‘ಸಮ್ಮಿಶ್ರ ಸರ್ಕಾರ ಸ್ಥಿರವಾಗಿರಲಿಲ್ಲ. ಅದರಲ್ಲಿ ಕಲಹ, ಪರಸ್ಪರ ಕಚ್ಚಾಟಗಳು ನಡೆಯುತ್ತಿದ್ದವು. ಕೆಲವೇ ಕೆಲ ಕ್ಷೇತ್ರಗಳಿಗೆ ಮಾತ್ರ ಆದ್ಯತೆ ನೀಡಲಾಗಿತ್ತು. ಇಡೀ ರಾಜ್ಯ, ಸಮಾಜ, ಅಭಿವೃದ್ಧಿಯ ಬಗ್ಗೆ ಗಮನ ಹರಿಸಲಿಲ್ಲ. ಇದರಿಂದ ಬೇಸತ್ತ ಶಾಸಕರು ಸ್ಥಳಿಯ ಅಭಿವೃದ್ಧಿಯ ವಿಚಾರವಾಗಿ ಬಿಜೆಪಿ, ಮೋದಿ, ಯಡಿಯೂರಪ್ಪ ಅವರ ಜತೆ ಮುನ್ನಡೆಯುವ ತೀರ್ಮಾನಕ್ಕೆ ಬಂದು ಬಿಜೆಪಿ ಸೇರಿದರು. ಅವರಿಂದಾಗಿ ನಮಗೆ ಸರ್ಕಾರ ರಚಿಸಲು ಸಾಧ್ಯವಾಯಿತು’ ಎಂದು ತಿಳಿಸಿದರು.