ಗುಡಿಬಂಡೆ: ರಾಜ್ಯದಲ್ಲಿ ಸಕಾಲ ಯೋಜನೆ ಪ್ರಾರಂಭಗೊಂಡು ಹತ್ತುವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ಸೇರಿದಂತೆ ವಿವಿಧ ಇಲಾಖೆಗಳು ದಶಮಾನೋತ್ಸವ ಕಾರ್ಯಕ್ರಮ ಆಚರಿಸುವುದರ ಜೊತೆಗೆ ಪಟ್ಟಣದ ಮುಖ್ಯರಸ್ತೆಯಲ್ಲಿ ಜಾಥಾ ನಡೆಸಿದರು.
ಗ್ರೇಡ್-2 ತಹಶೀಲ್ದಾರ್ ಮಹೇಶ್ ಮಾತನಾಡಿ, ಸರ್ಕಾರದ ಪ್ರತಿಷ್ಠಿತ ಸಕಾಲ ಯೋಜನೆಯು ಪ್ರಾರಂಭವಾಗಿ ದಶಕ ಪೂರೈಸಿದೆ. ಸರ್ಕಾರದ ಇಲಾಖೆಗಳು ಸಾರ್ವಜನಿಕರಿಗೆ ನೀಡಬೇಕಾದ ಸೇವೆಗಳನ್ನು ಶೀಘ್ರವಾಗಿ ತಲುಪಿಸಲು ಈ ಯೋಜನೆಯು ಸಹಕಾರಿಯಾಗಿದೆ ಎಂದರು.
ಯೋಜನೆಯಡಿ ರಾಜ್ಯದಲ್ಲಿ ಗುಡಿಬಂಡೆ 17ನೇ ಸ್ಥಾನದಲ್ಲಿದ್ದು, ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಕೆಲವೇ ದಿನಗಳಲ್ಲಿ ಜನರಿಗೆ ಅಗತ್ಯ ಸೇವೆ ತಲುಪಿಸಲಾಗುತ್ತಿದೆ. ಜನರು ಈ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಬೇಕು ತಿಳಿಸಿದರು.
ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರತಾಪ್ ಮಾತನಾಡಿದರು. ತಾ.ಪಂ. ಇ.ಒ. ರವೀಂದ್ರ, ಪ.ಪಂ. ಮುಖ್ಯಾಧಿ ಕಾರಿ ರಾಜಶೇಖರ್, ಬಿಸಿಎಂ ಇಲಾಖೆಯ ರಾಮಯ್ಯ, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ.ವಿಜಯಲಕ್ಷ್ಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶ್ರೀರಾಮಪ್ಪ, ಕೃಷ್ಣಪ್ಪ ಪಾಲ್ಗೊಂಡಿದ್ದರು.