ಈ ವಿಚಾರವಾಗಿ ಮಾತುಕತೆ ನಡೆಸಲು ಕರೆದೊಯ್ದ ನವೀನ್, ಚಾಕುವಿನಿಂದ ಕುತ್ತಿಗೆ ಹಾಗೂ ಎದೆಗೆ ತಿವಿದು ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ್ದ ಸ್ಥಳದ ಸ್ವಲ್ಪ ದೂರದಲ್ಲಿ ಮೃತ ದೇಹವನ್ನು ಬಿಸಾಡಿ, ಅಲ್ಲಿಂದ ಎಚ್.ಕ್ರಾಸ್ ಮೂಲಕ ಮೈಸೂರಿಗೆ ಹೋಗಿದ್ದಾನೆ. ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು.