<p><strong>ಚಿಕ್ಕಬಳ್ಳಾಪುರ:</strong> ಬಾಗೇಪಲ್ಲಿ ಕ್ಷೇತ್ರದಲ್ಲಿ ಎಸ್.ಎನ್ ಸುಬ್ಬಾರೆಡ್ಡಿ ಶಾಸಕರಾಗಿ ಆಯ್ಕೆಯಾಗಿದ್ದನ್ನು ಹೈಕೋರ್ಟ್ ಅಸಿಂಧುಗೊಳಿಸಿರುವುದನ್ನು ಸಿಪಿಎಂ ಸ್ವಾಗತಿಸಿದೆ. ಈ ಕ್ಷೇತ್ರಕ್ಕೆ ತಕ್ಷಣವೇ ಉಪ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದೆ.</p>.<p>ನಗರದಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಪಿಎಂ ಮುಖಂಡ ಡಾ.ಅನಿಲ್ ಕುಮಾರ್, ಚುನಾವಣಾ ಆಯೋಗವು ಈ ಕ್ಷೇತ್ರಕ್ಕೆ ತಕ್ಷಣವೇ ಚುನಾವಣೆ ನಡೆಸಬೇಕು. ಸುಬ್ಬಾರೆಡ್ಡಿ ಅವರ ಅಕ್ರಮ ಆಸ್ತಿ ಮತ್ತು ಆದಾಯದ ವಿಚಾರವಾಗಿ ಸಿಪಿಎಂ ಈ ಹಿಂದಿನಿಂದಲೂ ಜನರಿಗೆ ಹೇಳುತ್ತಲೇ ಬಂದಿದೆ ಎಂದರು.</p>.<p>ನೈಜ ಆದಾಯ ಮತ್ತು ಆಸ್ತಿಗಳ ಬಗ್ಗೆ ಚುನಾವಣಾ ಆಯೋಗಕ್ಕೆ ಸರಿಯಾದ ಮಾಹಿತಿ ನೀಡದೆ ವಂಚಿಸಿದ್ದಾರೆ. ಇದು ಹೈಕೋರ್ಟ್ ತೀರ್ಪಿನಿಂದ ಸಾಬೀತಾಗಿದೆ. ಚುನಾವಣಾ ಆಯೋಗವನ್ನು ದಾರಿ ತಪ್ಪಿಸಿರುವ ಸುಬ್ಬಾರೆಡ್ಡಿ ಅವರ ಮೇಲೆ ತಕ್ಷಣ ಕಾನೂನು ಕ್ರಮ ಜರುಗಿಸಬೇಕು ಎಂದರು.</p>.<p>ರಾಜ್ಯ ಸರ್ಕಾರ ಶಾಸಕರಾಗಿ ಅವರು ಪಡೆದ ಎಲ್ಲ ಹಣಕಾಸು ಮತ್ತಿತರೆ ಸೌಲಭ್ಯಗಳನ್ನು ವಾಪಸ್ ಪಡೆಯಬೇಕು. ಅದೇ ರೀತಿ ಇಂತಹವರನ್ನು ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನಾಗಿಸಿದ್ದಕ್ಕೆ ಬಾಗೇಪಲ್ಲಿ ಕ್ಷೇತ್ರದ ಮತದಾರರಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.</p>.<p>ಸುಬ್ಬಾರೆಡ್ಡಿ ಈ ಕ್ಷೇತ್ರದಲ್ಲಿ ಸ್ಪರ್ಧಿಸಿದ ಮೊದಲ ಚುನಾವಣೆಯಿಂದಲೂ ತಮ್ಮ ಅಕ್ರಮ ಬಂಡವಾಳ ಹೂಡುತ್ತ ಕ್ಷೇತ್ರದ ಮತದಾರರನ್ನು ಭ್ರಷ್ಟಗೊಳಿಸಿದ್ದಾರೆ. ಇದು ಗುಟ್ಟಾದ ವಿಚಾರವಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಆ ಪಕ್ಷದ ಅಭ್ಯರ್ಥಿ ಕೂಡಾ ವ್ಯಾಪಕವಾದ ಅಕ್ರಮ ಬಂಡವಾಳ ತೊಡಗಿಸಿ ಮತದಾರರನ್ನು ಭ್ರಷ್ಟಗೊಳಿಸಿದ್ದರು. ಇದೆಲ್ಲ ಕ್ಷೇತ್ರದ ಜನರಿಗೆ ತಿಳಿದಿರುವ ವಿಚಾರ ಎಂದು ಹೇಳಿದರು.