<p><strong>ಚಿಕ್ಕಬಳ್ಳಾಪುರ</strong>: ಈ ಬಾಗೇಪಲ್ಲಿ ಭಾಗ್ಯನಗರವಾಗಲಿ. ಎಲ್ಲ ಭಾಗ್ಯವು ಇಲ್ಲಿ ತುಂಬಿಕೊಳ್ಳಲಿ...</p>.<p>–1987ರ ಸೆ.9ರಂದು ಬಾಗೇಪಲ್ಲಿಯ ಬಾಲಕಿಯರ ಸರ್ಕಾರಿ ಶಾಲೆ ಆವರಣದಲ್ಲಿ ಕನ್ನಡ ಕಲಾ ಸಂಘ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವರನಟ ರಾಜ್ಕುಮಾರ್ ಅವರು ಹೀಗೆ ಆಶಿಸಿದ್ದರು. ಅವರ ಆಶಯ ಮೂರು ಮುಕ್ಕಾಲು ದಶಕದ ನಂತರ ಈಡೇರುವ ನಿರೀಕ್ಷೆ ಕಾಣುತ್ತಿದೆ.</p>.<p>ಬಾಗೇಪಲ್ಲಿ ಹೆಸರನ್ನು ಭಾಗ್ಯನಗರ ಎಂದು ಬದಲಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲು ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸರ್ಕಾರಕ್ಕೆ ಕೋರಿದ್ದರು.</p>.<p>ಗುರುವಾರ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆಯಲ್ಲಿ ‘ಭಾಗ್ಯನಗರ’ ಎಂದು ಬದಲಿಸುವ ಸಂಬಂಧ ಕಂದಾಯ ಇಲಾಖೆಯು ಟಿಪ್ಪಣಿ ಲಗತ್ತಿಸಿದೆ. ಸಚಿವ ಸಂಪುಟದ ಕಾರ್ಯಸೂಚಿ ಪಟ್ಟಿಯಲ್ಲಿ ಈ ವಿಷಯವೂ ಅಡಕವಾಗಿದೆ. ಈಗ ಸಂಪುಟ ಸಭೆ ಬೆಂಗಳೂರಿಗೆ ಸ್ಥಳಾಂತರವಾಗಿದ್ದು, ಕಾರ್ಯಸೂಚಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.</p>.<p>ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ಬಾಗೇಪಲ್ಲಿಯಲ್ಲಿ ತೆಲುಗು ಭಾಷೆಯ ದಟ್ಟ ಪ್ರಭಾವವಿದೆ. ಹೆಸರು ಬದಲಾವಣೆಗೆ ಆಗ್ರಹಿಸಿ ಹಲವು ದಶಕಗಳಿಂದ ಗಡಿ ತಾಲ್ಲೂಕಿನಲ್ಲಿ ಹೋರಾಟಗಳು ನಡೆದಿವೆ. ಭಾಗ್ಯನಗರ ಹೋರಾಟ ಸಮಿತಿ ಸಹ ಅಸ್ತಿತ್ವಕ್ಕೆ ಬಂದಿತ್ತು.</p>.<p>2021ರಲ್ಲಿ ಹೆಸರು ಬದಲಾವಣೆ ಸಂಬಂಧ ಶಾಸಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ‘ಬಾಗೇಪಲ್ಲಿಯನ್ನು ಭಾಗ್ಯನಗರ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ 2021ರ ಜನವರಿಯಲ್ಲಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು. </p>.<p>ಆದರೆ, ಆ ನಂತರ ಯಾವುದೇ ಪ್ರಕ್ರಿಯೆಗಳೂ ನಡೆಯಲಿಲ್ಲ. ಸರ್ಕಾರದಿಂದ ಅಧಿಕೃತ ಆದೇಶವೂ ಹೊರ ಬೀಳಲಿಲ್ಲ. ಈಗ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಣಯ ತೆಗೆದುಕೊಳ್ಳಲಿದೆ ಎನ್ನುವ ಆಶಾಭಾವನೆ ಬಾಗೇಪಲ್ಲಿ ಜನರಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಈ ಬಾಗೇಪಲ್ಲಿ ಭಾಗ್ಯನಗರವಾಗಲಿ. ಎಲ್ಲ ಭಾಗ್ಯವು ಇಲ್ಲಿ ತುಂಬಿಕೊಳ್ಳಲಿ...