ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನ್ನದಾನ ಕಾರ್ಯಕ್ರಮ

Last Updated 9 ನವೆಂಬರ್ 2020, 7:41 IST
ಅಕ್ಷರ ಗಾತ್ರ

ಚೇಳೂರು: ತಾಲ್ಲೂಕಿನ ನಿವೃತ್ತ ವೈದ್ಯಾಧಿಕಾರಿ ಡಾ.‌ಆರ್. ಸುಬ್ರಮಣ್ಯಂ ಅಯ್ಯರ್ ಅವರ ನಿಧನದ ಹಿನ್ನೆಲೆಯಲ್ಲಿ ಗ್ರಾಮದ ಎಂ.ಜಿ. ವೃತ್ತದಲ್ಲಿ ಅವರ ಅಭಿಮಾನಿಗಳಿಂದ ಅನ್ನದಾನ ಕಾರ್ಯಕ್ರಮ ನಡೆಯಿತು.

‘ಅಯ್ಯರ್ ಅವರು ಗ್ರಾಮ ಪಂಚಾಯಿತಿಯಲ್ಲಿ ಗೆದ್ದು ಜನಪರ ಕೆಲಸ ಮಾಡಿ ಉತ್ತಮ ಹೆಸರುಗಳಿಸಿದ್ದರು. ರಾಜಕೀಯದ ಜೊತೆಗೆ ವೈದ್ಯ ವೃತ್ತಿಯನ್ನೂ ಮಾಡುತ್ತಿದ್ದರು. ರೋಗಗಳ ನೋವಿಗೆ ಸ್ಪಂದಿಸುತ್ತಿದ್ದ ಅವರ ಮಾನವೀಯ ಮೌಲ್ಯಗಳು ಎಲ್ಲರಿಗೂ ಮಾದರಿಯಾಗಿವೆ’ ಎಂದು ಅಭಿಮಾನಿಗಳು ಸ್ಮರಿಸಿದರು.

ಕರವೇ ತಾಲ್ಲೂಕು ಉಪಾಧ್ಯಕ್ಷ ಕೆ.ಜಿ. ವೆಂಕಟರಮಣಪ್ಪ, ವರ್ತಕರ ಸಂಘದ ಮುಖಂಡರಾದ ಭೂಪಾಳಂ ಬಿ.ಎಸ್. ಭಾನುಪ್ರಕಾಶ್, ಮೀಸಾಲು ರವಿ, ಪಾತೂರು ಕೆ.ವಿ. ಶಂಕರಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT