<p><strong>ಚಿಕ್ಕಬಳ್ಳಾಪುರ</strong>: ‘ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗಬೇಕು ಮತ್ತು ಸಹಕಾರ ನೀಡಬೇಕು ಎಂದು ದೇವೇಗೌಡರು ಪ್ರಜ್ವಲ್ಗೆ ಎಚ್ಚರಿಕೆ ನೀಡಿದ್ದರು. ನಾನು ಸಹ ಮನವಿ ಮಾಡಿದ್ದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.</p><p>‘ನಮ್ಮ ಮನವಿಗೆ ಓಗೊಟ್ಟು ವಿಚಾರಣೆಗೆ ಹಾಜರಾಗುವುದಾಗಿ ಪ್ರಜ್ವಲ್ ಹೇಳಿದ್ದಾನೆ. ಇದು ನಮಗೂ ಸಮಾಧಾನ ತಂದಿದೆ’ ಎಂದು ನಗರದಲ್ಲಿ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p><p>‘ಜೆಡಿಎಸ್ ಕಾರ್ಯಕರ್ತರ ನೋವಿಗೆ ಸ್ಪಂದಿಸಿ ಕ್ಷಮೆ ಕೋರುವಂತೆ ಹೇಳಿದ್ದೆವು. ಆ ಪ್ರಕಾರ ಕ್ಷಮೆ ಕೋರಿದ್ದಾನೆ. ಪಕ್ಷದ ಕಾರ್ಯಕರ್ತರ ಮೇಲೆ ಮಮತೆ ಇದೆ ಎನ್ನುವುದನ್ನು ತೋರಿಸಿಕೊಂಡಿದ್ದಾನೆ. ನನಗೆ ಸಮಾಧಾನವಿದೆ’ ಎಂದರು.</p><p>ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದರೆ ಪೆನ್ಡ್ರೈವ್ ಕೊಟ್ಟ ಅವರೇ (ಕಾಂಗ್ರೆಸ್) ಸಿಕ್ಕಿಹಾಕಿಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.</p><p>ಕೆಲವು ಸಚಿವರು ತಮ್ಮ ಇಲಾಖೆ ನಿರ್ವಹಣೆಗಿಂತ ಪ್ರಜ್ವಲ್ ರೇವಣ್ಣ ಪ್ರಕರಣದ ವಕೀಲಿಕೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.</p><p>‘ಶುಂಠಿ ಬೆಳೆದವರು ಬೀದಿಗೆ ಬಂದಿದ್ದಾರೆ. ಹೆಣ್ಣು ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ಸರ್ಕಾರ ಮಾತ್ರ ಪ್ರಜ್ವಲ್ ಪ್ರಕರಣಕ್ಕೆ ದೊಡ್ಡ ಪ್ರಚಾರ ಕೊಡುತ್ತಿದೆ. ಇದರಿಂದ ಏನು ಸಾಧನೆ ಮಾಡುತ್ತೀರಿ’ ಎಂದು ಪ್ರಶ್ನಿಸಿದರು.</p><p>‘ಇದು ಯಾರೂ ಬೆನ್ನು ತಟ್ಟುವ ಪ್ರಕರಣವಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ವಾತಾವರಣ ದಲ್ಲಿ ತನಿಖೆ ನಡೆಯುತ್ತದೆಯೇ ಎನ್ನುವುದೇ ನನ್ನ ಸಂಶಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ‘ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗಬೇಕು ಮತ್ತು ಸಹಕಾರ ನೀಡಬೇಕು ಎಂದು ದೇವೇಗೌಡರು ಪ್ರಜ್ವಲ್ಗೆ ಎಚ್ಚರಿಕೆ ನೀಡಿದ್ದರು. ನಾನು ಸಹ ಮನವಿ ಮಾಡಿದ್ದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.</p><p>‘ನಮ್ಮ ಮನವಿಗೆ ಓಗೊಟ್ಟು ವಿಚಾರಣೆಗೆ ಹಾಜರಾಗುವುದಾಗಿ ಪ್ರಜ್ವಲ್ ಹೇಳಿದ್ದಾನೆ. ಇದು ನಮಗೂ ಸಮಾಧಾನ ತಂದಿದೆ’ ಎಂದು ನಗರದಲ್ಲಿ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p><p>‘ಜೆಡಿಎಸ್ ಕಾರ್ಯಕರ್ತರ ನೋವಿಗೆ ಸ್ಪಂದಿಸಿ ಕ್ಷಮೆ ಕೋರುವಂತೆ ಹೇಳಿದ್ದೆವು. ಆ ಪ್ರಕಾರ ಕ್ಷಮೆ ಕೋರಿದ್ದಾನೆ. ಪಕ್ಷದ ಕಾರ್ಯಕರ್ತರ ಮೇಲೆ ಮಮತೆ ಇದೆ ಎನ್ನುವುದನ್ನು ತೋರಿಸಿಕೊಂಡಿದ್ದಾನೆ. ನನಗೆ ಸಮಾಧಾನವಿದೆ’ ಎಂದರು.</p><p>ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದರೆ ಪೆನ್ಡ್ರೈವ್ ಕೊಟ್ಟ ಅವರೇ (ಕಾಂಗ್ರೆಸ್) ಸಿಕ್ಕಿಹಾಕಿಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.</p><p>ಕೆಲವು ಸಚಿವರು ತಮ್ಮ ಇಲಾಖೆ ನಿರ್ವಹಣೆಗಿಂತ ಪ್ರಜ್ವಲ್ ರೇವಣ್ಣ ಪ್ರಕರಣದ ವಕೀಲಿಕೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.</p><p>‘ಶುಂಠಿ ಬೆಳೆದವರು ಬೀದಿಗೆ ಬಂದಿದ್ದಾರೆ. ಹೆಣ್ಣು ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ಸರ್ಕಾರ ಮಾತ್ರ ಪ್ರಜ್ವಲ್ ಪ್ರಕರಣಕ್ಕೆ ದೊಡ್ಡ ಪ್ರಚಾರ ಕೊಡುತ್ತಿದೆ. ಇದರಿಂದ ಏನು ಸಾಧನೆ ಮಾಡುತ್ತೀರಿ’ ಎಂದು ಪ್ರಶ್ನಿಸಿದರು.</p><p>‘ಇದು ಯಾರೂ ಬೆನ್ನು ತಟ್ಟುವ ಪ್ರಕರಣವಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ವಾತಾವರಣ ದಲ್ಲಿ ತನಿಖೆ ನಡೆಯುತ್ತದೆಯೇ ಎನ್ನುವುದೇ ನನ್ನ ಸಂಶಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>