<p><strong>ಚಿಕ್ಕಬಳ್ಳಾಪುರ:</strong> ಮಾಸಿಕ ₹ 10 ಸಾವಿರ ಗೌರವಧನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದ ಜಿಲ್ಲಾಡಳಿತ ಭವನದ ಮುಂಭಾಗ ಮಂಗಳವಾರದಿಂದ ಪ್ರತಿಭಟನೆ ಆರಂಭಿಸಿದ್ದಾರೆ. ಆ.14ರವರೆಗೆ ಪ್ರತಿಭಟನೆ ನಡೆಯಲಿದೆ.</p>.<p>ಮುಖ್ಯಮಂತ್ರಿ ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ಮಾಸಿಕ ₹ 10 ಸಾವಿರ ಗೌರವಧನವನ್ನು ಜಾರಿಗೊಳಿಸಬೇಕು. ಇದು ಏಪ್ರಿಲ್ನಿಂದ ಅನ್ವಯವಾಗಬೇಕು. ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹ 1 ಸಾವಿರ ಪ್ರೋತ್ಸಾಹ ಧನ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು.</p>.<p>ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು. ಅವೈಜ್ಞಾನಿಕವಾದ ಮೌಲ್ಯಮಾಪನ ಕಾರ್ಯವನ್ನು ಕೈಬಿಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು. ನಿವೃತ್ತರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡುಗಂಟು ನೀಡಬೇಕು. ನಗರ ಪ್ರದೇಶದ ಆಶಾ ಕಾರ್ಯಕರ್ತೆಯರಿಗೆ ₹ 2 ಸಾವಿರ ಗೌರವಧನ ಹೆಚ್ಚಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ರಾಜ್ಯ ಮತ್ತು ಕೇಂದ್ರ ಸರ್ಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಘೋಷಣೆಗಳನ್ನು ಕೂಗಿದರು. </p>.<p>ಸಂಘಟನೆಯ ಮುಖಂಡರಾದ ಸರಸ್ವತಮ್ಮ, ರೇಷ್ಮಾ, ಸುಶೀಲಾ, ಮಂಜುಳಾ, ಜಯಮ್ಮ, ರಾಜಶೇಖರ್, ಜಯಣ್ಣ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಮಾಸಿಕ ₹ 10 ಸಾವಿರ ಗೌರವಧನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದ ಜಿಲ್ಲಾಡಳಿತ ಭವನದ ಮುಂಭಾಗ ಮಂಗಳವಾರದಿಂದ ಪ್ರತಿಭಟನೆ ಆರಂಭಿಸಿದ್ದಾರೆ. ಆ.14ರವರೆಗೆ ಪ್ರತಿಭಟನೆ ನಡೆಯಲಿದೆ.</p>.<p>ಮುಖ್ಯಮಂತ್ರಿ ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ಮಾಸಿಕ ₹ 10 ಸಾವಿರ ಗೌರವಧನವನ್ನು ಜಾರಿಗೊಳಿಸಬೇಕು. ಇದು ಏಪ್ರಿಲ್ನಿಂದ ಅನ್ವಯವಾಗಬೇಕು. ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹ 1 ಸಾವಿರ ಪ್ರೋತ್ಸಾಹ ಧನ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು.</p>.<p>ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು. ಅವೈಜ್ಞಾನಿಕವಾದ ಮೌಲ್ಯಮಾಪನ ಕಾರ್ಯವನ್ನು ಕೈಬಿಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು. ನಿವೃತ್ತರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡುಗಂಟು ನೀಡಬೇಕು. ನಗರ ಪ್ರದೇಶದ ಆಶಾ ಕಾರ್ಯಕರ್ತೆಯರಿಗೆ ₹ 2 ಸಾವಿರ ಗೌರವಧನ ಹೆಚ್ಚಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ರಾಜ್ಯ ಮತ್ತು ಕೇಂದ್ರ ಸರ್ಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಘೋಷಣೆಗಳನ್ನು ಕೂಗಿದರು. </p>.<p>ಸಂಘಟನೆಯ ಮುಖಂಡರಾದ ಸರಸ್ವತಮ್ಮ, ರೇಷ್ಮಾ, ಸುಶೀಲಾ, ಮಂಜುಳಾ, ಜಯಮ್ಮ, ರಾಜಶೇಖರ್, ಜಯಣ್ಣ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>