<p><strong>ಚಿಂತಾಮಣಿ</strong>: ವಿಶ್ವ ಏಡ್ಸ್ ದಿನದ ಅಂಗವಾಗಿ ನಗರದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ಗುರುವಾರ ಏಡ್ಸ್ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ತಾಲ್ಲೂಕು ಆರೋಗ್ಯ ಇಲಾಖೆ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಕಾನೂನುಸೇವಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಚಂದ್ರರೆಡ್ಡಿ ಮಾತನಾಡಿ, ‘ಏಡ್ಸ್ನಿಂದ ಮರಣ ಹೊಂದಿದ ವ್ಯಕ್ತಿಗಳ ಸ್ಮರಣೆ ಹಾಗೂ ಏಡ್ಸ್ ವಿರುದ್ಧ ಹೋರಾಟದ ಅರಿವು ಮೂಡಿಸಲು ಪ್ರತಿ ಡಿಸೆಂಬರ್ 1ರಂದು ವಿಶ್ವದಾದ್ಯಂತ ಏಡ್ಸ್ ದಿನಾಚರಣೆ ಆಚರಿಲಾಗುತ್ತಿದೆ’ ಎಂದರು.</p>.<p>ಸಮಾನತೆ ಕಾಪಾಡುವುದು, ಪ್ರಾಮಾಣಿಕತೆಯಿಂದ ಅಸಮಾನತೆ ತೊಡೆದು ಹಾಕುವುದು ಈ ವರ್ಷದ ಘೋಷ ವಾಕ್ಯವಾಗಿದೆ. ತಾಲ್ಲೂಕಿನಲ್ಲಿ 1,114 ಏಡ್ಸ್ ರೋಗದ ಪ್ರಕರಣಗಳು ನೋಂದಣಿಯಾಗಿದ್ದು, ಅದರಲ್ಲಿ 680 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಲೈಂಗಿಕ ಸಂಪರ್ಕ, ತಾಯಿಯಿಂದ ಮಗುವಿಗೆ ಬರುವುದು, ಉಪಯೋಗಿಸಿದ ಸಿರೆಂಜ್, ಶೇವಿಂಗ್ ಬ್ಲೇಡುಗಳಿಂದ ಈ ರೋಗ ಹರಡುತ್ತದೆ ಎಂದರು.</p>.<p>ಲೈಂಗಿಕ ಕಾರ್ಯಕರ್ತೆಯರಿಗೆ ಕಾಂಡೋಮ್ ವಿತರಣೆ, ರೋಗ ಹರಡುವ ಹಾಗೂ ಈ ಕಾಯಿಲೆ ಹರಡದಂತೆ ಯಾವ ರೀತಿ ರಕ್ಷಣಾ ಕ್ರಮ ಕೈಗೊಳ್ಳಬೇಕು ಎಂಬ ವಿಚಾರಗಳ ಬಗ್ಗೆ ಜಾಗೃತಿ ಅಗತ್ಯ ಎಂದು ತಿಳಿಸಿದರು. ಏಡ್ಸ್ ರೋಗಿಗಳಿಗೆ ಧೈರ್ಯ ತುಂಬಬೇಕು. ಅವರಿಗೆ ಅಗತ್ಯ ನೆರವು ನೀಡಬೇಕು ಎಂದರು.</p>.<p>ಆರೋಗ್ಯ ಇಲಾಖೆಯ ಸಿಬ್ಬಂದಿ, ವಿದ್ಯಾರ್ಥಿಗಳು, ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರು ನಗರದ ಪ್ರಮುಖ ರಸ್ತೆಗಳಲ್ಲಿ ಏಡ್ಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಜಾಥಾ ನಡೆಸಿದರು.</p>.<p>ಆಸ್ಪತ್ರೆಯ ಮುಂಭಾಗ ಮತ್ತು ಮುಖ್ಯ ವೃತ್ತಗಳಲ್ಲಿ ಬೀದಿ ನಾಟಕದ ಮೂಲಕ ಅರಿವು ಮೂಡಿಸಲಾಯಿತು. ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸಂತೋಷ್, ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸರೆಡ್ಡಿ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ವಿಶ್ವ ಏಡ್ಸ್ ದಿನದ ಅಂಗವಾಗಿ ನಗರದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ಗುರುವಾರ ಏಡ್ಸ್ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ತಾಲ್ಲೂಕು ಆರೋಗ್ಯ ಇಲಾಖೆ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಕಾನೂನುಸೇವಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಚಂದ್ರರೆಡ್ಡಿ ಮಾತನಾಡಿ, ‘ಏಡ್ಸ್ನಿಂದ ಮರಣ ಹೊಂದಿದ ವ್ಯಕ್ತಿಗಳ ಸ್ಮರಣೆ ಹಾಗೂ ಏಡ್ಸ್ ವಿರುದ್ಧ ಹೋರಾಟದ ಅರಿವು ಮೂಡಿಸಲು ಪ್ರತಿ ಡಿಸೆಂಬರ್ 1ರಂದು ವಿಶ್ವದಾದ್ಯಂತ ಏಡ್ಸ್ ದಿನಾಚರಣೆ ಆಚರಿಲಾಗುತ್ತಿದೆ’ ಎಂದರು.</p>.<p>ಸಮಾನತೆ ಕಾಪಾಡುವುದು, ಪ್ರಾಮಾಣಿಕತೆಯಿಂದ ಅಸಮಾನತೆ ತೊಡೆದು ಹಾಕುವುದು ಈ ವರ್ಷದ ಘೋಷ ವಾಕ್ಯವಾಗಿದೆ. ತಾಲ್ಲೂಕಿನಲ್ಲಿ 1,114 ಏಡ್ಸ್ ರೋಗದ ಪ್ರಕರಣಗಳು ನೋಂದಣಿಯಾಗಿದ್ದು, ಅದರಲ್ಲಿ 680 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಲೈಂಗಿಕ ಸಂಪರ್ಕ, ತಾಯಿಯಿಂದ ಮಗುವಿಗೆ ಬರುವುದು, ಉಪಯೋಗಿಸಿದ ಸಿರೆಂಜ್, ಶೇವಿಂಗ್ ಬ್ಲೇಡುಗಳಿಂದ ಈ ರೋಗ ಹರಡುತ್ತದೆ ಎಂದರು.</p>.<p>ಲೈಂಗಿಕ ಕಾರ್ಯಕರ್ತೆಯರಿಗೆ ಕಾಂಡೋಮ್ ವಿತರಣೆ, ರೋಗ ಹರಡುವ ಹಾಗೂ ಈ ಕಾಯಿಲೆ ಹರಡದಂತೆ ಯಾವ ರೀತಿ ರಕ್ಷಣಾ ಕ್ರಮ ಕೈಗೊಳ್ಳಬೇಕು ಎಂಬ ವಿಚಾರಗಳ ಬಗ್ಗೆ ಜಾಗೃತಿ ಅಗತ್ಯ ಎಂದು ತಿಳಿಸಿದರು. ಏಡ್ಸ್ ರೋಗಿಗಳಿಗೆ ಧೈರ್ಯ ತುಂಬಬೇಕು. ಅವರಿಗೆ ಅಗತ್ಯ ನೆರವು ನೀಡಬೇಕು ಎಂದರು.</p>.<p>ಆರೋಗ್ಯ ಇಲಾಖೆಯ ಸಿಬ್ಬಂದಿ, ವಿದ್ಯಾರ್ಥಿಗಳು, ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರು ನಗರದ ಪ್ರಮುಖ ರಸ್ತೆಗಳಲ್ಲಿ ಏಡ್ಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಜಾಥಾ ನಡೆಸಿದರು.</p>.<p>ಆಸ್ಪತ್ರೆಯ ಮುಂಭಾಗ ಮತ್ತು ಮುಖ್ಯ ವೃತ್ತಗಳಲ್ಲಿ ಬೀದಿ ನಾಟಕದ ಮೂಲಕ ಅರಿವು ಮೂಡಿಸಲಾಯಿತು. ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸಂತೋಷ್, ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸರೆಡ್ಡಿ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>