<p><strong>ಶಿಡ್ಲಘಟ್ಟ: </strong>ಗ್ರಾಮೀಣ ಪರಿಸ್ಥಿತಿಯನ್ನು ವಿದ್ಯಾರ್ಥಿಗಳು ಅವಲೋಕಿಸಬೇಕು. ಕೃಷಿ ಸಮಸ್ಯೆಗಳನ್ನು ಅರಿಯಬೇಕು, ವಿಶ್ಲೇಷಿಸಬೇಕು ಮತ್ತು ಪರಿಹಾರಗಳನ್ನು ಕಂಡುಹಿಡಿಯಲು ಕಾರ್ಯತತ್ಪರರಾಗಬೇಕು ಎಂಬ ಉದ್ದೇಶದಿಂದ ಗ್ರಾಮೀಣ ಜಾಗೃತಿಯ ಕಾರ್ಯಾನುಭವದಲ್ಲಿ ಮೂರು ತಿಂಗಳು ಹಳ್ಳಿಯಲ್ಲಿ ಕೃಷಿ ಪದವಿ ವಿದ್ಯಾರ್ಥಿಗಳು ವಾಸ ಮಾಡಿದ್ದರು ಎಂದು ಕೃಷಿ ಮಹಾವಿದ್ಯಾಲಯದ ಡೀನ್ ಡಾ.ಎನ್.ಬಿ.ಪ್ರಕಾಶ್ತಿಳಿಸಿದರು.</p>.<p>ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಬುಧವಾರ ಅಂತಿಮ ವರ್ಷದ ಕೃಷಿ ಪದವಿ ವಿದ್ಯಾರ್ಥಿಗಳ ತೊಂಬತ್ತು ದಿನಗಳ ಗ್ರಾಮೀಣ ಕಾರ್ಯಾನುಭವದ ಕೊನೆಯ ದಿನದ ಕೃಷಿ ವಸ್ತು ಪ್ರದರ್ಶನ ಮತ್ತು ವಿಚಾರಗೋಷ್ಠಿಯ ‘ಬೋದಗೂರು ಕೃಷಿ ಕ್ರಾಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ವಿದ್ಯಾರ್ಥಿಗಳ ಮೂರು ತಿಂಗಳ ಕಾರ್ಯಚಟುವಟಿಕೆಗಳ ಚಿತ್ರ ಸಹಿತ ಮಾಹಿತಿಯುಳ್ಳ ಪುಸ್ತಕ ‘ರಾವೆ ದರ್ಪಣ’ವನ್ನು ಬಿಡುಗಡೆ ಮಾಡಿದ ಶಿಡ್ಲಘಟ್ಟ ರೇಷ್ಮೆ ಉತ್ಪಾದಕ ಕಂಪೆನಿ ಅಧ್ಯಕ್ಷ ಬೋದಗೂರು ವೆಂಕಟಸ್ವಾಮಿರೆಡ್ಡಿ ಮಾತನಾಡಿ, ‘ರೈತರಿಂದ ಕಲಿಯುವುದು ಮತ್ತು ರೈತರಿಗೆ ಕಲಿಸುವುದು’ ಎಂಬ ಉದ್ದೇಶದಿಂದ ಗ್ರಾಮೀಣ ಜಾಗೃತಿಯ ಕಾರ್ಯಾನುಭವದಲ್ಲಿ ಮೂರು ತಿಂಗಳು ಹಳ್ಳಿಯಲ್ಲಿ ವಾಸಿಸಿದ ವಿದ್ಯಾರ್ಥಿಗಳು ಬೋದಗೂರಿನ ಮನೆಮಕ್ಕಳಾಗಿದ್ದಾರೆ ಎಂದರು.</p>.<p>ಕೃಷಿ ವಿಶ್ವವಿದ್ಯಾನಿಲಯದ ಡಾ.ಕೆ.ಮುರಳಿ ಮೋಹನ್, ಡಾ.ಸಿ.ನಾರಾಯಣಸ್ವಾಮಿ, ಡಾ.ಎಸ್.ಗಣೇಶಮೂರ್ತಿ, ಡಾ.ಸಂದೀಪ್, ಡಾ.ಪುಷ್ಪ, ಡಾ.ಸವಿತಾ, ಶಿಬಿರಾಧಿಕಾರಿ ಡಾ.ವೈ.ಎನ್.ಶಿವಲಿಂಗಯ್ಯ, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಕೆ.ತಿಮ್ಮರಾಜು, ಪಶುವೈದ್ಯಾಧಿಕಾರಿ ಡಾ.ಬಿ.ಕೆ.ರಮೇಶ್, ಪಿಡಿಒ ಕಾತ್ಯಾಯಿನಿ, ಸದಸ್ಯ ವಿಜಯೇಂದ್ರ, ವಿಶ್ವಾಸ್, ಬಿ.ಎನ್.