<p><strong>ಬಾಗೇಪಲ್ಲಿ</strong>: ‘ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಮಾಡಿಕೊಂಡು ಸೊಳ್ಳೆಗಳ ನಿಯಂತ್ರಣ ಮಾಡಿದ್ದಲ್ಲಿ, ಡೆಂಗಿಜ್ವರ ಹತೋಟಿಗೆ ಬರಲಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ ತಿಳಿಸಿದರು.</p>.<p>ಪಟ್ಟಣದ ಡಿವಿಜಿ ಮುಖ್ಯರಸ್ತೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗಿ ನಿಮೂರ್ಲನೆ ದಿನದ ಪ್ರಯುಕ್ತ ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.</p>.<p>ಡೆಂಗಿಜ್ವರ ಸೇರಿದಂತೆ ಅನೇಕ ರೋಗಗಳು ಬರುವ ಮುನ್ನ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು. ಡೆಂಗಿಜ್ವರ ವೈರಸ್ನಿಂದ ರೋಗ ಹರಡಲಿದೆ. ಸೊಳ್ಳೆ ಕಡಿತದಿಂದ ಜ್ವರದ ಲಕ್ಷಣ ಹೆಚ್ಚಾಗಲಿದೆ. ಈ ಜ್ವರಕ್ಕೆ ಲಸಿಕೆ ಇಲ್ಲದಿರುವುದರಿಂದ ಎಚ್ಚರ ವಹಿಸಬೇಕು. ತಲೆನೋವು, ಕಣ್ಣು, ಕಿವಿ, ಮತ್ತು ಮಾಂಸಖಂಡಗಳಲ್ಲಿ ವಿಪರೀತ ನೋವು ಕಂಡುಬರಲಿದೆ. ಬಾಯಿ, ಮೂಗು, ವಸಡುಗಳಲ್ಲಿ ರಕ್ತಸ್ತ್ರಾವ ಉಂಟಾಗಲಿದೆ. ರೋಗದ ಲಕ್ಷಣಗಳು ಕಂಡುಬಂದರೆ ಕೂಡಲೇ ಆಸ್ಪತ್ರೆಯಲ್ಲಿ ತುರ್ತುಚಿಕಿತ್ಸೆ ಪಡೆಯಬೇಕು. ಇಲ್ಲವಾದರೆ ಅಮೂಲ್ಯವಾದ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ ಎಂದರು.</p>.<p>ಸೊಳ್ಳೆಗಳು ಕಚ್ಚದಂತೆ ಸೊಳ್ಳೆಪರದೆ, ಗುಡ್ನೈಟ್ ಬಳಸಬೇಕು. ಮನೆ, ಚರಂಡಿಗಳು ಮತ್ತು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಮಾಡಬೇಕು. ಚರಂಡಿಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.</p>.<p>ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ. ವಿನಯ್ಕುಮಾರ್, ಆರೋಗ್ಯ ನಿರೀಕ್ಷಕ ಫಕೃದ್ಧೀನ್ಸಾಬ್, ಹಿರಿಯ ಶುಶ್ರೂಷಕಿ ಮಂಜುಳ, ಮಂಜುನಾಥ್, ಈಶ್ವರಪ್ಪ, ಮುನಿರತ್ನಮ್ಮ ಮತ್ತು ಶುಶ್ರೂಷಕಿಯರು, ಆಶಾ ಕಾರ್ಯಕರ್ತೆಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-16-1589086850</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ</strong>: ‘ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಮಾಡಿಕೊಂಡು ಸೊಳ್ಳೆಗಳ ನಿಯಂತ್ರಣ ಮಾಡಿದ್ದಲ್ಲಿ, ಡೆಂಗಿಜ್ವರ ಹತೋಟಿಗೆ ಬರಲಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ ತಿಳಿಸಿದರು.</p>.<p>ಪಟ್ಟಣದ ಡಿವಿಜಿ ಮುಖ್ಯರಸ್ತೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗಿ ನಿಮೂರ್ಲನೆ ದಿನದ ಪ್ರಯುಕ್ತ ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.</p>.<p>ಡೆಂಗಿಜ್ವರ ಸೇರಿದಂತೆ ಅನೇಕ ರೋಗಗಳು ಬರುವ ಮುನ್ನ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು. ಡೆಂಗಿಜ್ವರ ವೈರಸ್ನಿಂದ ರೋಗ ಹರಡಲಿದೆ. ಸೊಳ್ಳೆ ಕಡಿತದಿಂದ ಜ್ವರದ ಲಕ್ಷಣ ಹೆಚ್ಚಾಗಲಿದೆ. ಈ ಜ್ವರಕ್ಕೆ ಲಸಿಕೆ ಇಲ್ಲದಿರುವುದರಿಂದ ಎಚ್ಚರ ವಹಿಸಬೇಕು. ತಲೆನೋವು, ಕಣ್ಣು, ಕಿವಿ, ಮತ್ತು ಮಾಂಸಖಂಡಗಳಲ್ಲಿ ವಿಪರೀತ ನೋವು ಕಂಡುಬರಲಿದೆ. ಬಾಯಿ, ಮೂಗು, ವಸಡುಗಳಲ್ಲಿ ರಕ್ತಸ್ತ್ರಾವ ಉಂಟಾಗಲಿದೆ. ರೋಗದ ಲಕ್ಷಣಗಳು ಕಂಡುಬಂದರೆ ಕೂಡಲೇ ಆಸ್ಪತ್ರೆಯಲ್ಲಿ ತುರ್ತುಚಿಕಿತ್ಸೆ ಪಡೆಯಬೇಕು. ಇಲ್ಲವಾದರೆ ಅಮೂಲ್ಯವಾದ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ ಎಂದರು.</p>.<p>ಸೊಳ್ಳೆಗಳು ಕಚ್ಚದಂತೆ ಸೊಳ್ಳೆಪರದೆ, ಗುಡ್ನೈಟ್ ಬಳಸಬೇಕು. ಮನೆ, ಚರಂಡಿಗಳು ಮತ್ತು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಮಾಡಬೇಕು. ಚರಂಡಿಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.</p>.<p>ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ. ವಿನಯ್ಕುಮಾರ್, ಆರೋಗ್ಯ ನಿರೀಕ್ಷಕ ಫಕೃದ್ಧೀನ್ಸಾಬ್, ಹಿರಿಯ ಶುಶ್ರೂಷಕಿ ಮಂಜುಳ, ಮಂಜುನಾಥ್, ಈಶ್ವರಪ್ಪ, ಮುನಿರತ್ನಮ್ಮ ಮತ್ತು ಶುಶ್ರೂಷಕಿಯರು, ಆಶಾ ಕಾರ್ಯಕರ್ತೆಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-16-1589086850</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>