ಪ್ರತೀ ಸಮಾಜಕ್ಕೂ ಆದರ್ಶಪ್ರಾಯರಾದ ಗುರುಗಳು ಮತ್ತು ಮಾರ್ಗದರ್ಶಕರು ನೆಲೆಸಿದ್ದಾರೆ. ಸಮಾಜದಲ್ಲಿ ಮೌಲ್ಯಗಳು, ಗೌರವ ಹಾಗೂ ಶ್ರೇಷ್ಠತೆ ಹೊಂದಬೇಕಾದರೆ ಹಿರಿಯರ ಮಾರ್ಗದರ್ಶನದಲ್ಲಿ ಸಾಗಬೇಕಾಗಿದೆ. ಸರ್ಕಾರ ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಸಾಕಷ್ಟು ಯೋಜನೆಗಳಡಿ ಅನುದಾನ ನೀಡುತ್ತಿದೆ. ಇದನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಬೇಕು ಎಂದು ಹೇಳಿದರು.