<p><strong>ಚಿಕ್ಕಬಳ್ಳಾಪುರ:</strong> ₹ 70 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ಟಿ.ವೆಂಕಟೇಶ್ ಅವರ ಜಾಮೀನನ್ನು ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ರದ್ದುಗೊಳಿಸಿದೆ.</p>.<p>ಮಂಗಳವಾರ (ಮಾ.3) ಸಂಜೆ ನಗರದ ಕನ್ನಡ ಭವನದ ಬಳಿ ₹ 70 ಸಾವಿರ ಲಂಚ ಪಡೆಯುವಾಗ ಎಎಸ್ಐ ವೆಂಕಟೇಶಪ್ಪ ಮತ್ತು ನಗರ ಹೊರವಲಯದ ಚಿತ್ರಾವತಿ ಬಳಿ ಶರಣಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದರು. ರಾತ್ರಿ ವಿಚಾರಣೆ ನಡೆಸಿದ್ದರು. ಬುಧವಾರ (ಮಾ.4) ಬೆಳಿಗ್ಗೆ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು ಅವರಿಗೆ ಜಾಮೀನು ಮಂಜೂರಾಗಿತ್ತು.|</p>.<p>ಹೀಗೆ ಕೆಲವೇ ಗಂಟೆಗಳಲ್ಲಿ ಜಾಮೀನು ಮಂಜೂರಾಗಿದ್ದು ನ್ಯಾಯಾಂಗ ವಲಯದಲ್ಲಿ ಚರ್ಚೆಗಳಿಗೆ ಕಾರಣವಾಗಿತ್ತು. </p>.<p>ಜಾಮೀನು ನೀಡಿದ್ದಕ್ಕೆ ಲೋಕಾಯುಕ್ತ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದರು. ಶನಿವಾರ (ಮಾ.7) ನ್ಯಾಯಾಧೀಶರಾದ ಶಾರದಾ ಅವರು ಮತ್ತೆ ಪ್ರಕರಣದ ವಿಚಾರಣೆ ನಡೆಸಿ ಸೋಮವಾರ ತೀರ್ಪು ನೀಡುವುದಾಗಿ ಪ್ರಕಟಿಸಿದ್ದರು. </p>.<p>ಸೋಮವಾರ ನ್ಯಾಯಾಧೀಶರು ಜಾಮೀನು ರದ್ದುಗೊಳಿಸಿದರು. ತೀರ್ಪು ಪ್ರಕಟವಾದ ವೇಳೆ ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಲಿಲ್ಲ.</p>.<p>ಪ್ರಕರಣ ಸಂಬಂಧ ಪಿಎಸ್ಐ ಮತ್ತು ಎಎಸ್ಐ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆಲಸದಿಂದ ಅಮಾನತುಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ₹ 70 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ಟಿ.ವೆಂಕಟೇಶ್ ಅವರ ಜಾಮೀನನ್ನು ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ರದ್ದುಗೊಳಿಸಿದೆ.</p>.<p>ಮಂಗಳವಾರ (ಮಾ.3) ಸಂಜೆ ನಗರದ ಕನ್ನಡ ಭವನದ ಬಳಿ ₹ 70 ಸಾವಿರ ಲಂಚ ಪಡೆಯುವಾಗ ಎಎಸ್ಐ ವೆಂಕಟೇಶಪ್ಪ ಮತ್ತು ನಗರ ಹೊರವಲಯದ ಚಿತ್ರಾವತಿ ಬಳಿ ಶರಣಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದರು. ರಾತ್ರಿ ವಿಚಾರಣೆ ನಡೆಸಿದ್ದರು. ಬುಧವಾರ (ಮಾ.4) ಬೆಳಿಗ್ಗೆ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು ಅವರಿಗೆ ಜಾಮೀನು ಮಂಜೂರಾಗಿತ್ತು.|</p>.<p>ಹೀಗೆ ಕೆಲವೇ ಗಂಟೆಗಳಲ್ಲಿ ಜಾಮೀನು ಮಂಜೂರಾಗಿದ್ದು ನ್ಯಾಯಾಂಗ ವಲಯದಲ್ಲಿ ಚರ್ಚೆಗಳಿಗೆ ಕಾರಣವಾಗಿತ್ತು. </p>.<p>ಜಾಮೀನು ನೀಡಿದ್ದಕ್ಕೆ ಲೋಕಾಯುಕ್ತ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದರು. ಶನಿವಾರ (ಮಾ.7) ನ್ಯಾಯಾಧೀಶರಾದ ಶಾರದಾ ಅವರು ಮತ್ತೆ ಪ್ರಕರಣದ ವಿಚಾರಣೆ ನಡೆಸಿ ಸೋಮವಾರ ತೀರ್ಪು ನೀಡುವುದಾಗಿ ಪ್ರಕಟಿಸಿದ್ದರು. </p>.<p>ಸೋಮವಾರ ನ್ಯಾಯಾಧೀಶರು ಜಾಮೀನು ರದ್ದುಗೊಳಿಸಿದರು. ತೀರ್ಪು ಪ್ರಕಟವಾದ ವೇಳೆ ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಲಿಲ್ಲ.</p>.<p>ಪ್ರಕರಣ ಸಂಬಂಧ ಪಿಎಸ್ಐ ಮತ್ತು ಎಎಸ್ಐ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆಲಸದಿಂದ ಅಮಾನತುಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>