ಇದೇ ವೇಳೆ ಮಂಗಳವಾದ್ಯಗಳೊಂದಿಗೆ ಶ್ರೀಗಳು ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಆಗಮಿಸಿ, ಮುಖ್ಯ ಪ್ರಾಣದೇವರಿಗೆ ಪಂಚಾಮೃತ ಅಭಿಷೇಕ ನೆರವೇರಿಸಿದರು. ದೇವಾಲಯದಲ್ಲಿ ಭಕ್ತರು ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಸಂಸ್ಥಾನ ಪೂಜೆ ಮುಗಿಸಿ ಸ್ಥಳೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಿ ಅನುಗ್ರಹ ಸಂದೇಶ ನೀಡಿದರು. ನಂತರ ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡಿ ಪ್ರಸಾದ ಪಡೆದು ಫಲಮಂತ್ರಾಕ್ಷತೆಯನ್ನು ಭಕ್ತಾದಿಗಳಿಗೆ ವಿತರಿಸಿದರು.