<p><strong>ಚಿಂತಾಮಣಿ:</strong> ‘ದೂರದ ಖಾಸಗಿ ಶಾಲೆಗಳಿಗೆ ಬದಲಾಗಿ ಸ್ವಗ್ರಾಮದ ಸರ್ಕಾರಿ ಶಾಲೆಗಳಿಗೆ ದಾಖಲಿಸುವುದು ಉತ್ತಮ’ ಎಂದು ದಾನಿ ಟಿ.ಎನ್.ಚಂದ್ರಶೇಖರರೆಡ್ಡಿ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಬುರುಡಗುಂಟೆ ಕ್ಲಸ್ಟರ್ನ ತುಳವನೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಿಸಿ ಅವರು ಮಾತನಾಡಿದರು.</p>.<p>‘ಮಕ್ಕಳ ವಿದ್ಯಾಭ್ಯಾಸಕ್ಕಿಂತ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಪೋಷಕರು ಹೊಂದಿರಬೇಕು. ದಿನೇ ದಿನೇ ಕೊರೊನಾ ವೈರಸ್ ನಿಯಂತ್ರಣ ಮೀರಿ ವೇಗವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಮಕ್ಕಳನ್ನು ದೂರದ ಶಾಲೆಗಳಿಗೆ ಅಥವಾ ವಸತಿ ಶಾಲೆಗಳಿಗೆ ದಾಖಲಿಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ’ ಎಂದರು.</p>.<p>ಮುಖ್ಯ ಶಿಕ್ಷಕ ಮೂಡಲಗೊಲ್ಲಹಳ್ಳಿ ಕೆ.ನರಸಿಂಹಪ್ಪ ಮಾತನಾಡಿ, ‘ಕೋವಿಡ್-19 ನಡುವೆಯೂ ವಿದ್ಯಾರ್ಥಿಗಳಿಗೆ ವಿದ್ಯಾಗಮದ ಮೂಲಕ ಕಲಿಕೆಯಾಗುತ್ತಿದೆ. ಮಳೆ, ಗಾಳಿ ಬಂದರೆ ಮಕ್ಕಳನ್ನು ಸಂರಕ್ಷಿಸಲು ಕಷ್ಟ<br />ವಾಗುತ್ತದೆ. ಸಂಕಷ್ಟಗಳ ನಡುವೆಯೂ ಮಕ್ಕಳ ಕಲಿಕೆ ನಿರಂತರವಾಗಿ ನಡೆಯುತ್ತಿದೆ’ ಎಂದರು.</p>.<p>ಸಹಶಿಕ್ಷಕ ಸಿ.ವೆಂಕಟರಮಣ, ವಿ.ಆಂಜನೇಯ ಪೋಷಕರಾದ ವೆಂಕಟರಮಣಪ್ಪ, ರಾಮಾಂಜಿ, ಆಂಜನೇಯ, ರತ್ನಮ್ಮ, ಶ್ಯಾಮಲ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ‘ದೂರದ ಖಾಸಗಿ ಶಾಲೆಗಳಿಗೆ ಬದಲಾಗಿ ಸ್ವಗ್ರಾಮದ ಸರ್ಕಾರಿ ಶಾಲೆಗಳಿಗೆ ದಾಖಲಿಸುವುದು ಉತ್ತಮ’ ಎಂದು ದಾನಿ ಟಿ.ಎನ್.ಚಂದ್ರಶೇಖರರೆಡ್ಡಿ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಬುರುಡಗುಂಟೆ ಕ್ಲಸ್ಟರ್ನ ತುಳವನೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಿಸಿ ಅವರು ಮಾತನಾಡಿದರು.</p>.<p>‘ಮಕ್ಕಳ ವಿದ್ಯಾಭ್ಯಾಸಕ್ಕಿಂತ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಪೋಷಕರು ಹೊಂದಿರಬೇಕು. ದಿನೇ ದಿನೇ ಕೊರೊನಾ ವೈರಸ್ ನಿಯಂತ್ರಣ ಮೀರಿ ವೇಗವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಮಕ್ಕಳನ್ನು ದೂರದ ಶಾಲೆಗಳಿಗೆ ಅಥವಾ ವಸತಿ ಶಾಲೆಗಳಿಗೆ ದಾಖಲಿಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ’ ಎಂದರು.</p>.<p>ಮುಖ್ಯ ಶಿಕ್ಷಕ ಮೂಡಲಗೊಲ್ಲಹಳ್ಳಿ ಕೆ.ನರಸಿಂಹಪ್ಪ ಮಾತನಾಡಿ, ‘ಕೋವಿಡ್-19 ನಡುವೆಯೂ ವಿದ್ಯಾರ್ಥಿಗಳಿಗೆ ವಿದ್ಯಾಗಮದ ಮೂಲಕ ಕಲಿಕೆಯಾಗುತ್ತಿದೆ. ಮಳೆ, ಗಾಳಿ ಬಂದರೆ ಮಕ್ಕಳನ್ನು ಸಂರಕ್ಷಿಸಲು ಕಷ್ಟ<br />ವಾಗುತ್ತದೆ. ಸಂಕಷ್ಟಗಳ ನಡುವೆಯೂ ಮಕ್ಕಳ ಕಲಿಕೆ ನಿರಂತರವಾಗಿ ನಡೆಯುತ್ತಿದೆ’ ಎಂದರು.</p>.<p>ಸಹಶಿಕ್ಷಕ ಸಿ.ವೆಂಕಟರಮಣ, ವಿ.ಆಂಜನೇಯ ಪೋಷಕರಾದ ವೆಂಕಟರಮಣಪ್ಪ, ರಾಮಾಂಜಿ, ಆಂಜನೇಯ, ರತ್ನಮ್ಮ, ಶ್ಯಾಮಲ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>