<p><strong>ಬಾಗೇಪಲ್ಲಿ:</strong> ಪಟ್ಟಣದ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ನಡೆದ ಲೋಕಆದಾಲತ್ನಲ್ಲಿ 1,366 ಪ್ರಕರಣಗಳನ್ನು ಪರಸ್ಪರ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಡಿ.ಕೆ.ಮಂಜುನಾಥಾಚಾರಿ ತಿಳಿಸಿದರು.</p>.<p>ಪಟ್ಟಣದ ಸಿವಿಲ್ ನ್ಯಾಯಾಲಯದಲ್ಲಿ ಇತ್ತೀಚೆಗೆ ರಾಷ್ಟ್ರೀಯ ಲೋಕ ಆದಾಲತ್ನಲ್ಲಿ ಉದ್ಘಾಟಿಸಿ ಮಾತನಾಡಿ, ಆದಾಲತ್ನಲ್ಲಿ 20 ಕ್ರಿಮಿನಲ್ ಪ್ರಕರಣ, 13 ಚೆಕ್ಬೌನ್ಸ್ ಪ್ರಕರಣ, ಬ್ಯಾಂಕ್ಗಳ 5 ಪ್ರಕರಣ ಸೇರಿದತೆ ವಿವಿಧ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ₹92,39,000 ಹಣಕಾಸಿನ ವಿವಾದವನ್ನು ಇತ್ಯರ್ಥ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಕಕ್ಷಿದಾರರು ನ್ಯಾಯಾಲಯದ ಪ್ರಕರಣಗಳನ್ನು ಪರಸ್ಪರ ರಾಜೀ ಸಂಧಾನ ಮುಲಕ ಇತ್ಯರ್ಥ ಮಾಡಿಕೊಂಡರೆ, ಸಮಯ, ಹಣ, ಮಾನಸಿಕ ಒತ್ತಡಗಳಿಂದ ದೂರ ಇರಬಹುದು. ನ್ಯಾಯಾಂಗ ವ್ಯವಸ್ಥೆಯ ಮೇಲಿನ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಲೋಕ ಆದಾಲತ್ ಮಾಡಲಾಗುತ್ತಿದೆ ಎಂದರು.</p>.<p>ಆದಾಲತ್ನಲ್ಲಿ ಉಚಿತವಾಗಿ, ತ್ವರಿತವಾಗಿ ನ್ಯಾಯ ಸಿಗುತ್ತದೆ. ಯಾವುದೇ ಪ್ರಕರಣಗಳನ್ನು ಪರಸ್ಪರ ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಸಹಾಯಕ ಸರ್ಕಾರಿ ಅಭಿಯೋಜಕಿ ಸುಮಾ, ವಕೀಲರ ಸಂಘದ ಉಪಾಧ್ಯಕ್ಷ ಸಿ.ರವಿ, ಕಾರ್ಯದರ್ಶಿ ಜಯಪ್ಪ, ಹಿರಿಯ ವಕೀಲರಾದ ಅಪ್ಪಸ್ವಾಮಿ, ಅಲ್ಲಾಬಕಾಶ್, ಕರುಣಾಸಾಗರರೆಡ್ಡಿ, ಜೆ.ಎನ್.ನಂಜಪ್ಪ, ಫಯಾಜ್ ಅಹಮದ್, ನರಸಿಂಹರೆಡ್ಡಿ, ವಿ.ನಾರಾಯಣ, ಎ.ನಂಜುಂಡಪ್ಪ, ವೆಂಕಟನಾರಾಯಣ, ಚಂದ್ರಶೇಖರ್, ನಾಗಭೂಷಣನಾಯಕ್, ಬಾಲುನಾಯಕ್, ಬಾಲಸರಸ್ವತಿ, ಪ್ರಮೀಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ:</strong> ಪಟ್ಟಣದ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ನಡೆದ ಲೋಕಆದಾಲತ್ನಲ್ಲಿ 1,366 ಪ್ರಕರಣಗಳನ್ನು ಪರಸ್ಪರ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಡಿ.ಕೆ.ಮಂಜುನಾಥಾಚಾರಿ ತಿಳಿಸಿದರು.</p>.<p>ಪಟ್ಟಣದ ಸಿವಿಲ್ ನ್ಯಾಯಾಲಯದಲ್ಲಿ ಇತ್ತೀಚೆಗೆ ರಾಷ್ಟ್ರೀಯ ಲೋಕ ಆದಾಲತ್ನಲ್ಲಿ ಉದ್ಘಾಟಿಸಿ ಮಾತನಾಡಿ, ಆದಾಲತ್ನಲ್ಲಿ 20 ಕ್ರಿಮಿನಲ್ ಪ್ರಕರಣ, 13 ಚೆಕ್ಬೌನ್ಸ್ ಪ್ರಕರಣ, ಬ್ಯಾಂಕ್ಗಳ 5 ಪ್ರಕರಣ ಸೇರಿದತೆ ವಿವಿಧ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ₹92,39,000 ಹಣಕಾಸಿನ ವಿವಾದವನ್ನು ಇತ್ಯರ್ಥ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಕಕ್ಷಿದಾರರು ನ್ಯಾಯಾಲಯದ ಪ್ರಕರಣಗಳನ್ನು ಪರಸ್ಪರ ರಾಜೀ ಸಂಧಾನ ಮುಲಕ ಇತ್ಯರ್ಥ ಮಾಡಿಕೊಂಡರೆ, ಸಮಯ, ಹಣ, ಮಾನಸಿಕ ಒತ್ತಡಗಳಿಂದ ದೂರ ಇರಬಹುದು. ನ್ಯಾಯಾಂಗ ವ್ಯವಸ್ಥೆಯ ಮೇಲಿನ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಲೋಕ ಆದಾಲತ್ ಮಾಡಲಾಗುತ್ತಿದೆ ಎಂದರು.</p>.<p>ಆದಾಲತ್ನಲ್ಲಿ ಉಚಿತವಾಗಿ, ತ್ವರಿತವಾಗಿ ನ್ಯಾಯ ಸಿಗುತ್ತದೆ. ಯಾವುದೇ ಪ್ರಕರಣಗಳನ್ನು ಪರಸ್ಪರ ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಸಹಾಯಕ ಸರ್ಕಾರಿ ಅಭಿಯೋಜಕಿ ಸುಮಾ, ವಕೀಲರ ಸಂಘದ ಉಪಾಧ್ಯಕ್ಷ ಸಿ.ರವಿ, ಕಾರ್ಯದರ್ಶಿ ಜಯಪ್ಪ, ಹಿರಿಯ ವಕೀಲರಾದ ಅಪ್ಪಸ್ವಾಮಿ, ಅಲ್ಲಾಬಕಾಶ್, ಕರುಣಾಸಾಗರರೆಡ್ಡಿ, ಜೆ.ಎನ್.ನಂಜಪ್ಪ, ಫಯಾಜ್ ಅಹಮದ್, ನರಸಿಂಹರೆಡ್ಡಿ, ವಿ.ನಾರಾಯಣ, ಎ.ನಂಜುಂಡಪ್ಪ, ವೆಂಕಟನಾರಾಯಣ, ಚಂದ್ರಶೇಖರ್, ನಾಗಭೂಷಣನಾಯಕ್, ಬಾಲುನಾಯಕ್, ಬಾಲಸರಸ್ವತಿ, ಪ್ರಮೀಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>