<p><strong>ಬಾಗೇಪಲ್ಲಿ:</strong> ಅಂಗನವಾಡಿ ನೌಕರರನ್ನು ಸಿ ಮತ್ತು ಡಿ ದರ್ಜೆಯ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು. </p>.<p>ಅಂಗನವಾಡಿ ನೌಕರರ ಸಂಘದ (ಸಿಐಟಿಯು) ಜಿಲ್ಲಾ ಅಧ್ಯಕ್ಷೆ ಜಿ.ಎಂ.ಲಕ್ಷ್ಮಿದೇವಮ್ಮ ಮಾತನಾಡಿ, ಅಂಗನವಾಡಿ ನೌಕರರು ಅನೇಕ ವರ್ಷಗಳಿಂದ ನ್ಯಾಯಯುತವಾದ ಹಕ್ಕುಗಳಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆಗಳನ್ನು ಮಾಡಿದ್ದಾರೆ. ಆದರೆ, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. </p>.<p>ಶಿಶು ಕಲ್ಯಾಣ ಯೋಜನೆಯಡಿ ಐಸಿಡಿಎಸ್ ಯೋಜನೆ ಬಲಪಡಿಸದೆ ಮತ್ತು ಸೌಲಭ್ಯಗಳನ್ನು ನೀಡದೆ ಮುಖಚರ್ಯೆ ಗುರ್ತಿಸುವ ಕ್ರಮ (ಎಫ್ಆರ್ಎಸ್) ಅಳವಡಿಸಲಾಗಿದೆ. ಇದರಿಂದ ಅರ್ಹ ಫಲಾನುಭವಿಗಳ ಹಕ್ಕು ಕಸಿದಂತಾಗಲಿದೆ ಎಂದರು. </p>.<p>ಎಫ್ಆರ್ಎಸ್ ಅನ್ನು ಸರ್ಕಾರವು ಕೂಡಲೇ ರದ್ದುಪಡಿಸಬೇಕು. ಅಲ್ಲದೆ, ಅಂಗನವಾಡಿ ಕಾರ್ಯಕರ್ತೆಯರ ನ್ಯಾಯಯುತವಾದ ಹಕ್ಕುಗಳನ್ನು ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿ ರಾಜ್ಯ ಎಲ್ಲ ತಾಲ್ಲೂಕು, ಜಿಲ್ಲಾ ಕಚೇರಿಗಳ ಮುಂದೆ ಗುರುವಾರ ಕಪ್ಪು ಬಟ್ಟೆ ಧರಿಸಿ, ಪ್ರತಿಭಟನೆ ಮಾಡಲಾಗಿದೆ ಎಂದು ಹೇಳಿದರು. </p>.<p>ಮುಂದಿನ ದಿನಗಳಲ್ಲಿ ನೌಕರರ ಬೇಡಿಕೆಗಳನ್ನು ಈಡೇರಿಸದಿದ್ದರೆ, ನವೆಂಬರ್ ಅಥವಾ ಡಿಸೆಂಬರ್ನಲ್ಲಿ ಕೇಂದ್ರ ಸಚಿವರ ಮನೆ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು. </p>.<p>ಪ್ರತಿಭಟನೆಯಲ್ಲಿ ಸಂಘದ ತಾಲ್ಲೂಕು ಅಧ್ಯಕ್ಷೆ ಕೆ.ರತ್ನಮ್ಮ, ಕಾರ್ಯದರ್ಶಿ ಕೆ.ಗೀತಾ, ಪದಾಧಿಕಾರಿಗಳಾದ ಶಿಲ್ಪ, ರಮಾದೇವಿ, ಅಲುವೇಲಮ್ಮ, ವಿಮಲ, ಗಂಗರತ್ಮಮ್ಮ, ಮಮತ, ಸುಶೀಲಮ್ಮ, ಗಂಗರತ್ನ, ಲಕ್ಷ್ಮಿ ಹಾಗೂ ಅಂಗನವಾಡಿ ನೌಕರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ:</strong> ಅಂಗನವಾಡಿ ನೌಕರರನ್ನು ಸಿ ಮತ್ತು ಡಿ ದರ್ಜೆಯ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು. </p>.