ಕೊರೊನಾ ಸಂಕಷ್ಟದಿಂದಾಗಿ ಬಡ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಕುಟುಂಬಗಳ ನಿರ್ವಹಣೆ ಕಷ್ಟವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಚಿಂತೆಗೀಡಾಗಿದ್ದಾರೆ. ಆದ್ದರಿಂದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ನೆರವಿಗೆ ಸಮಾಜದಲ್ಲಿರುವ ಸ್ಥಿತಿವಂತರು, ಸಂಘ, ಸಂಸ್ಥೆಗಳು ಸರ್ಕಾರದ ಜೊತೆಗೆ ಕೈಜೋಡಿಸಬೇಕು. ತಮ್ಮ ಕೈಲಾದಷ್ಟು ನೆರವು ಒದಗಿಸಬೇಕು ಎಂದು ಹೇಳಿದರು.
ಗ್ರಾ.ಪಂ ಅಧ್ಯಕ್ಷ ಜಯರಾಮ್ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ದಾನಿಗಳು ನೆರವು ಒದಗಿಸುತ್ತಿದ್ದಾರೆ. ನೆರವು ಪಡೆದು ಮಕ್ಕಳು ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡಬೇಕು ಎಂದರು.