<p><strong>ಚಿಂತಾಮಣಿ:</strong>ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮುಂಬೈನ ದಾದರ್ನಲ್ಲಿರುವ ರಾಜಗೃಹದ ಮೇಲೆ ದಾಳಿ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಕೊರೊನಾ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.</p>.<p>‘ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಂಬೇಡ್ಕರ್ ಮತ್ತು ಸಂವಿಧಾನದ ಬಗ್ಗೆಒಂದಲ್ಲ ಒಂದು ರೀತಿಯಲ್ಲಿ ಟೀಕೆ, ವ್ಯಂಗ್ಯದ ಹೇಳಿಕೆಗಳನ್ನು ನೀಡಲಾಗುತ್ತಿದೆ. ಸಂವಿಧಾನದ ಪರಾಮರ್ಶೆ ಹೆಸರಿನಲ್ಲಿ ಸಂವಿಧಾನದ ಬದಲಾವಣೆಗೆ ಸಂಚು ನಡೆಸುತ್ತಿದ್ದಾರೆ’ ಎಂದು ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವಿ.ರಾಮಪ್ಪ ಆರೋಪಿಸಿದರು.</p>.<p>‘ಸಂವಿಧಾನವನ್ನು ಅಂಬೇಡ್ಕರ್ ಅವರೊಬ್ಬರೇ ರಚಿಸಿಲ್ಲ, ಸಂವಿಧಾನದ ಬದಲಾವಣೆಗಾಗಿಯೇ ಅಧಿಕಾರಕ್ಕೆ ಬಂದಿದ್ದೇವೆ ಎಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಸಚಿವರು, ಸಂಸದರು ಬಹಿರಂಗವಾಗಿ ಹೇಳಿಕೆ ನೀಡಿದರೂ ಪ್ರಧಾನಿ ಅಥವಾ ಬಿಜೆಪಿ ಯಾವುದೇ ಕ್ರಮಕೈಗೊಂಡಿಲ್ಲ. ಬಿಜೆಪಿ ಮುಖಂಡರು, ಸಂಘ ಪರಿವಾರದವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>ಈಗ ಅಂಬೇಡ್ಕರ್ ನಿವಾಸದ ಮೇಲೆಯೇ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ಪತ್ತೆಮಾಡಿ ಕಠಿಣ ಕ್ರಮಕೈಗೊಳ್ಳಬೇಕು. ಈ ಘಟನೆಯಲ್ಲೂ ಬಿಜೆಪಿ ಕಂಡುಕಾಣದಂತೆ ನಡೆದುಕೊಂಡರೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು.</p>.<p>ತಹಶೀಲ್ದಾರ್ ಹನುಮಂತರಾಯಪ್ಪ ಮನವಿ ಸ್ವೀಕರಿಸಿದರು. ಸಮಿತಿ ರಾಜ್ಯ ಉಪಾಧ್ಯಕ್ಷ ಪಿ.ಎಂ.ನರಸಿಂಹಯ್ಯ, ಪ್ರಧಾನ ಕಾರ್ಯದರ್ಶಿ ದೇವರಾಜ್, ಮುಖಂಡರಾದ ಮುನಿವೆಕಟರಾಯಪ್ಪ, ಎನ್.ಸುರೇಶ್, ಕದಿರಪ್ಪ, ನರಸಿಂಹಲು, ಧನಲಕ್ಷ್ಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong>ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮುಂಬೈನ ದಾದರ್ನಲ್ಲಿರುವ ರಾಜಗೃಹದ ಮೇಲೆ ದಾಳಿ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಕೊರೊನಾ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.</p>.<p>‘ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಂಬೇಡ್ಕರ್ ಮತ್ತು ಸಂವಿಧಾನದ ಬಗ್ಗೆಒಂದಲ್ಲ ಒಂದು ರೀತಿಯಲ್ಲಿ ಟೀಕೆ, ವ್ಯಂಗ್ಯದ ಹೇಳಿಕೆಗಳನ್ನು ನೀಡಲಾಗುತ್ತಿದೆ. ಸಂವಿಧಾನದ ಪರಾಮರ್ಶೆ ಹೆಸರಿನಲ್ಲಿ ಸಂವಿಧಾನದ ಬದಲಾವಣೆಗೆ ಸಂಚು ನಡೆಸುತ್ತಿದ್ದಾರೆ’ ಎಂದು ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವಿ.ರಾಮಪ್ಪ ಆರೋಪಿಸಿದರು.</p>.<p>‘ಸಂವಿಧಾನವನ್ನು ಅಂಬೇಡ್ಕರ್ ಅವರೊಬ್ಬರೇ ರಚಿಸಿಲ್ಲ, ಸಂವಿಧಾನದ ಬದಲಾವಣೆಗಾಗಿಯೇ ಅಧಿಕಾರಕ್ಕೆ ಬಂದಿದ್ದೇವೆ ಎಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಸಚಿವರು, ಸಂಸದರು ಬಹಿರಂಗವಾಗಿ ಹೇಳಿಕೆ ನೀಡಿದರೂ ಪ್ರಧಾನಿ ಅಥವಾ ಬಿಜೆಪಿ ಯಾವುದೇ ಕ್ರಮಕೈಗೊಂಡಿಲ್ಲ. ಬಿಜೆಪಿ ಮುಖಂಡರು, ಸಂಘ ಪರಿವಾರದವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>ಈಗ ಅಂಬೇಡ್ಕರ್ ನಿವಾಸದ ಮೇಲೆಯೇ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ಪತ್ತೆಮಾಡಿ ಕಠಿಣ ಕ್ರಮಕೈಗೊಳ್ಳಬೇಕು. ಈ ಘಟನೆಯಲ್ಲೂ ಬಿಜೆಪಿ ಕಂಡುಕಾಣದಂತೆ ನಡೆದುಕೊಂಡರೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು.</p>.<p>ತಹಶೀಲ್ದಾರ್ ಹನುಮಂತರಾಯಪ್ಪ ಮನವಿ ಸ್ವೀಕರಿಸಿದರು. ಸಮಿತಿ ರಾಜ್ಯ ಉಪಾಧ್ಯಕ್ಷ ಪಿ.ಎಂ.ನರಸಿಂಹಯ್ಯ, ಪ್ರಧಾನ ಕಾರ್ಯದರ್ಶಿ ದೇವರಾಜ್, ಮುಖಂಡರಾದ ಮುನಿವೆಕಟರಾಯಪ್ಪ, ಎನ್.ಸುರೇಶ್, ಕದಿರಪ್ಪ, ನರಸಿಂಹಲು, ಧನಲಕ್ಷ್ಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>