<p><strong>ಚಿಂತಾಮಣಿ:</strong> ‘ಪರಿಸರವೂ ಉಳಿಯಬೇಕು, ಜೀವವೂ ಉಳಿಯಬೇಕು. ಹಾಗಾಗಿ, ಚಾಲಕರು ಹೊಗೆರಹಿತ ವಾಹನ ಚಲಾಯಿಸಲು ಮುಂದಾಗಬೇಕು’ ಎಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗಿರೆಡ್ಡಿ ಸಲಹೆ ನೀಡಿದರು.</p>.<p>ನಗರದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ವಾಯುಮಾಲಿನ್ಯ ಮಾಸಾಚರಣೆ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸುಸ್ಥಿತಿಯಲ್ಲಿರುವ ವಾಹನಗಳನ್ನು ಮಾತ್ರ ರಸ್ತೆಗೆ ತರಬೇಕು. ವಾಹನಗಳಿಗೆ ಕಲಬೆರಕೆ ಇಂಧನ ಬಳಸಬಾರದು. ಎಂಜಿನ್ ದುರಸ್ತಿ ಮಾಡಿಸದಿರುವುದು, ಸೈಲೆನ್ಸರ್ನಲ್ಲಿ ಹೊಗೆ ಬರುವಂತೆ ಇರಬಾರದು. ಮನುಷ್ಯರ ಆರೋಗ್ಯ ಕೆಟ್ಟರೆ ವೈದ್ಯರಲ್ಲಿಗೆ ಹೋಗುತ್ತೇವೆ. ಹಾಗೆಯೇ ವಾಹನ ಕೆಟ್ಟರೆ ಮೆಕಾನಿಕ್ ಬಳಿಗೆ ಹೋಗಿ ದುರಸ್ತಿಪಡಿಸಬೇಕು ಎಂದು ಹೇಳಿದರು.</p>.<p>ಪ್ರತಿ ಆರು ತಿಂಗಳಿಗೊಮ್ಮೆ ವಾಹನಗಳ ಎಮಿಷನ್ ಟೆಸ್ಟ್ ಮಾಡಿಸಬೇಕು. ಕಲಬೆರಕೆ ಇಂಧನ ಅಥವಾ ಎಂಜಿನ್ ಕೆಟ್ಟಿದ್ದರೆ ಹೊಗೆ ಅಧಿಕವಾಗಿ ಪರಿಸರ ಕೆಡುತ್ತದೆ. ಜತೆಗೆ ರಸ್ತೆಯಲ್ಲಿ ಚಲಿಸುವ ಇತರರಿಗೂ ತೊಂದರೆಯಾಗುತ್ತದೆ ಎಂದರು.</p>.<p>ಸಾರಿಗೆ ಅಧೀಕ್ಷಕ ವೇಣುಗೋಪಾಲ್ ಮಾತನಾಡಿ, ವಾಹನ ಮಾಲೀಕರು, ಚಾಲಕರು ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಕಾನೂನುಗಳು ಬದಲಾಗಿದ್ದು ತುಂಬಾ ಕಠಿಣಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನವೂ ಇದೆ. ಹಾಗಾಗಿ, ನಿಯಮ ಉಲ್ಲಂಘಿಸಿದರೆ ಅಧಿಕ ದಂಡ ವಿಧಿಸಲಾಗುತ್ತದೆ. ದ್ವಿಚಕ್ರವಾಹನ ಮತ್ತು ತ್ರಿಚಕ್ರವಾಹನಕ್ಕೆ ₹ 1,500 ಹಾಗೂ ಇತರೆ ಎಲ್ಲ ವಾಹನಗಳಿಗೆ ₹ 3 ಸಾವಿರ ದಂಡ ಹಾಕಲಾಗುತ್ತದೆ ಎಂದು ಹೇಳಿದರು.</p>.<p>ಮನೆಯಿಂದ ವಾಹನವನ್ನು ತೆಗೆದುಕೊಂಡು ರಸ್ತೆಗೆ ಬರಬೇಕಾದರೆ ಎಲ್ಲ ದಾಖಲಾತಿಗಳು ಜತೆಯಲ್ಲಿರಬೇಕು. ಚಾಲನಾ ಪರವಾನಗಿ, ವಿಮಾ ಪಾಲಿಸಿ, ಎಫ್.