ಸಂತೋಷ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ: </strong>ಗ್ರಾಮೀಣ ಪರಿಸ್ಥಿತಿಯನ್ನು ವಿದ್ಯಾರ್ಥಿಗಳು ಅವಲೋಕಿಸಬೇಕು. ಕೃಷಿ ಸಮಸ್ಯೆಗಳನ್ನು ಅರಿಯಬೇಕು, ವಿಶ್ಲೇಷಿಸಬೇಕು ಮತ್ತು ಪರಿಹಾರಗಳನ್ನು ಕಂಡುಹಿಡಿಯಲು ಕಾರ್ಯತತ್ಪರರಾಗಬೇಕು ಎಂಬ ಉದ್ದೇಶದಿಂದ ಗ್ರಾಮೀಣ ಜಾಗೃತಿಯ ಕಾರ್ಯಾನುಭವದಲ್ಲಿ ಮೂರು ತಿಂಗಳು ಹಳ್ಳಿಯಲ್ಲಿ ಕೃಷಿ ಪದವಿ ವಿದ್ಯಾರ್ಥಿಗಳು ವಾಸ ಮಾಡಿದ್ದರು ಎಂದು ಕೃಷಿ ಮಹಾವಿದ್ಯಾಲಯದ ಡೀನ್ ಡಾ.ಎನ್.ಬಿ.ಪ್ರಕಾಶ್ತಿಳಿಸಿದರು.</p>.<p>ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಬುಧವಾರ ಅಂತಿಮ ವರ್ಷದ ಕೃಷಿ ಪದವಿ ವಿದ್ಯಾರ್ಥಿಗಳ ತೊಂಬತ್ತು ದಿನಗಳ ಗ್ರಾಮೀಣ ಕಾರ್ಯಾನುಭವದ ಕೊನೆಯ ದಿನದ ಕೃಷಿ ವಸ್ತು ಪ್ರದರ್ಶನ ಮತ್ತು ವಿಚಾರಗೋಷ್ಠಿಯ ‘ಬೋದಗೂರು ಕೃಷಿ ಕ್ರಾಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ವಿದ್ಯಾರ್ಥಿಗಳ ಮೂರು ತಿಂಗಳ ಕಾರ್ಯಚಟುವಟಿಕೆಗಳ ಚಿತ್ರ ಸಹಿತ ಮಾಹಿತಿಯುಳ್ಳ ಪುಸ್ತಕ ‘ರಾವೆ ದರ್ಪಣ’ವನ್ನು ಬಿಡುಗಡೆ ಮಾಡಿದ ಶಿಡ್ಲಘಟ್ಟ ರೇಷ್ಮೆ ಉತ್ಪಾದಕ ಕಂಪೆನಿ ಅಧ್ಯಕ್ಷ ಬೋದಗೂರು ವೆಂಕಟಸ್ವಾಮಿರೆಡ್ಡಿ ಮಾತನಾಡಿ, ‘ರೈತರಿಂದ ಕಲಿಯುವುದು ಮತ್ತು ರೈತರಿಗೆ ಕಲಿಸುವುದು’ ಎಂಬ ಉದ್ದೇಶದಿಂದ ಗ್ರಾಮೀಣ ಜಾಗೃತಿಯ ಕಾರ್ಯಾನುಭವದಲ್ಲಿ ಮೂರು ತಿಂಗಳು ಹಳ್ಳಿಯಲ್ಲಿ ವಾಸಿಸಿದ ವಿದ್ಯಾರ್ಥಿಗಳು ಬೋದಗೂರಿನ ಮನೆಮಕ್ಕಳಾಗಿದ್ದಾರೆ ಎಂದರು.</p>.<p>ಕೃಷಿ ವಿಶ್ವವಿದ್ಯಾನಿಲಯದ ಡಾ.ಕೆ.ಮುರಳಿ ಮೋಹನ್, ಡಾ.ಸಿ.ನಾರಾಯಣಸ್ವಾಮಿ, ಡಾ.ಎಸ್.ಗಣೇಶಮೂರ್ತಿ, ಡಾ.ಸಂದೀಪ್, ಡಾ.ಪುಷ್ಪ, ಡಾ.ಸವಿತಾ, ಶಿಬಿರಾಧಿಕಾರಿ ಡಾ.ವೈ.ಎನ್.ಶಿವಲಿಂಗಯ್ಯ, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಕೆ.ತಿಮ್ಮರಾಜು, ಪಶುವೈದ್ಯಾಧಿಕಾರಿ ಡಾ.ಬಿ.ಕೆ.ರಮೇಶ್, ಪಿಡಿಒ ಕಾತ್ಯಾಯಿನಿ, ಸದಸ್ಯ ವಿಜಯೇಂದ್ರ, ವಿಶ್ವಾಸ್, ಬಿ.ಎನ್.ಸಂತೋಷ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>