ಷ ಯಾವುದೇ ತಾರತಮ್ಯವಿಲ್ಲದೆ ಎಲ್ಲರಿಗೂ ವಿತರಿಸುತ್ತಿರುವುದು ಶ್ಲಾಘನೀಯ ಎಂದು<br />ತಿಳಿಸಿದರು.</p>.<p>ವಿದ್ಯಾರ್ಥಿಗಳು ಟ್ಯಾಬ್ಗಳನ್ನು ಜೋಪಾನವಾಗಿಟ್ಟುಕೊಂಡು ಪಾಠ ಸೇರಿದಂತೆ ಜ್ಞಾನವೃದ್ಧಿಗಾಗಿ ಮಾತ್ರ ಬಳಸಿಕೊಳ್ಳಬೇಕು. ಆಧುನಿಕ ತಂತ್ರಜ್ಞಾನ ಎರಡು ಅಲುಗಿನ ಕತ್ತಿಯಂತೆ. ಒಳ್ಳೆಯದು ಮತ್ತು ಕೆಟ್ಟದ್ದು ಎರಡೂ ಇರುತ್ತದೆ. ವಿದ್ಯಾರ್ಥಿಗಳು ಒಳ್ಳೆಯದಕ್ಕೆ ಮಾತ್ರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಪ್ರಾಂಶುಪಾಲ ಪ್ರೊ.ಕೆ.ಆರ್. ಶಿವಶಂಕರಪ್ರಸಾದ್, ನಗರಸಭೆ ಸದಸ್ಯರಾದ ಮಂಜುನಾಥ್, ದೇವಳಂ ಶಂಕರ್, ನಟರಾಜ್, ಮುಖಂಡರಾದ ವಿ. ಅಮರ್, ಆಯಿಷಾ ಸುಲ್ತಾನಾ, ಕಾಲೇಜಿನ ಪ್ರಾಧ್ಯಾಪಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>