<p><strong>ಶಿಡ್ಲಘಟ್ಟ:</strong> ವಿದೇಶಗಳಿಂದ ಆಹಾರ ಧಾನ್ಯಗಳನ್ನು ರಫ್ತು ಮಾಡಿಕೊಳ್ಳುತ್ತಿದ್ದಂತಹ ಸಂದರ್ಭದಲ್ಲಿ ದೇಶದಲ್ಲಿ ಹಸಿರುಕ್ರಾಂತಿಯನ್ನು ಹುಟ್ಟುಹಾಕಿದ ಡಾ.ಬಾಬು ಜಗಜೀವನ ರಾಂ ಅವರ ದೂರದೃಷ್ಟಿಯಿಂದ ದೇಶದ ಎಲ್ಲಾ ವರ್ಗದ ಜನರು ನೆಮ್ಮದಿಯ ಜೀವನ ನಡೆಸುವಂತಾಗಿದೆ ಎಂದು ಶಾಸಕ ವಿ. ಮುನಿಯಪ್ಪ ಹೇಳಿದರು.</p>.<p>ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಡಾ.ಬಾಬು ಜಗಜೀವನ ರಾಂ ಜಯಂತಿಯಲ್ಲಿ ಮಾತನಾಡಿದರು.</p>.<p>ಎನ್.ಎಸ್.ಯು.ಐ ರಾಜ್ಯ ಸಂಚಾಲಕ ಮುನೀಂದ್ರ ಮಾತನಾಡಿ, ‘ಮಹನೀಯರ ಜಯಂತ್ಯುತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ₹ 25 ಸಾವಿರ ನೀಡುತ್ತಿದೆ. ಆದರೆ, ತಾಲ್ಲೂಕು ಆಡಳಿತ ಕನಿಷ್ಠ ಬ್ಯಾನರ್ ಕೂಡ ಮಾಡಿಸದೆ ಕಾಟಾಚಾರಕ್ಕೆ ಜಯಂತ್ಯುತ್ಸವವನ್ನು ಆಚರಿಸುತ್ತಿದೆ’ ಎಂದರು.</p>.<p>ತಹಶೀಲ್ದಾರ್ ಬಿ.ಎಸ್. ರಾಜೀವ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಕೆ.ಎನ್. ಸುಬ್ಬಾರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ವಿದೇಶಗಳಿಂದ ಆಹಾರ ಧಾನ್ಯಗಳನ್ನು ರಫ್ತು ಮಾಡಿಕೊಳ್ಳುತ್ತಿದ್ದಂತಹ ಸಂದರ್ಭದಲ್ಲಿ ದೇಶದಲ್ಲಿ ಹಸಿರುಕ್ರಾಂತಿಯನ್ನು ಹುಟ್ಟುಹಾಕಿದ ಡಾ.ಬಾಬು ಜಗಜೀವನ ರಾಂ ಅವರ ದೂರದೃಷ್ಟಿಯಿಂದ ದೇಶದ ಎಲ್ಲಾ ವರ್ಗದ ಜನರು ನೆಮ್ಮದಿಯ ಜೀವನ ನಡೆಸುವಂತಾಗಿದೆ ಎಂದು ಶಾಸಕ ವಿ. ಮುನಿಯಪ್ಪ ಹೇಳಿದರು.</p>.<p>ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಡಾ.ಬಾಬು ಜಗಜೀವನ ರಾಂ ಜಯಂತಿಯಲ್ಲಿ ಮಾತನಾಡಿದರು.</p>.<p>ಎನ್.ಎಸ್.ಯು.ಐ ರಾಜ್ಯ ಸಂಚಾಲಕ ಮುನೀಂದ್ರ ಮಾತನಾಡಿ, ‘ಮಹನೀಯರ ಜಯಂತ್ಯುತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ₹ 25 ಸಾವಿರ ನೀಡುತ್ತಿದೆ. ಆದರೆ, ತಾಲ್ಲೂಕು ಆಡಳಿತ ಕನಿಷ್ಠ ಬ್ಯಾನರ್ ಕೂಡ ಮಾಡಿಸದೆ ಕಾಟಾಚಾರಕ್ಕೆ ಜಯಂತ್ಯುತ್ಸವವನ್ನು ಆಚರಿಸುತ್ತಿದೆ’ ಎಂದರು.</p>.<p>ತಹಶೀಲ್ದಾರ್ ಬಿ.ಎಸ್. ರಾಜೀವ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಕೆ.ಎನ್. ಸುಬ್ಬಾರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>