</p>.<p>–1987ರ ಸೆ.9ರಂದು ಬಾಗೇಪಲ್ಲಿಯ ಬಾಲಕಿಯರ ಸರ್ಕಾರಿ ಶಾಲೆ ಆವರಣದಲ್ಲಿ ಕನ್ನಡ ಕಲಾ ಸಂಘ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವರನಟ ರಾಜ್ಕುಮಾರ್ ಅವರು ಹೀಗೆ ಆಶಿಸಿದ್ದರು. ಅವರ ಆಶಯ ಮೂರು ಮುಕ್ಕಾಲು ದಶಕದ ನಂತರ ಈಡೇರುವ ನಿರೀಕ್ಷೆ ಕಾಣುತ್ತಿದೆ.</p>.<p>ಬಾಗೇಪಲ್ಲಿ ಹೆಸರನ್ನು ಭಾಗ್ಯನಗರ ಎಂದು ಬದಲಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲು ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸರ್ಕಾರಕ್ಕೆ ಕೋರಿದ್ದರು.</p>.<p>ಗುರುವಾರ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆಯಲ್ಲಿ ‘ಭಾಗ್ಯನಗರ’ ಎಂದು ಬದಲಿಸುವ ಸಂಬಂಧ ಕಂದಾಯ ಇಲಾಖೆಯು ಟಿಪ್ಪಣಿ ಲಗತ್ತಿಸಿದೆ. ಸಚಿವ ಸಂಪುಟದ ಕಾರ್ಯಸೂಚಿ ಪಟ್ಟಿಯಲ್ಲಿ ಈ ವಿಷಯವೂ ಅಡಕವಾಗಿದೆ. ಈಗ ಸಂಪುಟ ಸಭೆ ಬೆಂಗಳೂರಿಗೆ ಸ್ಥಳಾಂತರವಾಗಿದ್ದು, ಕಾರ್ಯಸೂಚಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.</p>.<p>ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ಬಾಗೇಪಲ್ಲಿಯಲ್ಲಿ ತೆಲುಗು ಭಾಷೆಯ ದಟ್ಟ ಪ್ರಭಾವವಿದೆ. ಹೆಸರು ಬದಲಾವಣೆಗೆ ಆಗ್ರಹಿಸಿ ಹಲವು ದಶಕಗಳಿಂದ ಗಡಿ ತಾಲ್ಲೂಕಿನಲ್ಲಿ ಹೋರಾಟಗಳು ನಡೆದಿವೆ. ಭಾಗ್ಯನಗರ ಹೋರಾಟ ಸಮಿತಿ ಸಹ ಅಸ್ತಿತ್ವಕ್ಕೆ ಬಂದಿತ್ತು.</p>.<p>2021ರಲ್ಲಿ ಹೆಸರು ಬದಲಾವಣೆ ಸಂಬಂಧ ಶಾಸಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ‘ಬಾಗೇಪಲ್ಲಿಯನ್ನು ಭಾಗ್ಯನಗರ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ 2021ರ ಜನವರಿಯಲ್ಲಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು. </p>.<p>ಆದರೆ, ಆ ನಂತರ ಯಾವುದೇ ಪ್ರಕ್ರಿಯೆಗಳೂ ನಡೆಯಲಿಲ್ಲ. ಸರ್ಕಾರದಿಂದ ಅಧಿಕೃತ ಆದೇಶವೂ ಹೊರ ಬೀಳಲಿಲ್ಲ. ಈಗ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಣಯ ತೆಗೆದುಕೊಳ್ಳಲಿದೆ ಎನ್ನುವ ಆಶಾಭಾವನೆ ಬಾಗೇಪಲ್ಲಿ ಜನರಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>