ಭಾನುವಾರ ತಹಶೀಲ್ದಾರ್ ಎಂ.ರಾಜಣ್ಣ, ಕೋವಿಡ್ ನೋಡಲ್ ಅಧಿಕಾರಿ ತೇಜಾನಂದರೆಡ್ಡಿ, ತಾಲ್ಲೂಕು ಆರೋಗ್ಯ ಅಧಿಕಾರಿ ಓ.ರತ್ನಮ್ಮ, ಪಿಎಸೈ ಲಕ್ಷ್ಮಿನಾರಾಯಣ, ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಲೀಪುರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಬಗ್ಗೆ ಪರಿಶೀಲಿಸಿ ಲಾಕ್ಡೌನ್ ವೇಳೆ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಕಳೆದ ವಾರವಷ್ಟೇ ಜಿಲ್ಲಾಧಿಕಾರಿ ಆರ್.ಲತಾ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ಕುಮಾರ್ ಅಲೀಪುರಕ್ಕೆ ಭೇಟಿ ಮಾಡಿ ಕೋವಿಡ್ ಕೇರ್ ಆಸ್ಪತ್ರೆಯನ್ನು ಉದ್ಘಾಟನೆ ಮಾಡಿ, ಜನರು ಕೋವಿಡ್ ಬಗ್ಗೆ ಜಾಗೃತಿ ವಹಿಸುವಂತೆ ಮನವಿ ಮಾಡಿದ್ದರು.