ಸಿ, ಎಮಿಷನ್ ಟೆಸ್ಟ್ ಸರ್ಟಿಫಿಕೆಟ್ ಇರುವುದನ್ನು ಖಾತ್ರಿಪಡಿಸಿಕೊಂಡು ವಾಹನ ಚಾಲನೆ ಮಾಡಬೇಕು. ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಬೇಕು ಎಂದು ಸೂಚಿಸಿದರು.</p>.<p>ಇನ್ಸ್ಪೆಕ್ಟರ್ ಗೋಪಾಲಕೃಷ್ಣ ಮಾತನಾಡಿ, ವಾಯುಮಾಲಿನ್ಯ ನಿಯಂತ್ರಿಸುವಲ್ಲಿ ಚಾಲಕರು ಮತ್ತು ಸಾರ್ವಜನಿಕರ ಪಾತ್ರ ಮಹತ್ವದ್ದಾಗಿದೆ. ವಾಯುಮಾಲಿನ್ಯದಿಂದ ಜನರು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಈ ಕುರಿತು ಜನಜಾಗೃತಿ ಮೂಡಿಸಲು ಜಾಥಾ ಆಯೋಜಿಸಲಾಗಿದೆ ಎಂದರು.</p>.<p>ನಗರದ ಪ್ರಮುಖ ರಸ್ತೆಗಳಲ್ಲಿ ವಾಯುಮಾಲಿನ್ಯ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಫಲಕಗಳು, ಘೋಷಣೆಗಳೊಂದಿಗೆ ದ್ವಿಚಕ್ರವಾಹನಗಳ ಜಾಥಾ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ‘ಪರಿಸರವೂ ಉಳಿಯಬೇಕು, ಜೀವವೂ ಉಳಿಯಬೇಕು. ಹಾಗಾಗಿ, ಚಾಲಕರು ಹೊಗೆರಹಿತ ವಾಹನ ಚಲಾಯಿಸಲು ಮುಂದಾಗಬೇಕು’ ಎಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗಿರೆಡ್ಡಿ ಸಲಹೆ ನೀಡಿದರು.</p>.<p>ನಗರದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ವಾಯುಮಾಲಿನ್ಯ ಮಾಸಾಚರಣೆ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸುಸ್ಥಿತಿಯಲ್ಲಿರುವ ವಾಹನಗಳನ್ನು ಮಾತ್ರ ರಸ್ತೆಗೆ ತರಬೇಕು. ವಾಹನಗಳಿಗೆ ಕಲಬೆರಕೆ ಇಂಧನ ಬಳಸಬಾರದು. ಎಂಜಿನ್ ದುರಸ್ತಿ ಮಾಡಿಸದಿರುವುದು, ಸೈಲೆನ್ಸರ್ನಲ್ಲಿ ಹೊಗೆ ಬರುವಂತೆ ಇರಬಾರದು. ಮನುಷ್ಯರ ಆರೋಗ್ಯ ಕೆಟ್ಟರೆ ವೈದ್ಯರಲ್ಲಿಗೆ ಹೋಗುತ್ತೇವೆ. ಹಾಗೆಯೇ ವಾಹನ ಕೆಟ್ಟರೆ ಮೆಕಾನಿಕ್ ಬಳಿಗೆ ಹೋಗಿ ದುರಸ್ತಿಪಡಿಸಬೇಕು ಎಂದು ಹೇಳಿದರು.</p>.