<p><strong>ಶಿಡ್ಲಘಟ್ಟ:</strong> ‘ರಾಗಿ ಬೆಳೆಗೆ ಪರ್ಯಾಯವಾಗಿ ತೊಗರಿಯನ್ನು ಬೆಳೆಯುವ ಮೂಲಕ ರೈತರು ಆರ್ಥಿಕವಾಗಿ ಲಾಭ ಮಾಡಿಕೊಳ್ಳಬಹುದಾಗಿದೆ. ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳನ್ನು ಹಾಗೂ ನೂತನ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಗುಣಮಟ್ಟದ ಆಹಾರವನ್ನು ಉತ್ಪಾದಿಸಬಹುದು’ ಎಂದು ಉಪಕೃಷಿ ನಿರ್ದೇಶಕ ಡಾ.ಎಂ.ಅನುರೂಪ ತಿಳಿಸಿದರು.</p>.<p>ತಾಲ್ಲೂಕಿನ ಚೌಡಸಂದ್ರ ಗ್ರಾಮದ ಎಂ.ಕೃಷ್ಣಪ್ಪ ಅವರ ತೋಟದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ನಡೆದ ತೊಗರಿಬೆಳೆ ಕ್ಷೇತ್ರೋತ್ಸವದಲ್ಲಿ ಅವರು ಮಾತನಾಡಿದರು.</p>.<p>ಕೃಷಿ ವಿಜ್ಞಾನ ಕೇಂದ್ರದ ಡಾ.ಎಂ.ಮಂಜುನಾಥ್ ಮಾತನಾಡಿ, ‘ಮಣ್ಣಿನ ಆರೋಗ್ಯವನ್ನು ಕಾಪಾಡುವುದರಿಂದ ಕೀಟ ಮತ್ತು ರೋಗಗಳ ಭಾದೆ ನಿಯಂತ್ರಿಸಿ ಗುಣಮಟ್ಟದ ಆಹಾರ ಉತ್ಪಾದಿಸಬಹುದು’ ಎಂದರು.</p>.<p>ಬೇಸಾಯ ಶಾಸ್ತ್ರಜ್ಞ ಡಾ.ವಿಶ್ವನಾಥ್ ಮಾತನಾಡಿ, ತೊಗರಿ ಬೆಳೆ ಬೆಳೆಯಲು ಅಂತರ ಕಾಪಾಡುವುದು, ಕುಡಿ ಚಿವುಟುವುದು, ಮುಂತಾದ ಕ್ರಮಗಳಿಂದ ಇಳುವರಿಯನ್ನು ಹೆಚ್ಚಿಸಬಹುದಾಗಿದೆ. ವೇಸ್ಟ್ ಡೀಕಂಪೋಸರ್ ಬಳಸಿ ತೊಗರಿ ಕಡ್ಡಿಗಳನ್ನು ಸಾವಯವ ಗೊಬ್ಬರವನ್ನಾಗಿ ಪರಿವರ್ತಿಸಬಹುದು ಎಂದರು.</p>.<p>ಡಾ.ವಿನೋದ, ಆತ್ಮಾ ಯೋಜನೆ ಉಪ ಯೋಜನಾ ನಿರ್ದೇಶಕ ಸತೀಶ್ ಕುಮಾರ್, ಕೃಷಿ ಅಧಿಕಾರಿಗಳಾದ ಎಂ.ಶ್ರೀನಿವಾಸ್, ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ ಎನ್.ಅಶ್ವತ್ಥನಾರಾಯಣ, ಸಹಾಯಕ ಅಧಿಕಾರಿ ಆಶಾರಾಣಿ, ರೈತರಾದ ಗೋಪಾಲಗೌಡ, ವೆಂಕಟಸ್ವಾಮಿರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ‘ರಾಗಿ ಬೆಳೆಗೆ ಪರ್ಯಾಯವಾಗಿ ತೊಗರಿಯನ್ನು ಬೆಳೆಯುವ ಮೂಲಕ ರೈತರು ಆರ್ಥಿಕವಾಗಿ ಲಾಭ ಮಾಡಿಕೊಳ್ಳಬಹುದಾಗಿದೆ. ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳನ್ನು ಹಾಗೂ ನೂತನ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಗುಣಮಟ್ಟದ ಆಹಾರವನ್ನು ಉತ್ಪಾದಿಸಬಹುದು’ ಎಂದು ಉಪಕೃಷಿ ನಿರ್ದೇಶಕ ಡಾ.ಎಂ.ಅನುರೂಪ ತಿಳಿಸಿದರು.</p>.<p>ತಾಲ್ಲೂಕಿನ ಚೌಡಸಂದ್ರ ಗ್ರಾಮದ ಎಂ.ಕೃಷ್ಣಪ್ಪ ಅವರ ತೋಟದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ನಡೆದ ತೊಗರಿಬೆಳೆ ಕ್ಷೇತ್ರೋತ್ಸವದಲ್ಲಿ ಅವರು ಮಾತನಾಡಿದರು.</p>.<p>ಕೃಷಿ ವಿಜ್ಞಾನ ಕೇಂದ್ರದ ಡಾ.ಎಂ.ಮಂಜುನಾಥ್ ಮಾತನಾಡಿ, ‘ಮಣ್ಣಿನ ಆರೋಗ್ಯವನ್ನು ಕಾಪಾಡುವುದರಿಂದ ಕೀಟ ಮತ್ತು ರೋಗಗಳ ಭಾದೆ ನಿಯಂತ್ರಿಸಿ ಗುಣಮಟ್ಟದ ಆಹಾರ ಉತ್ಪಾದಿಸಬಹುದು’ ಎಂದರು.</p>.<p>ಬೇಸಾಯ ಶಾಸ್ತ್ರಜ್ಞ ಡಾ.ವಿಶ್ವನಾಥ್ ಮಾತನಾಡಿ, ತೊಗರಿ ಬೆಳೆ ಬೆಳೆಯಲು ಅಂತರ ಕಾಪಾಡುವುದು, ಕುಡಿ ಚಿವುಟುವುದು, ಮುಂತಾದ ಕ್ರಮಗಳಿಂದ ಇಳುವರಿಯನ್ನು ಹೆಚ್ಚಿಸಬಹುದಾಗಿದೆ. ವೇಸ್ಟ್ ಡೀಕಂಪೋಸರ್ ಬಳಸಿ ತೊಗರಿ ಕಡ್ಡಿಗಳನ್ನು ಸಾವಯವ ಗೊಬ್ಬರವನ್ನಾಗಿ ಪರಿವರ್ತಿಸಬಹುದು ಎಂದರು.</p>.<p>ಡಾ.ವಿನೋದ, ಆತ್ಮಾ ಯೋಜನೆ ಉಪ ಯೋಜನಾ ನಿರ್ದೇಶಕ ಸತೀಶ್ ಕುಮಾರ್, ಕೃಷಿ ಅಧಿಕಾರಿಗಳಾದ ಎಂ.ಶ್ರೀನಿವಾಸ್, ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ ಎನ್.ಅಶ್ವತ್ಥನಾರಾಯಣ, ಸಹಾಯಕ ಅಧಿಕಾರಿ ಆಶಾರಾಣಿ, ರೈತರಾದ ಗೋಪಾಲಗೌಡ, ವೆಂಕಟಸ್ವಾಮಿರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>