<p>ಅಂಗನವಾಡಿ ನೌಕರರ ಸಂಘದ (ಸಿಐಟಿಯು) ಜಿಲ್ಲಾ ಅಧ್ಯಕ್ಷೆ ಜಿ.ಎಂ.ಲಕ್ಷ್ಮಿದೇವಮ್ಮ ಮಾತನಾಡಿ, ಅಂಗನವಾಡಿ ನೌಕರರು ಅನೇಕ ವರ್ಷಗಳಿಂದ ನ್ಯಾಯಯುತವಾದ ಹಕ್ಕುಗಳಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆಗಳನ್ನು ಮಾಡಿದ್ದಾರೆ. ಆದರೆ, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. </p>.<p>ಶಿಶು ಕಲ್ಯಾಣ ಯೋಜನೆಯಡಿ ಐಸಿಡಿಎಸ್ ಯೋಜನೆ ಬಲಪಡಿಸದೆ ಮತ್ತು ಸೌಲಭ್ಯಗಳನ್ನು ನೀಡದೆ ಮುಖಚರ್ಯೆ ಗುರ್ತಿಸುವ ಕ್ರಮ (ಎಫ್ಆರ್ಎಸ್) ಅಳವಡಿಸಲಾಗಿದೆ. ಇದರಿಂದ ಅರ್ಹ ಫಲಾನುಭವಿಗಳ ಹಕ್ಕು ಕಸಿದಂತಾಗಲಿದೆ ಎಂದರು. </p>.<p>ಎಫ್ಆರ್ಎಸ್ ಅನ್ನು ಸರ್ಕಾರವು ಕೂಡಲೇ ರದ್ದುಪಡಿಸಬೇಕು. ಅಲ್ಲದೆ, ಅಂಗನವಾಡಿ ಕಾರ್ಯಕರ್ತೆಯರ ನ್ಯಾಯಯುತವಾದ ಹಕ್ಕುಗಳನ್ನು ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿ ರಾಜ್ಯ ಎಲ್ಲ ತಾಲ್ಲೂಕು, ಜಿಲ್ಲಾ ಕಚೇರಿಗಳ ಮುಂದೆ ಗುರುವಾರ ಕಪ್ಪು ಬಟ್ಟೆ ಧರಿಸಿ, ಪ್ರತಿಭಟನೆ ಮಾಡಲಾಗಿದೆ ಎಂದು ಹೇಳಿದರು. </p>.<p>ಮುಂದಿನ ದಿನಗಳಲ್ಲಿ ನೌಕರರ ಬೇಡಿಕೆಗಳನ್ನು ಈಡೇರಿಸದಿದ್ದರೆ, ನವೆಂಬರ್ ಅಥವಾ ಡಿಸೆಂಬರ್ನಲ್ಲಿ ಕೇಂದ್ರ ಸಚಿವರ ಮನೆ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು. </p>.<p>ಪ್ರತಿಭಟನೆಯಲ್ಲಿ ಸಂಘದ ತಾಲ್ಲೂಕು ಅಧ್ಯಕ್ಷೆ ಕೆ.ರತ್ನಮ್ಮ, ಕಾರ್ಯದರ್ಶಿ ಕೆ.ಗೀತಾ, ಪದಾಧಿಕಾರಿಗಳಾದ ಶಿಲ್ಪ, ರಮಾದೇವಿ, ಅಲುವೇಲಮ್ಮ, ವಿಮಲ, ಗಂಗರತ್ಮಮ್ಮ, ಮಮತ, ಸುಶೀಲಮ್ಮ, ಗಂಗರತ್ನ, ಲಕ್ಷ್ಮಿ ಹಾಗೂ ಅಂಗನವಾಡಿ ನೌಕರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>