<p><strong>ಚಿಕ್ಕಬಳ್ಳಾಪುರ:</strong> ಕೊರೊನಾ ಕೆಲಸದಲ್ಲಿ ನಿರತರಾದ ವೇಳೆ ಸೋಂಕಿನಿಂದ ಮೃತಪಟ್ಟ ಅಂಗನವಾಡಿ ಸಿಬ್ಬಂದಿಯ ಕುಟುಂಬಕ್ಕೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅಂಗನವಾಡಿ ನೌಕರರ ಸಂಘ ಸದಸ್ಯರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಮಂಗಳವಾರ ಎರಡನೇ ದಿನಕ್ಕೆ<br />ಕಾಲಿಟ್ಟಿದೆ.</p>.<p>ಎರಡನೇ ದಿನದ ಪ್ರತಿಭಟನೆಯಲ್ಲಿ ಗೌರಿಬಿನೂರು ತಾಲ್ಲೂಕಿನ ಅಂಗನವಾಡಿ ಕೇಂದ್ರಗಳ ಸಿಬ್ಬಂದಿ ಪಾಲ್ಗೊಂಡಿದ್ದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.</p>.<p>ಸ್ಥಳಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಟರಾಜ್, ನಿರೂಪಣಾಧಿಕಾರಿ ಪದ್ಮರಾಜ್, ಸಿಡಿಪಿಒ ವೆಂಕಟೇಗೌಡ, ಜಿಲ್ಲಾ ಮಟ್ಟದಲ್ಲಿರುವ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಿದ್ದೇವೆ. ಬೇಡಿಕೆಗಳ ಈಡೇರಿಕೆಗಳಿಗೆ ಸಂಬಂಧಿಸಿದಂತೆ ನೀಡಿರುವ ಮನವಿ ಪತ್ರವನ್ನು ಸರ್ಕಾರಕ್ಕೆ ಕಳುಹಿಸಿದ್ದೇವೆ<br />ಎಂದರು.</p>.<p>ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿದ್ಧಗಂಗಪ್ಪ, ಜಿಲ್ಲಾ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ನಾಗರತ್ನಮ್ಮ, ಜಯಮಂಗಲ, ರಾಧಾ, ಕಲ್ಪನ, ವೆಂಕಟಲಕ್ಷ್ಮಮ್ಮ ಹಾಗೂ ಗೌರಿಬಿದನೂರು ತಾಲ್ಲೂಕು ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ<br />ಪಾಲ್ಗೊಂಡಿದ್ದರು.</p>.<p>ಬುಧವಾರ (ಆ.18)ದ ಪ್ರತಿಭಟನೆಯ ನೇತೃತ್ವವನ್ನು ಶಿಡ್ಲಘಟ್ಟ ತಾಲ್ಲೂಕು ಅಂಗನವಾಡಿ ಸಿಬ್ಬಂದಿ ವಹಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಕೊರೊನಾ ಕೆಲಸದಲ್ಲಿ ನಿರತರಾದ ವೇಳೆ ಸೋಂಕಿನಿಂದ ಮೃತಪಟ್ಟ ಅಂಗನವಾಡಿ ಸಿಬ್ಬಂದಿಯ ಕುಟುಂಬಕ್ಕೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅಂಗನವಾಡಿ ನೌಕರರ ಸಂಘ ಸದಸ್ಯರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಮಂಗಳವಾರ ಎರಡನೇ ದಿನಕ್ಕೆ<br />ಕಾಲಿಟ್ಟಿದೆ.</p>.<p>ಎರಡನೇ ದಿನದ ಪ್ರತಿಭಟನೆಯಲ್ಲಿ ಗೌರಿಬಿನೂರು ತಾಲ್ಲೂಕಿನ ಅಂಗನವಾಡಿ ಕೇಂದ್ರಗಳ ಸಿಬ್ಬಂದಿ ಪಾಲ್ಗೊಂಡಿದ್ದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.</p>.<p>ಸ್ಥಳಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಟರಾಜ್, ನಿರೂಪಣಾಧಿಕಾರಿ ಪದ್ಮರಾಜ್, ಸಿಡಿಪಿಒ ವೆಂಕಟೇಗೌಡ, ಜಿಲ್ಲಾ ಮಟ್ಟದಲ್ಲಿರುವ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಿದ್ದೇವೆ. ಬೇಡಿಕೆಗಳ ಈಡೇರಿಕೆಗಳಿಗೆ ಸಂಬಂಧಿಸಿದಂತೆ ನೀಡಿರುವ ಮನವಿ ಪತ್ರವನ್ನು ಸರ್ಕಾರಕ್ಕೆ ಕಳುಹಿಸಿದ್ದೇವೆ<br />ಎಂದರು.</p>.<p>ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿದ್ಧಗಂಗಪ್ಪ, ಜಿಲ್ಲಾ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ನಾಗರತ್ನಮ್ಮ, ಜಯಮಂಗಲ, ರಾಧಾ, ಕಲ್ಪನ, ವೆಂಕಟಲಕ್ಷ್ಮಮ್ಮ ಹಾಗೂ ಗೌರಿಬಿದನೂರು ತಾಲ್ಲೂಕು ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ<br />ಪಾಲ್ಗೊಂಡಿದ್ದರು.</p>.<p>ಬುಧವಾರ (ಆ.18)ದ ಪ್ರತಿಭಟನೆಯ ನೇತೃತ್ವವನ್ನು ಶಿಡ್ಲಘಟ್ಟ ತಾಲ್ಲೂಕು ಅಂಗನವಾಡಿ ಸಿಬ್ಬಂದಿ ವಹಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>