ಸಾದಲಿ: ‘ವಿಶ್ವಮಾನವ ಸಂದೇಶ ನೀಡಿ ಬದುಕನ್ನು ದೇಶಕ್ಕಾಗಿ ಮುಡಿಪಾಗಿಟ್ಟಿದ್ದು, ಅಂಬೇಡ್ಕರ್ ಅವರ ಹೆಗ್ಗಳಿಕೆ’ ಎಂದು ಮುಖ್ಯಶಿಕ್ಷಕ ಶಿವಾರೆಡ್ಡಿ ಹೇಳಿದರು.
ಇಲ್ಲಿನ ಸರ್ಕಾರಿ ಪ್ರೌಢಶಾಲೆಯ ರಂಗ ಮಂದಿರದಲ್ಲಿ ಗುರುವಾರ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿಯಾದ ಅಂಬೇಡ್ಕರ್ ಜ್ಞಾನಾರ್ಜನೆಗೆ ತಮ್ಮನ್ನು ಸಮರ್ಪಿಸಿಕೊಂಡರು. ಸಮಾಜ ಮತ್ತು ದೇಶದ ಹತ್ತಾರು ಸಮಸ್ಯೆಗಳಿಗೆ ಪರಿಹಾರ ಕೊಡುವ ಶ್ರೇಷ್ಠ ಸಂವಿಧಾನ ರಚಿಸಿದ್ದಾರೆ ಎಂದು ತಿಳಿಸಿದರು.