ಕನ್ನಡಪರ ಸಂಘಟನೆ ಬಿ.ಎ. ಬಾಬಾಜಾನ್ ಮಾತನಾಡಿ, ‘ಪಟ್ಟಣದ ಪುರಸಭೆಯ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ವಿವಿಧ ಯೋಜನೆಗಳ ಅಡಿ ಉಚಿತ ನಿವೇಶನ ನೀಡಲು ಅರ್ಹರ ಪಟ್ಟಿ ಸಿದ್ಧಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಕೊಳೆಗೇರಿ ನಿವಾಸಿಗಳಿಗೆ ಹೆಚ್ಚು ಆದ್ಯತೆ ನೀಡಬೇಕು. ಅಂಗವಿಕಲರು, ಮಾಜಿ ಯೋಧರು, ಹಿರಿಯ ಪತ್ರಕರ್ತರಿಗೂ ಆಶ್ರಯ ಯೋಜನೆ ಅಡಿ ಮೀಸಲಾತಿ ಕಲ್ಪಿಸಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು’ ಎಂದು ಆಗ್ರಹಿಸಿದರು.