<p>ಪ್ರತಿ ಆರು ತಿಂಗಳಿಗೊಮ್ಮೆ ವಾಹನಗಳ ಎಮಿಷನ್ ಟೆಸ್ಟ್ ಮಾಡಿಸಬೇಕು. ಕಲಬೆರಕೆ ಇಂಧನ ಅಥವಾ ಎಂಜಿನ್ ಕೆಟ್ಟಿದ್ದರೆ ಹೊಗೆ ಅಧಿಕವಾಗಿ ಪರಿಸರ ಕೆಡುತ್ತದೆ. ಜತೆಗೆ ರಸ್ತೆಯಲ್ಲಿ ಚಲಿಸುವ ಇತರರಿಗೂ ತೊಂದರೆಯಾಗುತ್ತದೆ ಎಂದರು.</p>.<p>ಸಾರಿಗೆ ಅಧೀಕ್ಷಕ ವೇಣುಗೋಪಾಲ್ ಮಾತನಾಡಿ, ವಾಹನ ಮಾಲೀಕರು, ಚಾಲಕರು ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಕಾನೂನುಗಳು ಬದಲಾಗಿದ್ದು ತುಂಬಾ ಕಠಿಣಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನವೂ ಇದೆ. ಹಾಗಾಗಿ, ನಿಯಮ ಉಲ್ಲಂಘಿಸಿದರೆ ಅಧಿಕ ದಂಡ ವಿಧಿಸಲಾಗುತ್ತದೆ. ದ್ವಿಚಕ್ರವಾಹನ ಮತ್ತು ತ್ರಿಚಕ್ರವಾಹನಕ್ಕೆ ₹ 1,500 ಹಾಗೂ ಇತರೆ ಎಲ್ಲ ವಾಹನಗಳಿಗೆ ₹ 3 ಸಾವಿರ ದಂಡ ಹಾಕಲಾಗುತ್ತದೆ ಎಂದು ಹೇಳಿದರು.</p>.<p>ಮನೆಯಿಂದ ವಾಹನವನ್ನು ತೆಗೆದುಕೊಂಡು ರಸ್ತೆಗೆ ಬರಬೇಕಾದರೆ ಎಲ್ಲ ದಾಖಲಾತಿಗಳು ಜತೆಯಲ್ಲಿರಬೇಕು. ಚಾಲನಾ ಪರವಾನಗಿ, ವಿಮಾ ಪಾಲಿಸಿ, ಎಫ್.ಸಿ, ಎಮಿಷನ್ ಟೆಸ್ಟ್ ಸರ್ಟಿಫಿಕೆಟ್ ಇರುವುದನ್ನು ಖಾತ್ರಿಪಡಿಸಿಕೊಂಡು ವಾಹನ ಚಾಲನೆ ಮಾಡಬೇಕು. ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಬೇಕು ಎಂದು ಸೂಚಿಸಿದರು.</p>.<p>ಇನ್ಸ್ಪೆಕ್ಟರ್ ಗೋಪಾಲಕೃಷ್ಣ ಮಾತನಾಡಿ, ವಾಯುಮಾಲಿನ್ಯ ನಿಯಂತ್ರಿಸುವಲ್ಲಿ ಚಾಲಕರು ಮತ್ತು ಸಾರ್ವಜನಿಕರ ಪಾತ್ರ ಮಹತ್ವದ್ದಾಗಿದೆ. ವಾಯುಮಾಲಿನ್ಯದಿಂದ ಜನರು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಈ ಕುರಿತು ಜನಜಾಗೃತಿ ಮೂಡಿಸಲು ಜಾಥಾ ಆಯೋಜಿಸಲಾಗಿದೆ ಎಂದರು.</p>.<p>ನಗರದ ಪ್ರಮುಖ ರಸ್ತೆಗಳಲ್ಲಿ ವಾಯುಮಾಲಿನ್ಯ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಫಲಕಗಳು, ಘೋಷಣೆಗಳೊಂದಿಗೆ ದ್ವಿಚಕ್ರವಾಹನಗಳ ಜಾಥಾ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>