<p>ಬಾಗೇಪಲ್ಲಿ: ‘ಸಕಾಲಕ್ಕೆ ಬಂದು ಚಿಕಿತ್ಸೆ ನೀಡದ ಕಾರಣ ರೋಗಿಗಳು ಮೃತಪಟ್ಟಿದ್ದಾರೆ’ ಎಂದು ಇಲ್ಲಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರ ವಿರುದ್ಧ ಮೃತರ ಕುಟುಂಬ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ತಾಲ್ಲೂಕಿನ ಗೂಳೂರು ಹೋಬಳಿಯ ಡಿ. ಕೊತ್ತಪಲ್ಲಿ ಗ್ರಾಮದ ವೆಂಕಟಮ್ಮ (52) ಮತ್ತು ಮೈನಗಾನಪಲ್ಲಿ ಗ್ರಾಮದ ವೇಣುಗೋಪಾಲ (59) ಮೃತರು.</p>.<p>ಡಿ.ಕೊತ್ತಪಲ್ಲಿ ವೆಂಕಟಮ್ಮ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆಯಲು ಮಂಗಳವಾರ ರಾತ್ರಿ ಆಸ್ಪತ್ರೆಗೆ ಬಂದಿದ್ದರು. ಅದೇ ಸಮಯದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಮೈನಗಾನಹಳ್ಳಿಯವೇಣುಗೋಪಾಲ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆ ತಂದಿದ್ದರು.</p>.<p>‘ನಾವು ಆಸ್ಪತ್ರೆಗೆ ಬಂದ ವೇಳೆ ವೈದ್ಯರು ಇರಲಿಲ್ಲ. ವೈದ್ಯರಿಲ್ಲದ ಕಾರಣ ಅವರಿಗೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಸಕಾಲದಲ್ಲಿ ಚಿಕಿತ್ಸೆ ಲಭ್ಯವಾಗಿದ್ದರೆ ಬದುಕುತ್ತಿದ್ದರು’ ಎಂದು ಎರಡೂ ಕುಟುಂಬಗಳ ಸದಸ್ಯರು ಆಕ್ರೋಶ ಹೊರಹಾಕಿದರು.</p>.<p>ಈ ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪಾ ಅವರು ಗುರುವಾರ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ರಾತ್ರಿ ಪಾಳಿ ವೈದ್ಯರು, ಆಸ್ಪತ್ರೆ ಆಡಳಿತಾಧಿಕಾರಿ ಡಾ.ವಿನಯ್, ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುಜಿತ್ ಅವರಿಂದ ಮೃತಪಟ್ಟವರ ಚಿಕಿತ್ಸೆ ವಿವರ ಪಡೆದರು.</p>.<p>ಬಾಗೇಪಲ್ಲಿ ಜೆಎಂಎಫ್ಸಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಡಿ.ಕೆ. ಮಂಜುನಾಥಚಾರಿ,ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ವಿನಯ್, ವೈದ್ಯ ಡಾ.ಮುರಕ್, ಹಿರಿಯ ಶುಶ್ರೂಷಕಿ ಮಂಜುಳ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-16-1970076759</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗೇಪಲ್ಲಿ: ‘ಸಕಾಲಕ್ಕೆ ಬಂದು ಚಿಕಿತ್ಸೆ ನೀಡದ ಕಾರಣ ರೋಗಿಗಳು ಮೃತಪಟ್ಟಿದ್ದಾರೆ’ ಎಂದು ಇಲ್ಲಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರ ವಿರುದ್ಧ ಮೃತರ ಕುಟುಂಬ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ತಾಲ್ಲೂಕಿನ ಗೂಳೂರು ಹೋಬಳಿಯ ಡಿ. ಕೊತ್ತಪಲ್ಲಿ ಗ್ರಾಮದ ವೆಂಕಟಮ್ಮ (52) ಮತ್ತು ಮೈನಗಾನಪಲ್ಲಿ ಗ್ರಾಮದ ವೇಣುಗೋಪಾಲ (59) ಮೃತರು.</p>.<p>ಡಿ.ಕೊತ್ತಪಲ್ಲಿ ವೆಂಕಟಮ್ಮ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆಯಲು ಮಂಗಳವಾರ ರಾತ್ರಿ ಆಸ್ಪತ್ರೆಗೆ ಬಂದಿದ್ದರು. ಅದೇ ಸಮಯದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಮೈನಗಾನಹಳ್ಳಿಯವೇಣುಗೋಪಾಲ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆ ತಂದಿದ್ದರು.</p>.<p>‘ನಾವು ಆಸ್ಪತ್ರೆಗೆ ಬಂದ ವೇಳೆ ವೈದ್ಯರು ಇರಲಿಲ್ಲ. ವೈದ್ಯರಿಲ್ಲದ ಕಾರಣ ಅವರಿಗೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಸಕಾಲದಲ್ಲಿ ಚಿಕಿತ್ಸೆ ಲಭ್ಯವಾಗಿದ್ದರೆ ಬದುಕುತ್ತಿದ್ದರು’ ಎಂದು ಎರಡೂ ಕುಟುಂಬಗಳ ಸದಸ್ಯರು ಆಕ್ರೋಶ ಹೊರಹಾಕಿದರು.</p>.<p>ಈ ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪಾ ಅವರು ಗುರುವಾರ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ರಾತ್ರಿ ಪಾಳಿ ವೈದ್ಯರು, ಆಸ್ಪತ್ರೆ ಆಡಳಿತಾಧಿಕಾರಿ ಡಾ.ವಿನಯ್, ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುಜಿತ್ ಅವರಿಂದ ಮೃತಪಟ್ಟವರ ಚಿಕಿತ್ಸೆ ವಿವರ ಪಡೆದರು.</p>.<p>ಬಾಗೇಪಲ್ಲಿ ಜೆಎಂಎಫ್ಸಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಡಿ.ಕೆ. ಮಂಜುನಾಥಚಾರಿ,ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ವಿನಯ್, ವೈದ್ಯ ಡಾ.ಮುರಕ್, ಹಿರಿಯ ಶುಶ್ರೂಷಕಿ ಮಂಜುಳ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-16-1970076759</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>