</p>.<p>ಸಿಪಿಎಂ ರಾಜ್ಯ ಸಮಿತಿ ಸದಸ್ಯ ಮುನಿವೆಂಕಟಪ್ಪ ಎಂ.ಪಿ ಮಾತನಾಡಿ, ಸಿಪಿಎಂನಿಂದ ಬಾಗೇಪಲ್ಲಿಯಲ್ಲಿ ಜಿ.ವಿ. ಶ್ರೀರಾಮ ರೆಡ್ಡಿ ಶಾಸಕರಾಗಿದ್ದ ವೇಳೆ ನಡೆದ ಅಭಿವೃದ್ಧಿ ಕಾರ್ಯಗಳು ಕಣ್ಣಿಗೆ ಕಟ್ಟುವಂತಿದೆ. ಸುಬ್ಬಾರೆಡ್ಡಿ ಶಾಸಕರಾಗಿದ್ದಾಗ ಯಾವ ರೀತಿ ಅಭಿವೃದ್ಧಿ ಆಗಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದರು.</p>.<p>ಪಕ್ಷದ ಮುಖಂಡ ಜಿ.ಸಿದ್ದಗಂಗಪ್ಪ, ಬಿ.ಎನ್.ಮುನಿಕೃಷ್ಣಪ್ಪ, ಚನ್ನರಾಯಪ್ಪ, ಜಯರಾಮರೆಡ್ಡಿ, ರಘುರಾಮರೆಡ್ಡಿ, ಬೈರಾರೆಡ್ಡಿ, ಡಿ.ಟಿ ಮುನಿಸ್ವಾಮಿ, ಅಶ್ವತ್ಥನಾರಾಯಣ, ರಮಣ ಮಾಸ್ಟರ್, ಬೈರಾರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಬಾಗೇಪಲ್ಲಿ ಕ್ಷೇತ್ರದಲ್ಲಿ ಎಸ್.ಎನ್ ಸುಬ್ಬಾರೆಡ್ಡಿ ಶಾಸಕರಾಗಿ ಆಯ್ಕೆಯಾಗಿದ್ದನ್ನು ಹೈಕೋರ್ಟ್ ಅಸಿಂಧುಗೊಳಿಸಿರುವುದನ್ನು ಸಿಪಿಎಂ ಸ್ವಾಗತಿಸಿದೆ. ಈ ಕ್ಷೇತ್ರಕ್ಕೆ ತಕ್ಷಣವೇ ಉಪ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದೆ.</p>.<p>ನಗರದಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಪಿಎಂ ಮುಖಂಡ ಡಾ.ಅನಿಲ್ ಕುಮಾರ್, ಚುನಾವಣಾ ಆಯೋಗವು ಈ ಕ್ಷೇತ್ರಕ್ಕೆ ತಕ್ಷಣವೇ ಚುನಾವಣೆ ನಡೆಸಬೇಕು. ಸುಬ್ಬಾರೆಡ್ಡಿ ಅವರ ಅಕ್ರಮ ಆಸ್ತಿ ಮತ್ತು ಆದಾಯದ ವಿಚಾರವಾಗಿ ಸಿಪಿಎಂ ಈ ಹಿಂದಿನಿಂದಲೂ ಜನರಿಗೆ ಹೇಳುತ್ತಲೇ ಬಂದಿದೆ ಎಂದರು.</p>.<p>ನೈಜ ಆದಾಯ ಮತ್ತು ಆಸ್ತಿಗಳ ಬಗ್ಗೆ ಚುನಾವಣಾ ಆಯೋಗಕ್ಕೆ ಸರಿಯಾದ ಮಾಹಿತಿ ನೀಡದೆ ವಂಚಿಸಿದ್ದಾರೆ. ಇದು ಹೈಕೋರ್ಟ್ ತೀರ್ಪಿನಿಂದ ಸಾಬೀತಾಗಿದೆ. ಚುನಾವಣಾ ಆಯೋಗವನ್ನು ದಾರಿ ತಪ್ಪಿಸಿರುವ ಸುಬ್ಬಾರೆಡ್ಡಿ ಅವರ ಮೇಲೆ ತಕ್ಷಣ ಕಾನೂನು ಕ್ರಮ ಜರುಗಿಸಬೇಕು ಎಂದರು.</p>.<p>ರಾಜ್ಯ ಸರ್ಕಾರ ಶಾಸಕರಾಗಿ ಅವರು ಪಡೆದ ಎಲ್ಲ ಹಣಕಾಸು ಮತ್ತಿತರೆ ಸೌಲಭ್ಯಗಳನ್ನು ವಾಪಸ್ ಪಡೆಯಬೇಕು. ಅದೇ ರೀತಿ ಇಂತಹವರನ್ನು ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನಾಗಿಸಿದ್ದಕ್ಕೆ ಬಾಗೇಪಲ್ಲಿ ಕ್ಷೇತ್ರದ ಮತದಾರರಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.</p>.<p>ಸುಬ್ಬಾರೆಡ್ಡಿ ಈ ಕ್ಷೇತ್ರದಲ್ಲಿ ಸ್ಪರ್ಧಿಸಿದ ಮೊದಲ ಚುನಾವಣೆಯಿಂದಲೂ ತಮ್ಮ ಅಕ್ರಮ ಬಂಡವಾಳ ಹೂಡುತ್ತ ಕ್ಷೇತ್ರದ ಮತದಾರರನ್ನು ಭ್ರಷ್ಟಗೊಳಿಸಿದ್ದಾರೆ. ಇದು ಗುಟ್ಟಾದ ವಿಚಾರವಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಆ ಪಕ್ಷದ ಅಭ್ಯರ್ಥಿ ಕೂಡಾ ವ್ಯಾಪಕವಾದ ಅಕ್ರಮ ಬಂಡವಾಳ ತೊಡಗಿಸಿ ಮತದಾರರನ್ನು ಭ್ರಷ್ಟಗೊಳಿಸಿದ್ದರು. ಇದೆಲ್ಲ ಕ್ಷೇತ್ರದ ಜನರಿಗೆ ತಿಳಿದಿರುವ ವಿಚಾರ ಎಂದು ಹೇಳಿದರು.</p>.<p>ಸಿಪಿಎಂ ರಾಜ್ಯ ಸಮಿತಿ ಸದಸ್ಯ ಮುನಿವೆಂಕಟಪ್ಪ ಎಂ.ಪಿ ಮಾತನಾಡಿ, ಸಿಪಿಎಂನಿಂದ ಬಾಗೇಪಲ್ಲಿಯಲ್ಲಿ ಜಿ.ವಿ. ಶ್ರೀರಾಮ ರೆಡ್ಡಿ ಶಾಸಕರಾಗಿದ್ದ ವೇಳೆ ನಡೆದ ಅಭಿವೃದ್ಧಿ ಕಾರ್ಯಗಳು ಕಣ್ಣಿಗೆ ಕಟ್ಟುವಂತಿದೆ. ಸುಬ್ಬಾರೆಡ್ಡಿ ಶಾಸಕರಾಗಿದ್ದಾಗ ಯಾವ ರೀತಿ ಅಭಿವೃದ್ಧಿ ಆಗಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದರು.</p>.<p>ಪಕ್ಷದ ಮುಖಂಡ ಜಿ.ಸಿದ್ದಗಂಗಪ್ಪ, ಬಿ.ಎನ್.ಮುನಿಕೃಷ್ಣಪ್ಪ, ಚನ್ನರಾಯಪ್ಪ, ಜಯರಾಮರೆಡ್ಡಿ, ರಘುರಾಮರೆಡ್ಡಿ, ಬೈರಾರೆಡ್ಡಿ, ಡಿ.ಟಿ ಮುನಿಸ್ವಾಮಿ, ಅಶ್ವತ್ಥನಾರಾಯಣ, ರಮಣ ಮಾಸ್ಟರ್, ಬೈರಾರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>