<p>ಬಾಗೇಪಲ್ಲಿ: ಉಚಿತ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಮೂರು ವರ್ಷ ಕಳೆದರೂ ನಿವೇಶನ ಮಂಜೂರು ಮಾಡಿಲ್ಲ ಎಂದು ದೂರಿ ಪಟ್ಟಣದ ಹೊರವಲಯದ ಸರ್ಕಾರಿ ಜಮೀನಿನಲ್ಲಿ ನಿರಾಶ್ರಿತ ಮಹಿಳೆಯರು ಗುಡಿಸಲು ಹಾಕಿ ಪ್ರತಿಭಟಿಸಿದರು.</p>.<p>ತಾಲ್ಲೂಕಿನ ಪಾತಬಾಗೇಪಲ್ಲಿ ಗ್ರಾಮದ ಸರ್ವೇ ನಂ 37 ರಲ್ಲಿನ ಸರ್ಕಾರಿ ಜಮೀನಿನಲ್ಲಿ ಪಟ್ಟಣದ ನಿರಾಶ್ರಿತ ಕುಟುಂಬಗಳು ವಸತಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಭಾರತ ಮಾರ್ಕ್ಸ್ವಾದಿ ರೆಡ್ಪ್ಲಾಗ್ ತಾಲ್ಲೂಕು ಸಂಘಟನೆ ನೇತೃತ್ವದಲ್ಲಿ ಭಾನುವಾರ ಜಮೀನಿನಲ್ಲಿ ಗುಡಿಸಲು ಹಾಕಿಕೊಂಡು ಸರ್ಕಾರದ ವಿರುದ್ದ ಧಿಕ್ಕಾರ ಕೂಗಿದರು.</p>.<p>ಪೊಲೀಸರು ಪ್ರತಿಭಟನನಿರತರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದರು. ಸರ್ಕಾರಿ ಜಮೀನಲ್ಲಿ ಗುಡಿಸಲು ಹಾಕದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಅಯೋಜಿಸಿದರೂ ನಿರಾಶ್ರಿತ ಮಹಿಳೆಯರು ಉಚಿತ ನಿವೇಶನಕ್ಕೆ ಗುಡಿಸಲು ನಿರ್ಮಿಸಲು ಮುಂದಾದರು.</p>.<p>ತಹಶೀಲ್ದಾರ್ ಮನೀಷಾ ಎನ್. ಪತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು. ಸರ್ಕಾರಿ ಜಮೀನಿನಲ್ಲಿ ಗುಡಿಸಲು ಹಾಕಲು ನಿಮಗೆ ಅನುಮತಿ ಯಾರು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ತೀವ್ರ ಪರಿಣಾಮ ಎದುರಿಸುತ್ತೀರಿ ಎಂದು ಎಚ್ಚರಿಕೆ ನೀಡಿದರು.</p>.<p>ಉಚಿತ ನಿವೇಶನಕ್ಕೆ ಅರ್ಜಿ ಸಲ್ಲಿಸಿ ಮೂರು ವರ್ಷಗಳು ಕಳೆದಿದೆ. ಉಚಿತ ನಿವೇಶನಕ್ಕೆ ಬೀದಿಗಿಳಿದು ಹೋರಾಟ ಮಾಡಿದರೂ ಅಧಿಕಾರಿಗಳು, ಜನಪ್ರತಿನಿಧಿಗಳು ನಿವೇಶನ ಹಂಚಿಲ್ಲ. 2023 ರ ಚುನಾವಣೆ ಸಮಯದಲ್ಲಿ ಬಡವರಿಗೆ ಕೊಟ್ಟ ಭರವಸೆಯನ್ನು ಈಡೇರಿಸಿಲ್ಲ. ಇದೀಗ ಮತ್ತೊಮ್ಮೆ ಚುನಾವಣೆ ಬರುತ್ತದೆ. ನಿವೇಶನ ಕೊಡ್ತೀವಿ ಅಂತೀರಿ. ಜನರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡಲಾಗಿದೆ ಎಂದು ಪ್ರತಿಭಟನನಿರತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಆಗ ತಹಶೀಲ್ದಾರರು ನಿರಾಶ್ರಿತ ಕುಟುಂಬಗಳಿಗೆ ಉಚಿತ ನಿವೇಶನ ಮಂಜೂರಿಗೆ ಸರ್ಕಾರದ ಹಂತದಲ್ಲಿ ಕಾನೂನು ಪ್ರಕ್ರಿಯೆ ಆಗಬೇಕು. ಆಶ್ರಯ ಯೋಜನೆ ಮೂಲಕ ನಿಮಗೆ ನಿವೇಶನ ಮಂಜೂರು ಆಗುತ್ತದೆ. ಕಾನೂನು ಕೈಗೆ ತೆಗಡುಕೊಳ್ಳುವುದು ಬೇಡ. ಮಹಿಳೆಯರು ತಾಳ್ಮೆಯಿಂದ ವರ್ತಿಸಬೇಕು ಎಂದರು.</p>.<p>ಅನ್ಲೈನ್ ಮೂಲಕ ಪುರಸಭೆಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರ ಸರ್ವೆ ನಡೆಸಿ ಅರ್ಹರಿಗೆ ಮಾತ್ರ ನಿವೇಶನ ಮಂಜೂರು ಆಗುತ್ತದೆ ಎಂದರು.</p>.<p>ಪ್ರತಿಭಟನೆಯಲ್ಲಿ ರೆಡ್ ಫ್ಲಾಗ್ ಮುಖಂಡ ಚಲಪತಿ, ತಾಜೀನ್, ಚೌಡಮ್ಮ, ಮುಬಾರಕ್, ರಮಣಪ್ಪ, ಶಂಕರಪ್ಪ, ಲಾವಣ್ಯ, ಶ್ವೇತಾ, ಅಂಜಲಿ, ಲಕ್ಷ್ಮಮ್ಮ, ರೆಡ್ಡಮ್ಮ, ಅರುಣಮ್ಮ ಮತ್ತಿತರರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-16-1049891749</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗೇಪಲ್ಲಿ: ಉಚಿತ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಮೂರು ವರ್ಷ ಕಳೆದರೂ ನಿವೇಶನ ಮಂಜೂರು ಮಾಡಿಲ್ಲ ಎಂದು ದೂರಿ ಪಟ್ಟಣದ ಹೊರವಲಯದ ಸರ್ಕಾರಿ ಜಮೀನಿನಲ್ಲಿ ನಿರಾಶ್ರಿತ ಮಹಿಳೆಯರು ಗುಡಿಸಲು ಹಾಕಿ ಪ್ರತಿಭಟಿಸಿದರು.</p>.<p>ತಾಲ್ಲೂಕಿನ ಪಾತಬಾಗೇಪಲ್ಲಿ ಗ್ರಾಮದ ಸರ್ವೇ ನಂ 37 ರಲ್ಲಿನ ಸರ್ಕಾರಿ ಜಮೀನಿನಲ್ಲಿ ಪಟ್ಟಣದ ನಿರಾಶ್ರಿತ ಕುಟುಂಬಗಳು ವಸತಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಭಾರತ ಮಾರ್ಕ್ಸ್ವಾದಿ ರೆಡ್ಪ್ಲಾಗ್ ತಾಲ್ಲೂಕು ಸಂಘಟನೆ ನೇತೃತ್ವದಲ್ಲಿ ಭಾನುವಾರ ಜಮೀನಿನಲ್ಲಿ ಗುಡಿಸಲು ಹಾಕಿಕೊಂಡು ಸರ್ಕಾರದ ವಿರುದ್ದ ಧಿಕ್ಕಾರ ಕೂಗಿದರು.</p>.<p>ಪೊಲೀಸರು ಪ್ರತಿಭಟನನಿರತರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದರು. ಸರ್ಕಾರಿ ಜಮೀನಲ್ಲಿ ಗುಡಿಸಲು ಹಾಕದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಅಯೋಜಿಸಿದರೂ ನಿರಾಶ್ರಿತ ಮಹಿಳೆಯರು ಉಚಿತ ನಿವೇಶನಕ್ಕೆ ಗುಡಿಸಲು ನಿರ್ಮಿಸಲು ಮುಂದಾದರು.</p>.<p>ತಹಶೀಲ್ದಾರ್ ಮನೀಷಾ ಎನ್. ಪತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು. ಸರ್ಕಾರಿ ಜಮೀನಿನಲ್ಲಿ ಗುಡಿಸಲು ಹಾಕಲು ನಿಮಗೆ ಅನುಮತಿ ಯಾರು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ತೀವ್ರ ಪರಿಣಾಮ ಎದುರಿಸುತ್ತೀರಿ ಎಂದು ಎಚ್ಚರಿಕೆ ನೀಡಿದರು.</p>.<p>ಉಚಿತ ನಿವೇಶನಕ್ಕೆ ಅರ್ಜಿ ಸಲ್ಲಿಸಿ ಮೂರು ವರ್ಷಗಳು ಕಳೆದಿದೆ. ಉಚಿತ ನಿವೇಶನಕ್ಕೆ ಬೀದಿಗಿಳಿದು ಹೋರಾಟ ಮಾಡಿದರೂ ಅಧಿಕಾರಿಗಳು, ಜನಪ್ರತಿನಿಧಿಗಳು ನಿವೇಶನ ಹಂಚಿಲ್ಲ. 2023 ರ ಚುನಾವಣೆ ಸಮಯದಲ್ಲಿ ಬಡವರಿಗೆ ಕೊಟ್ಟ ಭರವಸೆಯನ್ನು ಈಡೇರಿಸಿಲ್ಲ. ಇದೀಗ ಮತ್ತೊಮ್ಮೆ ಚುನಾವಣೆ ಬರುತ್ತದೆ. ನಿವೇಶನ ಕೊಡ್ತೀವಿ ಅಂತೀರಿ. ಜನರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡಲಾಗಿದೆ ಎಂದು ಪ್ರತಿಭಟನನಿರತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಆಗ ತಹಶೀಲ್ದಾರರು ನಿರಾಶ್ರಿತ ಕುಟುಂಬಗಳಿಗೆ ಉಚಿತ ನಿವೇಶನ ಮಂಜೂರಿಗೆ ಸರ್ಕಾರದ ಹಂತದಲ್ಲಿ ಕಾನೂನು ಪ್ರಕ್ರಿಯೆ ಆಗಬೇಕು. ಆಶ್ರಯ ಯೋಜನೆ ಮೂಲಕ ನಿಮಗೆ ನಿವೇಶನ ಮಂಜೂರು ಆಗುತ್ತದೆ. ಕಾನೂನು ಕೈಗೆ ತೆಗಡುಕೊಳ್ಳುವುದು ಬೇಡ. ಮಹಿಳೆಯರು ತಾಳ್ಮೆಯಿಂದ ವರ್ತಿಸಬೇಕು ಎಂದರು.</p>.<p>ಅನ್ಲೈನ್ ಮೂಲಕ ಪುರಸಭೆಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರ ಸರ್ವೆ ನಡೆಸಿ ಅರ್ಹರಿಗೆ ಮಾತ್ರ ನಿವೇಶನ ಮಂಜೂರು ಆಗುತ್ತದೆ ಎಂದರು.</p>.<p>ಪ್ರತಿಭಟನೆಯಲ್ಲಿ ರೆಡ್ ಫ್ಲಾಗ್ ಮುಖಂಡ ಚಲಪತಿ, ತಾಜೀನ್, ಚೌಡಮ್ಮ, ಮುಬಾರಕ್, ರಮಣಪ್ಪ, ಶಂಕರಪ್ಪ, ಲಾವಣ್ಯ, ಶ್ವೇತಾ, ಅಂಜಲಿ, ಲಕ್ಷ್ಮಮ್ಮ, ರೆಡ್ಡಮ್ಮ, ಅರುಣಮ್ಮ ಮತ್ತಿತರರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-16-1049891749</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>