ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಜೀವನ ಅನುಕರಣೀಯ: ಶಿವಾರೆಡ್ಡಿ

Last Updated 15 ಏಪ್ರಿಲ್ 2022, 5:11 IST
ಅಕ್ಷರ ಗಾತ್ರ

ಸಾದಲಿ: ‘ವಿಶ್ವಮಾನವ ಸಂದೇಶ ನೀಡಿ ಬದುಕನ್ನು ದೇಶಕ್ಕಾಗಿ ಮುಡಿಪಾಗಿಟ್ಟಿದ್ದು, ಅಂಬೇಡ್ಕರ್ ಅವರ ಹೆಗ್ಗಳಿಕೆ’ ಎಂದು ಮುಖ್ಯಶಿಕ್ಷಕ ಶಿವಾರೆಡ್ಡಿ ಹೇಳಿದರು.

ಇಲ್ಲಿನ ಸರ್ಕಾರಿ ಪ್ರೌಢಶಾಲೆಯ ರಂಗ ಮಂದಿರದಲ್ಲಿ ಗುರುವಾರ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿಯಾದ ಅಂಬೇಡ್ಕರ್ ಜ್ಞಾನಾರ್ಜನೆಗೆ ತಮ್ಮನ್ನು ಸಮರ್ಪಿಸಿಕೊಂಡರು. ಸಮಾಜ ಮತ್ತು ದೇಶದ ಹತ್ತಾರು ಸಮಸ್ಯೆಗಳಿಗೆ ಪರಿಹಾರ ಕೊಡುವ ಶ್ರೇಷ್ಠ ಸಂವಿಧಾನ ರಚಿಸಿದ್ದಾರೆ ಎಂದು ತಿಳಿಸಿದರು.

ಶಿಕ್ಷಕ ಕೆ.ವಿ. ಶ್ರೀನಿವಾಸ್ ಮಾತನಾಡಿದರು. ಶಿಕ್ಷಕರಾದ ಜ್ಯೋತಿ ಗದಗ್, ದಿವ್ಯಾ ಡಿಸೋಜಾ, ದೀಪ್ತಿ, ತಿರುಮಳಪ್ಪ, ಪ್ರಯೋಗಾಲಯ ಸಹಾಯಕ ಶ್ರೀನಿವಾಸ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT