ಈ ಹಿಂದೆ ಬೆಂಗಳೂರಿನ ಕೆಂಪೇಗೌಡ ಸ್ಮಾರಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತಾಧಿಕಾರಿಯಾಗಿದ್ದ ರಘುನಂದನ್ ಅವರನ್ನು ಬುಧವಾರ ಸರ್ಕಾರ ಜಿಲ್ಲೆಯ ಉಪ ವಿಭಾಗಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಈ ಹಿಂದೆ ಉಪ ವಿಭಾಗಾಧಿಕಾರಿಯಾಗಿದ್ದ ಬಿ.ಶಿವಸ್ವಾಮಿ ಅವರು ಗುರುವಾರ ರಘುನಂದನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.