<p>ಚಿಂತಾಮಣಿ: ತಾಲ್ಲೂಕಿನ ಅಕ್ಕಿಮಂಗಲ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷ ಆಗಿ ವೆಂಕಟೇಶಪ್ಪ, ಉಪಾಧ್ಯಕ್ಷ ಆಗಿ ಹನುಮಪ್ಪ ಅವಿರೋಧವಾಗಿ ಆಯ್ಕೆಯಾದರು.</p>.<p>ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶಪ್ಪ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹನುಮಪ್ಪ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಣೆ ಮಾಡಿದರು.</p>.<p>ನೂತನ ಅಧ್ಯಕ್ಷ ವೆಂಕಟೇಶಪ್ಪ ಮಾತನಾಡಿ, ಗ್ರಾಮದಲ್ಲಿ ಸೌಹಾರ್ದತೆಯ ಹೊಸ ಇತಿಹಾಸ ನಿರ್ಮಾಣವಾಗಿದ್ದು ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರು, ಅಧ್ಯಕ್ಷ, ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದಲ್ಲಿ ಯಾವುದೇ ಪಕ್ಷ ಬೇಧವಿಲ್ಲದೆ ಎಲ್ಲ ನಿರ್ದೇಶಕರ ಸಹಕರದಿಂದ ಇದೇ ವಾತಾವರಣ ಮುಂದುವರೆಸಿಕೊಂಡು ಹೋಗುತ್ತೇವೆ ಎಂದರು.</p>.<p>ಸರ್ಕಾರ ಮತ್ತು ಒಕ್ಕೂಟದಿಂದ ಹಾಲು ಉತ್ಪಾದಕರಿಗೆ ದೊರೆಯುವ ಸೌಲಭ್ಯಗಳನ್ನು ಒದಗಿಸಲು ಮತ್ತು ಡೇರಿಯ ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.</p>.<p>ನಿರ್ದೇಶಕರಾದ ಎ.ಟಿ.ಚಂದ್ರಶೇಖರ್, ಎಂ. ಮುನಿರಾಮಪ್ಪ, ಎನ್.ಮಂಜುನಾಥ್, ವೆಂಕಟರೆಡ್ಡಿ, ಶ್ರೀನಿವಾಸ್, ಸಾವಿತ್ರಮ್ಮ, ಪಿ.ರವೀಂದ್ರ, ಎ.ಎನ್.ಸುರೇಶ್, ಕವಿತ, ಲಲಿತಮ್ಮ, ಕಾರ್ಯದರ್ಶಿ ಶಿವಕುಮಾರ್, ಮುನಿರೆಡ್ಡಿ, ಬೈರಾರೆಡ್ಡಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-16-928407159</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ತಾಲ್ಲೂಕಿನ ಅಕ್ಕಿಮಂಗಲ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷ ಆಗಿ ವೆಂಕಟೇಶಪ್ಪ, ಉಪಾಧ್ಯಕ್ಷ ಆಗಿ ಹನುಮಪ್ಪ ಅವಿರೋಧವಾಗಿ ಆಯ್ಕೆಯಾದರು.</p>.<p>ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶಪ್ಪ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹನುಮಪ್ಪ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಣೆ ಮಾಡಿದರು.</p>.<p>ನೂತನ ಅಧ್ಯಕ್ಷ ವೆಂಕಟೇಶಪ್ಪ ಮಾತನಾಡಿ, ಗ್ರಾಮದಲ್ಲಿ ಸೌಹಾರ್ದತೆಯ ಹೊಸ ಇತಿಹಾಸ ನಿರ್ಮಾಣವಾಗಿದ್ದು ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರು, ಅಧ್ಯಕ್ಷ, ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದಲ್ಲಿ ಯಾವುದೇ ಪಕ್ಷ ಬೇಧವಿಲ್ಲದೆ ಎಲ್ಲ ನಿರ್ದೇಶಕರ ಸಹಕರದಿಂದ ಇದೇ ವಾತಾವರಣ ಮುಂದುವರೆಸಿಕೊಂಡು ಹೋಗುತ್ತೇವೆ ಎಂದರು.</p>.<p>ಸರ್ಕಾರ ಮತ್ತು ಒಕ್ಕೂಟದಿಂದ ಹಾಲು ಉತ್ಪಾದಕರಿಗೆ ದೊರೆಯುವ ಸೌಲಭ್ಯಗಳನ್ನು ಒದಗಿಸಲು ಮತ್ತು ಡೇರಿಯ ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.</p>.<p>ನಿರ್ದೇಶಕರಾದ ಎ.ಟಿ.ಚಂದ್ರಶೇಖರ್, ಎಂ. ಮುನಿರಾಮಪ್ಪ, ಎನ್.ಮಂಜುನಾಥ್, ವೆಂಕಟರೆಡ್ಡಿ, ಶ್ರೀನಿವಾಸ್, ಸಾವಿತ್ರಮ್ಮ, ಪಿ.ರವೀಂದ್ರ, ಎ.ಎನ್.ಸುರೇಶ್, ಕವಿತ, ಲಲಿತಮ್ಮ, ಕಾರ್ಯದರ್ಶಿ ಶಿವಕುಮಾರ್, ಮುನಿರೆಡ್ಡಿ, ಬೈರಾರೆಡ್ಡಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-16-928407159</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>