<p><strong>ಗೌರಿಬಿದನೂರು</strong>: ಜನ ವಿರೋಧದ ನಡುವೆಯೂ ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಿರುವ ಆತುರದ ನಿರ್ಧಾರವನ್ನು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತೀವ್ರವಾಗಿ ವಿರೋಧಿಸುತ್ತದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ ತಿಳಿಸಿದರು.</p>.<p>ತಾಲ್ಲೂಕು ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ವರ್ತಕರು ಹಾಗೂ ಲಕ್ಷಾಂತರ ನೌಕರರು, ಹಮಾಲರು ಬೀದಿಗೆ ಬೀಳುವ ಪರಿಸ್ಥಿತಿ ಬರುತ್ತದೆ. ಇದರಿಂದ ಕಾರ್ಪೊರೇಟ್ ಕಂಪನಿಗಳು ಲೂಟಿ ಹೊಡೆಯಲು ದಾರಿ ಮಾಡಿಕೊಟ್ಟಂತಾಗುತ್ತದೆ ಎಂದರು.</p>.<p>ತಹಶೀಲ್ದಾರ್ ಎಂ.ರಾಜಣ್ಣ ಅವರಿಗೆ ಮನವಿ ಸಲ್ಲಿಸಿದರು.</p>.<p>ಪ್ರತಿಭಟನೆಯಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ನವೀನ್ ಕುಮಾರ್, ಕಾರ್ಯದರ್ಶಿ ಪ್ರಭಾಕರ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ರೆಡ್ಡಿ, ಮುಖಂಡರಾದ ಕೆ.ನಾರಾಯಣಸ್ವಾಮಿ, ರವಿಪ್ರಕಾಶ್, ಸೋಮಶೇಖರ್, ವೆಂಕಟೇಶ್ ಬಾಬು, ನವೀನ್ ಕುಮಾರ್, ರಾಮಚಂದ್ರಪ್ಪ, ಕೃಷ್ಣಾರೆಡ್ಡಿ, ಮಂಜುನಾಥ್, ಚಿಗಟಗೆರೆ ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ಜನ ವಿರೋಧದ ನಡುವೆಯೂ ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಿರುವ ಆತುರದ ನಿರ್ಧಾರವನ್ನು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತೀವ್ರವಾಗಿ ವಿರೋಧಿಸುತ್ತದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ ತಿಳಿಸಿದರು.</p>.<p>ತಾಲ್ಲೂಕು ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ವರ್ತಕರು ಹಾಗೂ ಲಕ್ಷಾಂತರ ನೌಕರರು, ಹಮಾಲರು ಬೀದಿಗೆ ಬೀಳುವ ಪರಿಸ್ಥಿತಿ ಬರುತ್ತದೆ. ಇದರಿಂದ ಕಾರ್ಪೊರೇಟ್ ಕಂಪನಿಗಳು ಲೂಟಿ ಹೊಡೆಯಲು ದಾರಿ ಮಾಡಿಕೊಟ್ಟಂತಾಗುತ್ತದೆ ಎಂದರು.</p>.<p>ತಹಶೀಲ್ದಾರ್ ಎಂ.ರಾಜಣ್ಣ ಅವರಿಗೆ ಮನವಿ ಸಲ್ಲಿಸಿದರು.</p>.<p>ಪ್ರತಿಭಟನೆಯಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ನವೀನ್ ಕುಮಾರ್, ಕಾರ್ಯದರ್ಶಿ ಪ್ರಭಾಕರ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ರೆಡ್ಡಿ, ಮುಖಂಡರಾದ ಕೆ.ನಾರಾಯಣಸ್ವಾಮಿ, ರವಿಪ್ರಕಾಶ್, ಸೋಮಶೇಖರ್, ವೆಂಕಟೇಶ್ ಬಾಬು, ನವೀನ್ ಕುಮಾರ್, ರಾಮಚಂದ್ರಪ್ಪ, ಕೃಷ್ಣಾರೆಡ್ಡಿ, ಮಂಜುನಾಥ್, ಚಿಗಟಗೆರೆ ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>