‘ನನ್ನ ವಿರುದ್ಧ ಕ್ರಮ ತೆಗೆದುಕೊಳ್ಳುವುದಾದರೆ ತೆಗೆದುಕೊಳ್ಳಲಿ. ನನ್ನನ್ನು ಸಂಸದ ಸ್ಥಾನದಿಂದ ಉಚ್ಛಾಟಿಸಲು ಆಗುವುದಿಲ್ಲ. ಹೀಗಾಗಿ ಆ ಸ್ಥಾನ ಹೋಗುವುದಿಲ್ಲ. ಪಕ್ಷದಿಂದ ಒಬ್ಬರಿಗೆ ನಷ್ಟವಾಗಬಹುದಷ್ಟೇ, ಅದನ್ನೆಲ್ಲ ನಾನು ಲೆಕ್ಕಕ್ಕೆ ಇಟ್ಟಿಲ್ಲ. ಯಾರು ಏನು ಮಾಡುತ್ತಾರೋ ನೋಡೋಣ. ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬ ಗಾದೆಯಂತೆ ಕೆಲವರು ಚುನಾವಣೆಯಲ್ಲಿ ಸೋತ ಬಳಿಕ ಮತದಾರರ ಬಗ್ಗೆ ಮಾತನಾಡುತ್ತಿದ್ದಾರೆ. ಯಾರೇ ಆಗಲಿ ಆ ರೀತಿ ಮಾತನಾಡಬಾರದು’ ಎಂದರು.